ಕೀಳು ಹೇಳಿಕೆ: ಖಳನಟನ ವಿರುದ್ಧ ರೊಚ್ಚಿಗೆದ್ದ ನಟಿ ತ್ರಿಷಾ

Trisha-Mansoor: ಮನ್ಸೂರ್ ಅಲಿ ಖಾನ್, ತಮ್ಮ ಬಗ್ಗೆ ಆಡಿರುವ ಕೀಳು ಹೇಳೀಕೆಗಳನ್ನು ನಟಿ ತ್ರಿಷಾ ಕೃಷ್ಣನ್ ಖಂಡಿಸಿದ್ದಾರೆ. ನಿರ್ದೇಶಕ ಲೋಕೇಶ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಕೀಳು ಹೇಳಿಕೆ: ಖಳನಟನ ವಿರುದ್ಧ ರೊಚ್ಚಿಗೆದ್ದ ನಟಿ ತ್ರಿಷಾ
Follow us
|

Updated on: Nov 19, 2023 | 3:52 PM

ಸಿನಿಮಾಗಳಲ್ಲಿ ಖಳನಟನ ಪಾತ್ರ ನಿರ್ವಹಿಸುವ ವ್ಯಕ್ತಿಯೊಬ್ಬ, ನಟಿ ತ್ರಿಷಾ (Trisha Krishnan) ಬಗ್ಗೆ ಕೀಳು ಅಭಿರುಚಿಯ ಹೇಳಿಕೆ ನೀಡಿ ಪರದೇಯ ಮೇಲೆ ಮಾತ್ರವಲ್ಲದೆ ನಿಜ ಜೀವನದಲ್ಲಿಯೂ ತಾನು ಖಳನ ಮನಸ್ಥಿತಿಯವನೇ ಎಂದು ತೋರಿಸಿಕೊಟ್ಟಿದ್ದಾರೆ. ಖಳನಟನ ಕೀಳು ಅಭಿರುಚಿಯ ಹೇಳಿಕೆ ಬಗ್ಗೆ ನಟಿ ತ್ರಿಷಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ ಆ ಖಳನಟನಿಗೆ ತಮ್ಮ ಇತ್ತೀಚೆಗಿನ ಸಿನಿಮಾದಲ್ಲಿ ಅವಕಾಶ ಕೊಟ್ಟಿದ್ದ ನಿರ್ದೇಶಕ ಸಹ ಖಳನಟನ ಹೇಳಿಕೆಯನ್ನು ಖಂಡಿಸಿದ್ದಾರೆ.

ವಿಜಯ್ ನಟನೆಯ ಇತ್ತಿಚೆಗಿನ ಸೂಪರ್ ಹಿಟ್ ಸಿನಿಮಾ ‘ಲಿಯೋ’ನಲ್ಲಿ ನಟಿಸಿದ್ದ ನಟ ಮನ್ಸೂರ್ ಅಲಿ ಖಾನ್ ಇತ್ತೀಚೆಗಿನ ತಮ್ಮ ಸಂದರ್ಶನವೊಂದರಲ್ಲಿ ‘ಲಿಯೋ’ ಸಿನಿಮಾ ಬಗ್ಗೆ ಮಾತನಾಡುತ್ತಾ, ಆ ಸಿನಿಮಾದ ನಟಿ ತ್ರಿಷಾ ಬಗ್ಗೆ ಕೀಳು ಅಭಿರುಚಿಯ ಹೇಳಿಕೆಯನ್ನು ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ್ದ ನಟ ಮನ್ಸೂರ್ ಅಲಿ ಖಾನ್, ‘ನಾನು ‘ಲಿಯೋ’ ಸಿನಿಮಾದಲ್ಲಿ ನಟಿಸುತ್ತಿದ್ದೆ. ಆ ಸಿನಿಮಾದ ನಾಯಕಿ ತ್ರಿಷಾ ಎಂದು ತಿಳಿದಾಗ ಸಂತೋಷವಾಯ್ತು. ನನ್ನ ಹಾಗೂ ತ್ರಿಷಾ ನಡುವೆ ಒಳ್ಳೆಯ ಬೆಡ್​ರೂಂ ಸೀನ್​ಗಳಿರುತ್ತವೆ ಎಂದು ನಿರೀಕ್ಷಿಸಿದ್ದೆ. ಆದರೆ ಅದೆಲ್ಲ ಸುಳ್ಳಾಯಿತು. ತ್ರಿಷಾಳನ್ನು ಬೆಡ್​ರೂಂಗೆ ಎತ್ತಿಕೊಂಡು ಹೋಗಿ ರೇಪ್ ಮಾಡುವ ಸೀನ್ ಇರುತ್ತದೆ ಅಂದುಕೊಂಡಿದ್ದೆ. ನಾನು ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದಾಗ ಅಂಥಹಾ ಹಲವು ಸೀನ್​ಗಳಲ್ಲಿ ನಟಿಸಿದ್ದೇನೆ. ಸಿನಿಮಾದಲ್ಲಿ ಹಲವು ನಟಿಯರನ್ನು ರೇಪ್ ಮಾಡಿದ್ದೀನಿ. ಆದರೆ ‘ಲಿಯೋ’ ಸಿನಿಮಾನವರು ತ್ರಿಷಾರ ಮುಖವನ್ನು ಸಹ ನನಗೆ ತೋರಿಸಲಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ:ತ್ರಿಷಾ ಕೃಷ್ಣನ್ ಕನ್ನಡದಲ್ಲಿ ನಟಿಸಿದ್ದು ಒಂದೇ ಚಿತ್ರ, ಅದರಲ್ಲಿ ಪುನೀತ್ ರಾಜ್ ಕುಮಾರ್ ನಾಯಕರಾಗಿದ್ದರು!

ಮನ್ಸೂರ್ ಅಲಿ ಖಾನ್ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ನಟಿ ತ್ರಿಷಾ, ” ಮನ್ಸೂರ್ ಅಲಿ ಖಾನ್ ನನ್ನ ಬಗ್ಗೆ ಅಸಹ್ಯವಾಗಿ ಮಾತನಾಡಿರುವ ವೀಡಿಯೊ ಇತ್ತೀಚೆಗೆ ನನ್ನ ಗಮನಕ್ಕೆ ಬಂದಿದೆ. ಆ ನಟನ ಮಾತುಗಳನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅಗೌರವ, ಸ್ತ್ರೀದ್ವೇಷ, ಕೆಟ್ಟ ಅಭಿರುಚಿ ಹಾಗೂ ಲೈಂಗಿಕ ಲೋಭವನ್ನು ಹೊಂದಿದೆ. ನನ್ನೊಂದಿಗೆ ನಟಿಸಲು ಅವರು ಬಯಸಬಹುದು ಆದರೆ ನಾನು ಅವರಂತಹ ಕೆಟ್ಟ ವ್ಯಕ್ತಿಯೊಂದಿಗೆ ಎಂದಿಗೂ ಪರದೆಯನ್ನು ಹಂಚಿಕೊಳ್ಳುವುದಿಲ್ಲ. ಈ ಹಿಂದೆ ಪರದೆ ಹಂಚಿಕೊಂಡಿದ್ದಕ್ಕೆ ನಾನು ಕೃತಜ್ಞಳಾಗಿದ್ದೇನೆ. ಮತ್ತು ನನ್ನ ಉಳಿದ ಚಲನಚಿತ್ರ ವೃತ್ತಿಜೀವನದಲ್ಲಿ ನಾನು ಅವರೊಟ್ಟಿಗೆ ಎಂದಿಗೂ ಪರದೆ ಹಂಚಿಕೊಳ್ಳದಂತೆ ಎಚ್ಚರವಹಿಸುತ್ತೇನೆ. ಅವರಂತಹವರು ಮನುಕುಲಕ್ಕೆ ಕೆಟ್ಟ ಹೆಸರು ತರುತ್ತಾರೆ’’ ಎಂದಿದ್ದಾರೆ.

‘ಲಿಯೋ’ ಸಿನಿಮಾದ ನಿರ್ದೇಶಕ ಲೋಕೇಶ್ ಕನಗರಾಜು ಸಹ ಮನ್ಸೂರ್ ಅಲಿ ಖಾನ್​, ನಟಿ ತ್ರಿಷಾ ಬಗ್ಗೆ ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ”ನಾವೆಲ್ಲರೂ ಒಂದೇ ತಂಡದಲ್ಲಿ ಕೆಲಸ ಮಾಡಿದ್ದರಿಂದ ಮನ್ಸೂರ್ ಅಲಿ ಖಾನ್ ಅವರು ಮಾಡಿದ ಸ್ತ್ರೀದ್ವೇಷದ ಕಾಮೆಂಟ್‌ಗಳನ್ನು ಕೇಳಿ ಅಸಮಾಧಾನ ಮತ್ತು ಕೋಪಗೊಂಡಿದ್ದೇವೆ. ಮಹಿಳೆಯರು, ಸಹ ಕಲಾವಿದರು ಮತ್ತು ವೃತ್ತಿಪರರಿಗೆ ಗೌರವ ನೀಡುವುದು ಯಾವುದೇ ಉದ್ಯಮದಲ್ಲಿ ಅತ್ಯಂತ ಅವಶ್ಯಕ. ನಾನು, ಮನ್ಸೂರ್ ಅಲಿ ಖಾನ್​ರ ಈ ನಡವಳಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆಜ್’ ಎಂದಿದ್ದಾರೆ. ಇತ್ತೀಚೆಗಷ್ಟೆ ಮನ್ಸೂರ್ ಅಲಿ ಖಾನ್, ನಟಿ ತಮನ್ನಾ ಬಗ್ಗೆಯೂ ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್
ಸಿಎಂಗೆ ತಾಕತ್ತಿದ್ದರೆ ತನ್ವೀರ್ ಪೀರಾ ವಿರುದ್ಧ ತನಿಖೆ ನಡೆಸಲಿ: ಯತ್ನಾಳ್
ಸಿಎಂಗೆ ತಾಕತ್ತಿದ್ದರೆ ತನ್ವೀರ್ ಪೀರಾ ವಿರುದ್ಧ ತನಿಖೆ ನಡೆಸಲಿ: ಯತ್ನಾಳ್
ವಿನಯ್, ನಮ್ರತಾನ ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗಿಟ್ಟ ಸ್ನೇಹಿತ್
ವಿನಯ್, ನಮ್ರತಾನ ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗಿಟ್ಟ ಸ್ನೇಹಿತ್
BBL ​ನಲ್ಲಿ ಜೆಟ್​ಪ್ಯಾಕ್ ಶೋ: IPL ನಲ್ಲಿ ಇದೆಲ್ಲ ಇಲ್ಲ ಎಂದ ಫ್ಯಾನ್ಸ್
BBL ​ನಲ್ಲಿ ಜೆಟ್​ಪ್ಯಾಕ್ ಶೋ: IPL ನಲ್ಲಿ ಇದೆಲ್ಲ ಇಲ್ಲ ಎಂದ ಫ್ಯಾನ್ಸ್
‘ಅನಿಮಲ್’ ಸಿನಿಮಾದ ವಾರ್ ಮಷಿನ್ ಡಿಸೈನ್ ಮಾಡಿದ ಕನ್ನಡಿಗ ಇವರೆ
‘ಅನಿಮಲ್’ ಸಿನಿಮಾದ ವಾರ್ ಮಷಿನ್ ಡಿಸೈನ್ ಮಾಡಿದ ಕನ್ನಡಿಗ ಇವರೆ
ಬೃಹತ್ ಗಾತ್ರದ ಹೆಬ್ಬಾವು ಸೆರೆ; ಉರಗ ತಜ್ಞನ ಮೇಲೆಯೇ ದಾಳಿಗೆ ಮುಂದಾದ ಪೈಥಾನ್
ಬೃಹತ್ ಗಾತ್ರದ ಹೆಬ್ಬಾವು ಸೆರೆ; ಉರಗ ತಜ್ಞನ ಮೇಲೆಯೇ ದಾಳಿಗೆ ಮುಂದಾದ ಪೈಥಾನ್