AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

ದಳಪತಿ ವಿಜಯ್​ ನಟನೆಯ ‘ಲಿಯೋ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ತ್ರಿಷಾ ಅವರು ವಿಜಯ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಮನ್ಸೂರ್​ ಅಲಿ ಖಾನ್​ ವಿಲನ್ ಪಾತ್ರದಲ್ಲಿ ನಟಿಸಿದ್ದರು.

ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್
ತ್ರಿಷಾ-ಮನ್ಸೂರ್
ರಾಜೇಶ್ ದುಗ್ಗುಮನೆ
|

Updated on:Nov 24, 2023 | 2:00 PM

Share

‘ತ್ರಿಷಾ (Trisha Krishnan) ಅವರನ್ನು ರೇಪ್ ಮಾಡುವ ದೃಶ್ಯ ಸಿಗಲಿಲ್ಲ’ ಎಂಬರ್ಥದಲ್ಲಿ ಮಾತನಾಡುವ ಮೂಲಕ ವಿವಾದ ಸೃಷ್ಟಿ ಮಾಡಿದ್ದ ನಟ ಮನ್ಸೂರ್ ಅಲಿ ಖಾನ್ ಅವರು ಕೊನೆಗೂ ಕ್ಷಮೆ ಕೇಳಿದ್ದಾರೆ. ನಟಿ ತ್ರಿಷಾ ಬಗ್ಗೆ ನೀಡಿದ್ದ ಈ ಹೇಳಿಕೆಗೆ ಸಂಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಚೆನ್ನೈ ಪೊಲೀಸರು ಮನ್ಸೂರ್ ಅವರನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ್ದರು. ಈ ಬೆನ್ನಲ್ಲೇ ಮನ್ಸೂರ್ ಅಲಿ ಖಾನ್ ಅವರು ಕ್ಷಮೆ ಕೇಳಿದ್ದಾರೆ.

ದಳಪತಿ ವಿಜಯ್​ ನಟನೆಯ ‘ಲಿಯೋ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ತ್ರಿಷಾ ಅವರು ವಿಜಯ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಮನ್ಸೂರ್​ ಅಲಿ ಖಾನ್​ ವಿಲನ್ ಪಾತ್ರದಲ್ಲಿ ನಟಿಸಿದ್ದರು. ‘ತ್ರಿಷಾ ಜೊತೆ ನಟಿಸುತ್ತೇನೆ ಎಂದಾಗ ಬೆಡ್​ರೂಂ ದೃಶ್ಯ ಇರಬಹುದು ಎಂದು ನಾನು ಭಾವಿಸಿದೆ. ಈ ಮೊದಲ ಸಿನಿಮಾಗಳಲ್ಲಿ ನಟಿಯರನ್ನು ಬೆಡ್​ರೂಂಗೆ ಕರೆದುಕೊಂಡು ಹೋಗುವ ದೃಶ್ಯ ಇತ್ತು. ಈ ಸಿನಿಮಾದಲ್ಲೂ ಹಾಗೆಯೇ ಇರಬಹುದು ಎಂದುಕೊಂಡಿದ್ದೆ. ನಾನು ಹಲವು ರೇಪ್ ದೃಶ್ಯಗಳನ್ನು ಮಾಡಿದ್ದೇನೆ. ಅದು ನನಗೆ ಹೊಸದಲ್ಲ. ಆದರೆ, ಈ ಚಿತ್ರದಲ್ಲಿ ಅವರನ್ನು ನೋಡಲೂ ಅವಕಾಶ ಕೊಡಲಿಲ್ಲ’ ಎಂದಿದ್ದರು ಮನ್ಸೂರ್ ಅಲಿ ಖಾನ್.

ಇದನ್ನೂ ಓದಿ: ತ್ರಿಷಾ ಬಗ್ಗೆ ಕೀಳು ಹೇಳಿಕೆ ನೀಡಿದ ನಟ ಮನ್ಸೂರ್​ ಅಲಿ ಖಾನ್​ ವಿರುದ್ಧ ಲೈಂಗಿಕ ಕಿರುಕುಳದ ಕೇಸ್​ ದಾಖಲು

ಈಗ ವಿಚಾರಣೆ ಬಳಿಕ ಮನ್ಸೂರ್ ಅವರು ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ.  ‘ಸಹನಟಿ ತ್ರಿಷಾ ಅವರೇ ನನ್ನನ್ನು ಕ್ಷಮಿಸಿ’ ಎಂದು ಮನ್ಸೂರ್ ಹೇಳಿರುವುದಾಗಿ ಟ್ರೇಡ್ ಅನಲಿಸ್ಟ್​ ರಮೇಶ್ ಬಾಲಾ ಟ್ವೀಟ್ ಮಾಡಿದ್ದಾರೆ.

ಪ್ರತಿಕ್ರಿಯೆ ನೀಡಿದ್ದ ತ್ರಿಷಾ

ಮನ್ಸೂರ್​ ಅಲಿ ಖಾನ್ ಹೇಳಿಕೆ ಬಗ್ಗೆ ತ್ರಿಷಾ ಪ್ರತಿಕ್ರಿಯೆ ನೀಡಿದ್ದರು. ಅವರ ಮಾತು ತ್ರಿಷಾ ಗಮನಕ್ಕೆ ಬಂದಿದೆ. ಈ ಹೇಳಿಕೆಯನ್ನು ಅವರು ಖಂಡಿಸಿದ್ದಾರೆ. ಜೊತೆಗೆ ಮುಂದೆಂದೂ ಅವರ ಜೊತೆ ನಟಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ ತ್ರಿಷಾ. ಇಂಥ ಜನರು ಇಡೀ ಮನುಷ್ಯಕುಲಕ್ಕೆ ಕೆಟ್ಟ ಹೆಸರು ತರುತ್ತಾರೆ ಎಂದು ತ್ರಿಷಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:21 pm, Fri, 24 November 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ