AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನದ ಪರೇಡ್ ವೇಳೆ ವಿಜಯ್ ಕುಟುಂಬದ ಜೊತೆ ಕಾಣಿಸಿಕೊಂಡ ತ್ರಿಷಾ

ನಟಿ ತ್ರಿಷಾ ಹಾಗೂ ದಳಪತಿ ವಿಜಯ್ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸ್ವಾತಂತ್ರ್ಯ ದಿನದ ಪರೇಡ್ ವೇಳೆ ವಿಜಯ್ ಕುಟುಂಬಸ್ಥರೊಂದಿಗೆ ತ್ರಿಷಾ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಚೆನ್ನೈನಲ್ಲಿ ನಡೆದ ಈ ಕಾರ್ಯಕ್ರಮದ ವಿಡಿಯೋ ವೈರಲ್ ಆಗಿದ್ದು, ಸಂಗೀತಾ ವಿಚ್ಛೇದನ ಅರ್ಜಿ ವಾಪಸ್ ಪಡೆದ ಬೆನ್ನಲ್ಲೇ ಈ ಘಟನೆ ಭಾರಿ ಕುತೂಹಲ ಮೂಡಿಸಿದೆ.

ಸ್ವಾತಂತ್ರ್ಯ ದಿನದ ಪರೇಡ್ ವೇಳೆ ವಿಜಯ್ ಕುಟುಂಬದ ಜೊತೆ ಕಾಣಿಸಿಕೊಂಡ ತ್ರಿಷಾ
ತ್ರಿಷಾ-ವಿಜಯ್
ರಾಜೇಶ್ ದುಗ್ಗುಮನೆ
|

Updated on: Aug 15, 2026 | 10:48 AM

Share

ಮುಖ್ಯಾಂಶಗಳು

  • ವಿಜಯ್ ಕುಟುಂಬದ ಜೊತೆ ವೇದಿಕೆಯಲ್ಲಿ ಮಿಂಚಿದ ನಟಿ ತ್ರಿಷಾ
  • ಸ್ವಾತಂತ್ರ್ಯ ದಿನದ ಪರೇಡ್‌ನಲ್ಲಿ ನಟ ವಿಜಯ್ ಸೆಲ್ಯೂಟ್ ರಹಸ್ಯ
  • ಸಂಗೀತಾ ಡಿವೋರ್ಸ್ ಅರ್ಜಿ ವಾಪಸ್ ಬೆನ್ನಲ್ಲೇ ವೈರಲ್ ಆಯ್ತು ವಿಡಿಯೋ

ನಟಿ ತ್ರಿಷಾ ಹಾಗೂ ವಿಜಯ್ ಸಂಬಂಧದ ಬಗ್ಗೆ ಚರ್ಚೆ ಆಗುತ್ತಿರುವುದು ಇಂದು ನಿನ್ನೆಯಿಂದ ಅಲ್ಲ. ಇತ್ತೀಚೆಗೆ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದೂ ಅಲ್ಲದೆ, ಪತಿಗೆ ನಟಿಯ ಜೊತೆ ಅನೈತಿಕ ಸಂಬಂಧ ಇದೆ ಆರೋಪಿಸಿದ್ದು ಚರ್ಚೆಯ ಕೇಂದ್ರ ಬಿಂದು ಆಯಿತು. ಆ ಬಳಿಕ ವಿಜಯ್ ಜೊತೆ ತ್ರಿಷಾ ಸಾಕಷ್ಟು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದು ಇದೆ. ಈಗ ತ್ರಿಷಾ ವಿಜಯ್ ಕುಟುಂಬದ ಜೊತೆ ಕಾಣಿಸಿಕೊಂಡು ಸುದ್ದಿ ಆಗಿದ್ದಾರೆ.

ದಳಪತಿ ವಿಜಯ್ ಅವರು ತಮಿಳುನಾಡಿನ ಸಿಎಂ. ಇಂದು ಚೆನ್ನೈನಲ್ಲಿ ಸ್ವಾತಂತ್ರ್ಯ ದಿನದ ಪರೇಡ್ ನಡೆದಿದೆ. ಈ ವೇಳೆ ವಿಜಯ್ ಅವರು ತೆರೆದ ವಾಹನದಲ್ಲಿ ನಿಂತು ಪೆರೇಡ್​​ನಲ್ಲಿ ನಿಂತವರಿಗೆ ಸೆಲ್ಯೂಟ್ ಮಾಡಿದ್ದಾರೆ. ಆಗ ವೇದಿಕೆಯಲ್ಲಿ ಕುಳಿತಿದ್ದ ವಿಜಯ್ ತಂದೆ-ತಾಯಿ ಹಾಗೂ ತ್ರಿಷಾ ತಿರುಗಿ ಸೆಲ್ಯೂಟ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಉದಯನಿಧಿ ಒಳ್ಳೆಯವರು, ಕೆಟ್ಟದಾಗಿ ಮಾತನಾಡೋ ಯೂಟ್ಯೂಬರ್​ಗಳ ಶಿಕ್ಷಿಸಿ’; ವಿಜಯ್​ಗೆ ವಿಶಾಲ್ ಬೇಡಿಕೆ

ಕೆಲವರು ವಿಜಯ್ ಅವರು ಸೆಲ್ಯೂಟ್ ಮಾಡಿದ್ದನ್ನು ತಪ್ಪಾಗಿ ಭಾವಿಸಿದ್ದಾರೆ. ‘ವಿಜಯ್ ಅವರು ತಂದೆ-ತಾಯಿ ಹಾಗೂ ತ್ರಿಷಾಗೆ ಸೆಲ್ಯೂಟ್ ಮಾಡಿದ್ದಾರೆ’ ಎಂದು ವಿಡಿಯೋ ವೈರಲ್ ಮಾಡಿದ್ದಾರೆ. ಆದರೆ, ಅಲ್ಲಿ ಅಸಲಿಯತ್ತೇ ಬೇರೆ ಇದೆ ಎಂದು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದನ್ನು ತಿದ್ದಿ ಹೇಳುವ ಪ್ರಯತ್ನ ಮಾಡಿದ್ದಾರೆ.

ವಿಜಯ್ ಅವರ ಪತ್ನಿ ಸಂಗೀತಾ ಲಂಡನ್​ ಅಲ್ಲಿ ವಾಸವಿದ್ದಾರೆ. ವಿಜಯ್ ಅವರಿಂದ ವಿಚ್ಛೇದನ ಬೇಕು ಎಂದು ಚೆನ್ನೈನ ಫ್ಯಾಮಿಲಿ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ಪದೇ ಪದೇ ಮುಂದಕ್ಕೆ ಹೋದ ಹಿನ್ನೆಲೆಯಲ್ಲಿ ಅವರು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ. ಇದರಿಂದ ವಿಜಯ್ ಹಾಗೂ ಸಂಗೀತಾ ಮಧ್ಯೆ ಎಲ್ಲವೂ ಸರಿ ಆಯಿತು ಎಂದು ಎಲ್ಲರೂ ಭಾವಿಸುತ್ತಿದ್ದಾರೆ. ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್