AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಪ್ಯಾನ್​ ಇಂಡಿಯಾ ಸಿನಿಮಾಗೆ ರೆಡಿ ಆದ ಅಲ್ಲು ಅರ್ಜುನ್; ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನ

ಅಲ್ಲು ಅರ್ಜುನ್ ಸದ್ಯ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಪುಷ್ಪ’ ಬಳಿಕ ಅವರು ಮತ್ತೊಂದು ಪ್ಯಾನ್​ ಇಂಡಿಯಾ ಚಿತ್ರಕ್ಕಾಗಿ ಸಿದ್ಧರಾಗುತ್ತಿದ್ದಾರೆ.

ಮತ್ತೊಂದು ಪ್ಯಾನ್​ ಇಂಡಿಯಾ ಸಿನಿಮಾಗೆ ರೆಡಿ ಆದ ಅಲ್ಲು ಅರ್ಜುನ್; ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನ
ತ್ರಿವಿಕ್ರಂ ಶ್ರೀನಿವಾಸ್-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: May 26, 2023 | 6:31 AM

Share

ತ್ರಿವಿಕ್ರಂ ಶ್ರೀನಿವಾಸ್​ಗೆ (Trivikram Srinivas) ಟಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಈವರೆಗೆ ಮಾಡಿರೋ ಸಿನಿಮಾಗಳು ನೇರವಾಗಿ ಟಾಲಿವುಡ್​ನಲ್ಲೇ (Tollywood) ರಿಲೀಸ್ ಆಗಿವೆ. ಈಗ ಅವರು ಹೊಸ ಸಿನಿಮಾ ಮಾಡೋಕೆ ರೆಡಿ ಆಗಿದ್ದಾರೆ. ವಿಶೇಷ ಎಂದರೆ ಇದು ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಅನ್ನೋದು ವಿಶೇಷ. ಸದ್ಯ ಈ ವಿಷಯ ಪ್ರಾಥಮಿಕ ಹಂತದಲ್ಲಿದ್ದು ಶೀಘ್ರವೇ ಎಲ್ಲವೂ ಫೈನಲ್ ಆಗುವ ಸಾಧ್ಯತೆ ಇದೆ. ಈ ವಿಚಾರ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿಬರಹುದು ಎನ್ನುವ ಕುತೂಹಲವೂ ಅಭಿಮಾನಿಗಳಲ್ಲಿದೆ.

ಅಲ್ಲು ಅರ್ಜುನ್ ಸದ್ಯ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಪುಷ್ಪ’ ಬಳಿಕ ಅವರು ಮತ್ತೊಂದು ಪ್ಯಾನ್​ ಇಂಡಿಯಾ ಚಿತ್ರಕ್ಕಾಗಿ ಸಿದ್ಧರಾಗುತ್ತಿದ್ದಾರೆ. ಈ ಸಿನಿಮಾ ತೆಲುಗು, ತಮಿಳು, ಕನ್ನಡ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ‘ಪುಷ್ಪ’ ಚಿತ್ರದಿಂದ ಅಲ್ಲು ಅರ್ಜುನ್ ಖ್ಯಾತಿ ಹೆಚ್ಚಿದ್ದು, ‘ಪುಷ್ಪ 2’ ಚಿತ್ರದಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಲಿದೆ. ಈ ಚಿತ್ರ ಮುಗಿದ ಬಳಿಕ ಅವರು ತ್ರಿವಿಕ್ರಂ ಶ್ರೀನಿವಾಸ್ ಜೊತೆ ಸಿನಿಮಾ ಮಾಡುತ್ತಾರೆ ಎಂದು ತಿಳಿದು ಬಂದಿದೆ.

ತ್ರಿವಿಕ್ರಂ ಶ್ರೀನಿವಾಸ್ ಅವರು ಮಹೇಶ್ ಬಾಬು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಜನವರಿ 12, 2023ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಕೆಲಸಗಳು ಮುಗಿದ ಬಳಿಕ ಅವರು ಅಲ್ಲು ಅರ್ಜುನ್ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಒಟ್ಟಾಗಿ ಕೆಲಸ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದು ಅನ್ನೋದು ವಿಶೇಷ. ‘ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲ ವೈಕುಂಠಪುರಮುಲೋ’ ಚಿತ್ರಗಳಲ್ಲಿ ಇವರು ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಮೂರು ಚಿತ್ರಗಳು ಹಿಟ್ ಸಿನಿಮಾ ಎನಿಸಿಕೊಂಡಿದೆ. ಈಗ ನಾಲ್ಕನೇ ಚಿತ್ರಕ್ಕಾಗಿ ಈ ಜೋಡಿ ಸಿದ್ಧವಾಗುತ್ತಿದೆ.

ಇದನ್ನೂ ಓದಿ: ‘ಪುಷ್ಪ 2’ ಪೋಸ್ಟರ್​ ರೀತಿ ವೇಷ ಧರಿಸಿ ಬಂದ ಸಂಸದ; ಅಲ್ಲು ಅರ್ಜುನ್​ ಅಭಿಮಾನಿಗಳಲ್ಲಿ ಹೆಚ್ಚಿತು ಕ್ರೇಜ್​

ಇತ್ತೀಚೆಗೆ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಭೇಟಿ ಆಗಿದ್ದಾರೆ. ಈ ಭೇಟಿ ವೇಳೆ ಕಥೆ ಚರ್ಚೆಗೆ ಬಂದಿದೆ. ಈ ಕಥೆಗೆ ಅಲ್ಲು ಅರ್ಜುನ್ ಇನ್ನಷ್ಟೇ ಅಧಿಕೃತ ಒಪ್ಪಿಗೆಯನ್ನು ಸೂಚಿಸಬೇಕಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!