AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಬಿಗ್ ಬಜೆಟ್ ಚಿತ್ರಕ್ಕೆ ಸಹಿ ಹಾಕಿದ ನಟಿ ತ್ರಿಶಾ; ಹೀರೋ ಯಾರು?

ತ್ರಿಶಾ ಅವರು ದಳಪತಿ ವಿಜಯ್ ನಟನೆಯ ‘ಲಿಯೋ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಬಹುತೇಕ ಪೂರ್ಣಗೊಂಡಿದೆ ಎನ್ನಲಾಗಿದೆ. ಕಾಶ್ಮೀರ ಮೊದಲಾದ ಕಡೆಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ. ಇಷ್ಟೇ ಅಲ್ಲ, ಅಜಿತ್ ನಟನೆಯ ಸಿನಿಮಾಗೂ ಅವರು ನಾಯಕಿ. ಈ ಚಿತ್ರದ ಶೂಟಿಂಗ್ ಸದ್ಯ ದುಬೈನಲ್ಲಿ ನಡೆಯುತ್ತಿದೆ. ಈಗ ಕಮಲ್ ಹಾಸನ್ ಜೊತೆ ಅವರು ತೆರೆ ಹಂಚಿಕೊಳ್ಳಲಿದ್ದಾರೆ.

ಮತ್ತೊಂದು ಬಿಗ್ ಬಜೆಟ್ ಚಿತ್ರಕ್ಕೆ ಸಹಿ ಹಾಕಿದ ನಟಿ ತ್ರಿಶಾ; ಹೀರೋ ಯಾರು?
ತ್ರಿಶಾ ಕೃಷ್ಣನ್
Follow us
ರಾಜೇಶ್ ದುಗ್ಗುಮನೆ
|

Updated on:Sep 13, 2023 | 10:41 AM

ನಟಿ ತ್ರಿಶಾ (Trisha Krishnan) ಅವರು ಚಿತ್ರರಂಗಕ್ಕೆ ಬಂದು ಹಲವು ವರ್ಷ ಕಳೆದಿದೆ. ಹತ್ತು ಹಲವು ಬಗೆಯ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ತ್ರಿಶಾಗೆ ಈಗಲೂ ಚಿತ್ರರಂಗದಲ್ಲಿ ಬೇಡಿಕೆ ಇದೆ. ತಮಗೆ ಒಪ್ಪುವಂಥ ಸಿನಿಮಾ ಮಾಡಿ ಅವರು ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾದಲ್ಲಿ ಅವರ ನಟನೆ ನೋಡಿ ಜನರು ಮರುಳಾದರು. ಈಗ ಅವರು ದೊಡ್ಡ ಬಜೆಟ್ ಚಿತ್ರ ಒಂದಕ್ಕೆ ಸಹಿ ಹಾಕಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

ತ್ರಿಶಾ ಅವರು ದಳಪತಿ ವಿಜಯ್ ನಟನೆಯ ‘ಲಿಯೋ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಬಹುತೇಕ ಪೂರ್ಣಗೊಂಡಿದೆ ಎನ್ನಲಾಗಿದೆ. ಕಾಶ್ಮೀರ ಮೊದಲಾದ ಕಡೆಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ. ಇಷ್ಟೇ ಅಲ್ಲ, ಅಜಿತ್ ನಟನೆಯ ‘ವಿದಮುಯರ್ಚಿ’ ಸಿನಿಮಾಗೂ ಅವರು ನಾಯಕಿ. ಈ ಚಿತ್ರದ ಶೂಟಿಂಗ್ ಸದ್ಯ ದುಬೈನಲ್ಲಿ ನಡೆಯುತ್ತಿದೆ. ಈಗ ಕಮಲ್ ಹಾಸನ್ ಜೊತೆ ಅವರು ತೆರೆ ಹಂಚಿಕೊಳ್ಳಲಿದ್ದಾರೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ.

ಕಮಲ್ ಹಾಸನ್ ಹಾಗೂ ನಿರ್ದೇಶಕ ಮಣಿರತ್ನಂ ಅವರು ಹೊಸ ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ ಎನ್ನಲಾಗಿದೆ. ಇದು ಕಮಲ್ ಹಾಸನ್ ಅವರ 234ನೇ ಚಿತ್ರ ಆಗಿರಲಿದೆ. ಈ ಸಿನಿಮಾಗೆ ತ್ರಿಶಾ ನಾಯಕಿ ಎನ್ನುವ ವಿಚಾರ ಗೊತ್ತಾಗಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ಚಿತ್ರಕ್ಕೆ ಕಮಲ್ ಹಾಸನ್ ಅವರೇ ಬಂಡವಾಳ ಹೂಡುತ್ತಿದ್ದಾರೆ.

ಇತ್ತೀಚೆಗೆ ಕಮಲ್ ಹಾಸನ್ ಅವರು ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಈ ವಿಡಿಯೋದಲ್ಲಿ ಅವರು ಶೂಟಿಂಗ್ ತರಬೇತಿ ಪಡೆಯುತ್ತಿರುವಿದು ಕಂಡುಬಂದಿತ್ತು. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎನ್ನಲಾಗುತ್ತಿದೆ. ತ್ರಿಶಾ ನಟನೆಯ ‘ಪೊನ್ನಿಯಿನ್ ಸೆಲ್ವನ್’ ಚಿತ್ರಕ್ಕೂ ಮಣಿರತ್ನಂ ಅವರ ನಿರ್ದೇಶನ ಇತ್ತು.

ಇದನ್ನೂ ಓದಿ: ಸೀರೆಯುಟ್ಟು ಮಿಂಚಿದ ‘ಪವರ್​ ಸ್ಟಾರ್​’ ಸಿನಿಮಾದ ಬೆಡಗಿ ತ್ರಿಶಾ ಕೃಷ್ಣನ್​​

2014ರಲ್ಲಿ ರಿಲೀಸ್ ಆದ ‘ಪವರ್’ ಚಿತ್ರಕ್ಕೆ ತ್ರಿಶಾ ನಾಯಕಿ ಆಗಿದ್ದರು. ಪುನೀತ್ ರಾಜ್​ಕುಮಾರ್ ನಟನೆಯ ಈ ಸಿನಿಮಾದಲ್ಲಿ ಅವರು ಮಿಂಚಿದರು. ‘ದ್ವಿತ್ವ’ ಚಿತ್ರದಲ್ಲಿ ಪುನೀತ್ ಜೊತೆ ಅವರು ತೆರೆ ಹಂಚಿಕೊಳ್ಳಬೇಕಿತ್ತು. ಆದರೆ, ಪುನೀತ್ ನಿಧನದ ಬಳಿಕ ಸಿನಿಮಾ ನಿಂತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:24 am, Wed, 13 September 23

ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ