AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಷಾ ಮಾಡಿಕೊಂಡ ವಿವಾದಗಳು ಒಂದೆರಡಲ್ಲ.. ಇಲ್ಲಿದೆ ವಿವರ  

ತ್ರಿಷಾ ಅವರ ಜನ್ಮದಿನದಂದು, ಅವರ ವೃತ್ತಿಪರತೆ ಮತ್ತು ವಿವಾದಗಳನ್ನು ಚರ್ಚಿಸೋಣ. ಜಲ್ಲಿಕಟ್ಟು ಪ್ರತಿಭಟನೆ, ಅವರ ವಿವಾಹದ ವಿವಾದ, ಮತ್ತು ನಟ ಮನ್ಸೂರ್ ಅಲಿ ಖಾನ್ ಅವರ ವಿವಾದಾತ್ಮಕ ಹೇಳಿಕೆಗಳು ಸೇರಿದಂತೆ ವಿವಿಧ ವಿವಾದಗಳನ್ನು ಈ ಲೇಖನ ಒಳಗೊಂಡಿದೆ. ಅವರ ಪ್ರಬುದ್ಧತೆ ಮತ್ತು ವೃತ್ತಿಪರತೆಯನ್ನು ಅವರ ವಿವಾದಗಳ ಹಿನ್ನೆಲೆಯಲ್ಲಿ ಚರ್ಚಿಸಲಾಗುವುದು.

ತ್ರಿಷಾ ಮಾಡಿಕೊಂಡ ವಿವಾದಗಳು ಒಂದೆರಡಲ್ಲ.. ಇಲ್ಲಿದೆ ವಿವರ  
ತ್ರಿಷಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: May 04, 2025 | 6:30 AM

Share

ನಟಿ ತ್ರಿಷಾ (Trisha) ಅವರಿಗೆ ಇಂದು (ಮೇ 4) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ. ಅವರು ಪ್ರಾಫೆಷನಲ್ ಆಗಿ ನಡೆದುಕೊಳ್ಳಲು ಇಷ್ಟಪಡುತ್ತಾರೆ. ಆದಾಗ್ಯೂ ಕೆಲವು ವಿವಾದಗಳು ಅವರಿಗೆ ಅಂಟಿಕೊಂಡವು ಎಂದೇ ಹೇಳಬಹುದು. ಹಾಗಾದರೆ ಅವರು ಮಾಡಿಕೊಂಡ ವಿವಾದಗಳು ಏನು? ಆ ಬಗ್ಗೆ ಇಂದು ನೋಡೋಣ. ಕೆಲವು ವಿವಾದಗಳು ತ್ರಿಷಾ ಅವರೇ ಮಾಡಿಕೊಂಡರೆ, ಕೆಲವು ವಿವಾದಗಳು ಬೇರೆಯವರಿಂದ ಆಗಿದ್ದು, ಇದಕ್ಕೆ ಅವರು ಬಲಿಯಾಗಬೇಕಾಯಿತು.

ಪ್ರಾಣಿಗಳ ಹಕ್ಕನ್ನು ಉಳಿಸೋ ಪೆಟಾಗೆ ತ್ರಿಷಾ ಅವರು ಬೆಂಬಲ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸಂಬಂಧಿ ಪ್ರತಿಭಟನೆ ನಡೆಯುವಾಗ ಅವರು ನಡೆದುಕೊಂಡಿದ್ದು ವಿವಾದಕ್ಕೆ ಕಾರಣ ಆಗಿತ್ತು. ಹೌದು, ಜಲ್ಲಿಕಟ್ಟು ಪ್ರತಿಭಟನೆ ನಡೆಯುವಾಗಲೂ ತ್ರಿಷಾ ಅವರು ಪೆಟಾನ ಬೆಂಬಲಿಸಿದ್ದರು. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಬಳಕೆ ತುಂಬಾನೇ ಇದೆ. ತಮಿಳು ನಟಿ ಆಗಿ ತ್ರಿಷಾ ಅವರು ಈ ರೀತಿ ಮಾಡಬಾರದಿತ್ತು ಎನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು.

ವರುಣ್ ಅವರನ್ನು 2015ರಲ್ಲಿ ತ್ರಿಷಾ ಅವರು ವಿವಾಹ ಆದರು. ಆದರೆ, ಕೆಲವೇ ತಿಂಗಳಲ್ಲಿ ಇದು ಕೊನೆ ಆಗಿ ಹೋಯಿತು. ಇದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಇವರು ಬೇರೆ ಆಗುವದಕ್ಕೆ ಅನೇಕ ಕಾರಣಗಳನ್ನು ನೀಡಲಾಯಿತು. ಆದರೆ, ತ್ರಿಷಾ ಅವರು ಈ ವಿಚಾರದಲ್ಲಿ ಯಾವುದನ್ನೂ ಮಾತನಾಡಲೇ ಇಲ್ಲ.

ಇದನ್ನೂ ಓದಿ
Image
ನಟಿ ಮಾಡಿದ ಕುಹಕದ ಮಾತಿನಿಂದ ಸಿಕ್ಸ್ ಪ್ಯಾಕ್​ ಮಾಡಿದ್ದ ಅಲ್ಲು ಅರ್ಜುನ್
Image
ಬುಡಕಟ್ಟು ಜನಾಂಗದ ಬಗ್ಗೆ ವಿವಾದಾತ್ಮಕ ಹೇಳಿಕೆ; ಕ್ಷಮೆ ಕೇಳಿದ ವಿಜಯ್
Image
‘ಕೆಜಿಎಫ್ 2’ ರಿಲೀಸ್ ಆಗಿ 3 ವರ್ಷವಾದರೂ ನಿಂತಿಲ್ಲ ಟಾಕ್
Image
ಖ್ಯಾತ ನಿರ್ದೇಶಕ ರಾಜಮೌಳಿಯ ನೆಚ್ಚಿನ ನಟಿ ಯಾರು ಗೊತ್ತಾ?

ತ್ರಿಷಾ ಅವರು ಈ ಸಂದರ್ಭದಲ್ಲಿ ನಡೆದುಕೊಂಡ ರೀತಿ ಅನೇಕರಿಂದ ಮೆಚ್ಚುಗೆ ಪಡೆಯಿತು. ಏಕೆಂದರೆ ತ್ರಿಷಾ ಅವರು ಆ ಸಂದರ್ಭದಲ್ಲಿ ತುಂಬಾನೇ ಪ್ರಬುದ್ಧರಾಗಿ ನಡೆದುಕೊಂಡರು. ಈ ಕಾರಣದಿಂದಲೇ ಅವರು ತಮ್ಮ ಕೆಲಸದ ಮೇಲೆ ಕೇಂದ್ರೀಕರಿಸಿದರು, ಮತ್ತು ವಿವಾದದ ಬಗ್ಗೆ ಹೆಚ್ಚು ಕಿವಿಗೊಡಲೇ ಇಲ್ಲ.

ಇದನ್ನೂ ಓದಿ: ತ್ರಿಷಾ-ವಿಜಯ್ ಫೋಟೊ ಲೀಕ್: ಅಣ್ಣಾಮಲೈ ಸ್ಪೋಟಕ ಹೇಳಿಕೆ

ಸಂದರ್ಶನವೊಂದರಲ್ಲಿ ಮಾತನಾಡಿದ್ದ ನಟ ಮನ್ಸೂರ್ ಅಲಿ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಲಿಯೋ ಸಿನಿಮಾದಲ್ಲಿ ಮನ್ಸೂರ್ ಹಾಗೂ ತ್ರಿಷಾ ಇಬ್ಬರೂ ನಟಿಸಿದ್ದರು. ಆದರೆ, ಇವರ ಮಧ್ಯೆ ಯಾವುದೇ ಕಾಂಬಿನೇಷನ್ ಇರಲಿಲ್ಲ. ‘ತ್ರಿಷಾ ಜೊತೆ ನಟಿಸೋ ಅವಕಾಶ ಸಿಕ್ಕಾಗ ಖುಷಿ ಆಯಿತು. ನನ್ನ ಹಾಗೂ ತ್ರಿಷಾ ನಡುವೆ ಒಳ್ಳೆಯ ಬೆಡ್​ರೂಂ ಸೀನ್​ಗಳಿರುತ್ತವೆ ಎಂದು ನಿರೀಕ್ಷಿಸಿದ್ದೆ. ಆದರೆ ಅದೆಲ್ಲ ಸುಳ್ಳಾಯಿತು. ತ್ರಿಷಾಳನ್ನು ಬೆಡ್​ರೂಂಗೆ ಎತ್ತಿಕೊಂಡು ಹೋಗಿ ರೇಪ್ ಮಾಡುವ ಸೀನ್ ಇರುತ್ತದೆ ಅಂದುಕೊಂಡಿದ್ದೆ. ನಾನು ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದಾಗ ಅಂಥಹಾ ಹಲವು ಸೀನ್​ಗಳಲ್ಲಿ ನಟಿಸಿದ್ದೇನೆ. ಸಿನಿಮಾದಲ್ಲಿ ಹಲವು ನಟಿಯರನ್ನು ರೇಪ್ ಮಾಡಿದ್ದೀನಿ.ಆದರೆ, ನನಗೆ ತ್ರಿಷಾರ ಮುಖವನ್ನೂ ತೋರಿಸಿಲ್ಲ’ ಎಂದು ವಿವಾದ ಹುಟ್ಟುಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ