AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ ತ್ರಿಶಾ ವಿಲನ್; ಏನಿದು ಟ್ವಿಸ್ಟ್?

ಕೆಲವು ವರದಿಗಳ ಪ್ರಕಾರ ಪ್ರಭಾಸ್ ಅವರು ಪೊಲೀಸ್ ಪಾತ್ರ ಮಾಡುತ್ತಿದ್ದಾರಂತೆ. ತ್ರಿಶಾ ಅವರು ನಾಯಕಿ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅವರ ಪಾತ್ರಕ್ಕೆ ನೆಗೆಟಿವ್ ಶೇಡ್ ಇರಲಿದೆ. ಪ್ರಭಾಸ್ ಅವರಿಗೆ ದ್ವಿಪಾತ್ರ ಇರಲಿದೆ. ಪ್ರಭಾಸ್ ಅವರು ಹೀರೋ ಹಾಗೂ ವಿಲನ್ ಎರಡೂ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ,

ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ ತ್ರಿಶಾ ವಿಲನ್; ಏನಿದು ಟ್ವಿಸ್ಟ್?
ತ್ರಿಷಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 23, 2024 | 6:30 AM

Share

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಚಿತ್ರದ ಮೂಲಕ ಪ್ರಭಾಸ್ ಬೇಡಿಕೆ ಹೆಚ್ಚಾಗಿದೆ. ಸದ್ಯ ಪ್ರಭಾಸ್ ಅವರು ‘ರಾಜಾಸಾಬ್’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ರಿಲೀಸ್ಗಾಗಿ ಫ್ಯಾನ್ಸ್ ಕಾದಿದ್ದಾರೆ. ಈಗ ಅವರು ‘ಸ್ಪಿರಿಟ್’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ತ್ರಿಶಾ ಅವರು ವಿಲನ್ ಪಾತ್ರ ಮಾಡುತ್ತಾರೆ ಎಂದು ವರದಿ ಆಗಿದೆ.

ಸಂದೀಪ್ ರೆಡ್ಡಿ ವಂಗ ಅವರು ‘ಸ್ಪಿರಿಟ್’ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದು ಗೊತ್ತೇ ಇದೆ. ಅವರ ನಿರ್ದೇಶನದ ಸಿನಿಮಾಗಳಲ್ಲಿ ಹೀರೋ ಮಾಡೋದು ಕೆಟ್ಟದ್ದನ್ನೇ. ಆದರೂ ಆತ ಹೀರೋ ಎನಿಸಿಕೊಳ್ಳುತ್ತಾನೆ. ಈಗ ‘ಸ್ಪಿರಿಟ್’ ಚಿತ್ರದಲ್ಲಿ ಪ್ರಭಾಸ್ ಪಾತ್ರ ಯಾವ ರೀತಿಯ ಪಾತ್ರ ಮಾಡುತ್ತಾರೆ ಎಂಬ ಕುತೂಹಲ ಮೂಡಿದೆ. ಹೀಗಿರುವಾಗಲೇ ಸಂದೀಪ್ ರೆಡ್ಡಿ ವಂಗ ಅವರು ತ್ರಿಶಾ ಅವರನ್ನು ಆಯ್ಕೆ ಮಾಡಿಕೊಳ್ಳಲು ರೆಡಿ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಕೆಲವು ವರದಿಗಳ ಪ್ರಕಾರ ಪ್ರಭಾಸ್ ಅವರು ಪೊಲೀಸ್ ಪಾತ್ರ ಮಾಡುತ್ತಿದ್ದಾರಂತೆ. ತ್ರಿಶಾ ಅವರು ನಾಯಕಿ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅವರ ಪಾತ್ರಕ್ಕೆ ನೆಗೆಟಿವ್ ಶೇಡ್ ಇರಲಿದೆ. ಪ್ರಭಾಸ್ ಅವರಿಗೆ ದ್ವಿಪಾತ್ರ ಇರಲಿದೆ. ಪ್ರಭಾಸ್ ಅವರು ಹೀರೋ ಹಾಗೂ ವಿಲನ್ ಎರಡೂ ಪಾತ್ರ ಮಾಡುತ್ತಿದ್ದಾರೆ. ವಿಲನ್ ಪಾತ್ರ ಮಾಡೋ ಪ್ರಭಾಸ್ಗೆ ತ್ರಿಶಾ ಜೊತೆ ಆಗಲಿದ್ದಾರೆ. ಈ ವಿಚಾರ ಇನ್ನೂ ಅಧಿಕೃತ ಆಗಿಲ್ಲ.

ತ್ರಿಶಾ ಅವರು ವೃತ್ತಿ ಜೀವನದಲ್ಲಿ ಹೀರೋಯಿನ್ ಆಗಿ ಮಿಂಚಿದ್ದೇ ಹೆಚ್ಚು. ಅವರು ಗ್ಲಾಮರ್ ಪಾತ್ರಗಳ ಮೂಲಕ ಗಮನ ಸೆಳೆದಿದ್ದಾರೆ. ಈಗ ಅವರಿಗೆ ವಿಲನ್ ಪಾತ್ರ ಸಿಕ್ಕಿದ್ದು, ಅದನ್ನು ಹೇಗೆ ನಿರ್ವಹಿಸುತ್ತಾರೆ ಎಂಬ ಕುತೂಹಲ ಮೂಡಿದೆ. ‘ಸ್ಪಿರಿಟ್’ ಚಿತ್ರದಲ್ಲಿ ಕೊರಿಯಾದ ಸ್ಟಾರ್ ಡಾ ಲೀ ಅವರು ಪ್ರಮುಖ ವಿಲನ್ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಇನ್​ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡುತ್ತಿದ್ದಾಕೆ ಈಗ ಪ್ರಭಾಸ್ ಸಿನಿಮಾಕ್ಕೆ ನಾಯಕಿ

ಪ್ರಭಾಸ್ ಅವರು ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ಪಾತ್ರದ ಬಗ್ಗೆ ನಟ ಅರ್ಷದ್ ವಾರ್ಸಿ ಅವರು ಟೀಕೆ ಮಾಡಿದ್ದರು. ಪ್ರಭಾಸ್ ಅವರನ್ನು ಜೋಕರ್ ರೀತಿ ತೋರಿಸಲಾಗಿದೆ ಎಂದು ಹೇಳಿದ್ದರು. ಇನ್ನು, ‘ಅನಿಮಲ್’ ಸಿನಿಮಾ ಕಾರಣಕ್ಕೆ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಅವರು ಸಾಕಷ್ಟು ಟೀಕೆ ಎದುರಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ