AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನಲ್ಲಿ ಬರಲಿದೆ ‘ಹನುಮಾನ್ ಅಂಶ್’ ಸಿನಿಮಾ, ರಿಲೀಸ್ ಯಾವಾಗ?

ನೀಮ್ ಕರೋಲಿ ಬಾಬಾ ಅವರ ಅಸಾಮಾನ್ಯ ಜೀವನ ಪಯಣವನ್ನು ಆಧರಿಸಿದ ಈ ಸಿನಿಮಾವನ್ನು ಡಾ ವಿಶಾಲ್ ಚತುರ್ವೇದಿ ನಿರ್ದೇಶಿಸಿದ್ದಾರೆ. ಈ ಚಲನಚಿತ್ರವನ್ನು ರಾಗಿಣಿ ಎಸ್, ನಮ್ರತಾ ಜಿ. ಸಿಂಗ್, ಅನುಪ್ರಿಯಾ ಎ. ನಾಗರ್ ಮತ್ತು ನಿರ್ದೇಶಕರೇ ನಿರ್ಮಾಣ ಮಾಡಿದ್ದಾರೆ. ಉತ್ತರ ಭಾರತದಲ್ಲಿ ಭರ್ಜರಿ ಗಳಿಕೆ ಮಾಡುತ್ತಿರುವ ಈ ಸಿನಿಮಾ ಅನ್ನು ಇದೀಗ ದಕ್ಷಿಣಕ್ಕೆ ತರಲಾಗುತ್ತಿದೆ. ಸಿನಿಮಾದ ತೆಲುಗು ಆವೃತ್ತಿ ಶೀಘ್ರವೇ ರಿಲೀಸ್ ಆಗಲಿದೆ.

ತೆಲುಗಿನಲ್ಲಿ ಬರಲಿದೆ ‘ಹನುಮಾನ್ ಅಂಶ್’ ಸಿನಿಮಾ, ರಿಲೀಸ್ ಯಾವಾಗ?
Hanuman Ansh Trivkram
ಮಂಜುನಾಥ ಸಿ.
|

Updated on: Sep 12, 2026 | 7:13 PM

Share

ಮುಖ್ಯಾಂಶಗಳು

  • ಹನುಮಾನ್ ಅಂಶ್ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ
  • ಉತ್ತರ ಭಾರತದಲ್ಲಿ ಸಿನಿಮಾದ ಗಳಿಕೆ ಜೋರಾಗಿದೆ.
  • ಇದೇ ಸಿನಿಮಾದ ತೆಲುಗು ಆವೃತ್ತಿ ಶೀಘ್ರವೇ ರಿಲೀಸ್ ಆಗಲಿದೆ.

ಹನುಮಾನ್ ಅಂಶ್’ ಭಾರತೀಯ ಬಾಕ್ಸ್ ಆಫೀಸ್​​ನಲ್ಲಿ ಅಚ್ಚರಿಗಳನ್ನು ಸೃಷ್ಟಿಸುತ್ತಿದೆ. ತೀರ ಸಣ್ಣ ಬಜೆಟ್​​ನಲ್ಲಿ ನಿರ್ಮಾಣ ಮಾಡಲಾಗಿರುವ ಈ ಸಿನಿಮಾ ಭಾರಿ ದೊಡ್ಡ ಗಳಿಕೆ ಮಾಡುತ್ತಿದೆ. ಉತ್ತರ ಭಾರತದಲ್ಲಿ ಬಹಳ ಜನಪ್ರಿಯ ಆಗಿರುವ ನೀಲ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಇದೇ ಕಾರಣಕ್ಕೆ ಹಿಂದಿ ಭಾಷಿಕ ಪ್ರದೇಶದಲ್ಲಿ ಸಿನಿಮಾ ದೊಡ್ಡ ಗಳಿಕೆ ಮಾಡುತ್ತಿದೆ. ಆದರೆ ಇದೀಗ ಈ ಸಿನಿಮಾವನ್ನು ದಕ್ಷಿಣಕ್ಕೂ ತರುವ ಪ್ರಯತ್ನ ಮಾಡಲಾಗುತ್ತಿದ್ದು, ಸಿನಿಮಾ ಶೀಘ್ರವೇ ತೆಲುಗು ಭಾಷೆಗೆ ಡಬ್ ಆಗಿ ರಿಲೀಸ್ ಆಗಲಿದೆ.

‘ಹನುಮಾನ್ ಅಂಶ್’ ಸಿನಿಮಾವನ್ನು ತೆಲುಗಿಗೆ ಡಬ್ ಮಾಡಲಾಗಿದ್ದು ಶೀಘ್ರವೇ ಸಿನಿಮಾದ ತೆಲುಗು ಆವೃತ್ತಿಯನ್ನು ಆಂಧ್ರ ಪ್ರದೇಶ ಮತ್ತು ತೆಲಂಗಾಣಗಳಲ್ಲಿ ರಿಲೀಸ್ ಮಾಡಲಾಗುತ್ತಿದೆ. ತೆಲುಗು ಚಿತ್ರರಂಗದ ಜನಪ್ರಿಯ ಸಿನಿಮಾ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಹಾಗೂ ‘ಫಾರ್ಚೂನ್ ಫೋರ್ ಸಿನಿಮಾಸ್’ ಜಂಟಿ ಸಹಯೋಗದೊಂದಿಗೆ ಈ ಸಿನಿಮಾದ ತೆಲುಗು ಆವೃತ್ತಿಯನ್ನು ರಿಲೀಸ್ ಮಾಡಲಾಗುತ್ತಿದೆ. ಸೆಪ್ಟೆಂಬರ್ 18ರಂದು ‘ಹನುಮಾನ್ ಅಂಶ್’ ಸಿನಿಮಾದ ತೆಲುಗು ಆವೃತ್ತಿ ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಆಗಲಿದೆ.

ತ್ರಿವಿಕ್ರಮ್ ಶ್ರೀನಿವಾಸ್ ಜನಪ್ರಿಯ ಸಿನಿಮಾ ನಿರ್ದೇಶಕರಾಗಿದ್ದು, ಅಧ್ಯಾತ್ಮ, ಪೌರಾಣಿಕ ಮತ್ತು ತತ್ವಶಾಸ್ತ್ರದಲ್ಲಿ ಬಹಳ ಆಸಕ್ತಿ ಉಳ್ಳ ವ್ಯಕ್ತಿ ಆಗಿದ್ದಾರೆ. ಅವರಿಗೆ ‘ಹನುಮಾನ್ ಅಂಶ್’ ಸಿನಿಮಾ ಹಾಗೂ ಸಿನಿಮಾನಲ್ಲಿರುವ ಅಧ್ಯಾತ್ಮ ಚಿಂತನೆಗಳು ಬಹುವಾಗಿ ಹಿಡಿಸಿದ್ದು, ಅದೇ ಕಾರಣಕ್ಕೆ ಈ ಸಿನಿಮಾವನ್ನು ತೆಲುಗಿಗೆ ಡಬ್ ಮಾಡಿಸಿ ರಿಲೀಸ್ ಮಾಡಲು ಮುಂದಾಗಿದ್ದಾರೆ. ಅಂದಹಾಗೆ ಖುದ್ದು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡಿರುವ ‘ಆದರ್ಶ ಕುಟುಂಬ 47’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾ ಟೀಸರ್ ಇಂದಷ್ಟೆ ಬಿಡುಗಡೆ ಆಗಿದ್ದು, ಹಾಸ್ಯಭರಿತವಾಗಿದೆ.

ಇದನ್ನೂ ಓದಿ:ತೆಲುಗಿನಲ್ಲಿ ಬರ್ತಿದೆ ಬಾಲಿವುಡ್ ಬ್ಲಾಕ್‌ಬಸ್ಟರ್ ‘ಹನುಮಾನ್ ಅಂಶ್; ಕನ್ನಡದಲ್ಲಿ ಯಾವಾಗ?

ನೀಮ್ ಕರೋಲಿ ಬಾಬಾ ಅವರ ಅಸಾಮಾನ್ಯ ಜೀವನ ಪಯಣವನ್ನು ಆಧರಿಸಿದ ಈ ಸಿನಿಮಾವನ್ನು ಡಾ ವಿಶಾಲ್ ಚತುರ್ವೇದಿ ನಿರ್ದೇಶಿಸಿದ್ದಾರೆ. ಈ ಚಲನಚಿತ್ರವನ್ನು ರಾಗಿಣಿ ಎಸ್, ನಮ್ರತಾ ಜಿ. ಸಿಂಗ್, ಅನುಪ್ರಿಯಾ ಎ. ನಾಗರ್ ಮತ್ತು ನಿರ್ದೇಶಕರೇ ನಿರ್ಮಾಣ ಮಾಡಿದ್ದಾರೆ. ಸಿನಿಮಾನಲ್ಲಿ ಶೋಭಿತ್ ಶ್ರೀವಾಸ್ತವ, ಚಂದನ್ ಆನಂದ್, ಪೂರ್ಣಿಮಾ ತಿವಾರಿ ಮತ್ತು ವಿಹಾನ್ ಶೆಡ್ಗೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 200 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ