AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಪ್ಯಾನ್​ ಇಂಡಿಯಾ ಸಿನಿಮಾಗೆ ರೆಡಿ ಆದ ಅಲ್ಲು ಅರ್ಜುನ್; ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನ

ಅಲ್ಲು ಅರ್ಜುನ್ ಸದ್ಯ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಪುಷ್ಪ’ ಬಳಿಕ ಅವರು ಮತ್ತೊಂದು ಪ್ಯಾನ್​ ಇಂಡಿಯಾ ಚಿತ್ರಕ್ಕಾಗಿ ಸಿದ್ಧರಾಗುತ್ತಿದ್ದಾರೆ.

ಮತ್ತೊಂದು ಪ್ಯಾನ್​ ಇಂಡಿಯಾ ಸಿನಿಮಾಗೆ ರೆಡಿ ಆದ ಅಲ್ಲು ಅರ್ಜುನ್; ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನ
ತ್ರಿವಿಕ್ರಂ ಶ್ರೀನಿವಾಸ್-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: May 26, 2023 | 6:31 AM

Share

ತ್ರಿವಿಕ್ರಂ ಶ್ರೀನಿವಾಸ್​ಗೆ (Trivikram Srinivas) ಟಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಈವರೆಗೆ ಮಾಡಿರೋ ಸಿನಿಮಾಗಳು ನೇರವಾಗಿ ಟಾಲಿವುಡ್​ನಲ್ಲೇ (Tollywood) ರಿಲೀಸ್ ಆಗಿವೆ. ಈಗ ಅವರು ಹೊಸ ಸಿನಿಮಾ ಮಾಡೋಕೆ ರೆಡಿ ಆಗಿದ್ದಾರೆ. ವಿಶೇಷ ಎಂದರೆ ಇದು ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಅನ್ನೋದು ವಿಶೇಷ. ಸದ್ಯ ಈ ವಿಷಯ ಪ್ರಾಥಮಿಕ ಹಂತದಲ್ಲಿದ್ದು ಶೀಘ್ರವೇ ಎಲ್ಲವೂ ಫೈನಲ್ ಆಗುವ ಸಾಧ್ಯತೆ ಇದೆ. ಈ ವಿಚಾರ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿಬರಹುದು ಎನ್ನುವ ಕುತೂಹಲವೂ ಅಭಿಮಾನಿಗಳಲ್ಲಿದೆ.

ಅಲ್ಲು ಅರ್ಜುನ್ ಸದ್ಯ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಪುಷ್ಪ’ ಬಳಿಕ ಅವರು ಮತ್ತೊಂದು ಪ್ಯಾನ್​ ಇಂಡಿಯಾ ಚಿತ್ರಕ್ಕಾಗಿ ಸಿದ್ಧರಾಗುತ್ತಿದ್ದಾರೆ. ಈ ಸಿನಿಮಾ ತೆಲುಗು, ತಮಿಳು, ಕನ್ನಡ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ‘ಪುಷ್ಪ’ ಚಿತ್ರದಿಂದ ಅಲ್ಲು ಅರ್ಜುನ್ ಖ್ಯಾತಿ ಹೆಚ್ಚಿದ್ದು, ‘ಪುಷ್ಪ 2’ ಚಿತ್ರದಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಲಿದೆ. ಈ ಚಿತ್ರ ಮುಗಿದ ಬಳಿಕ ಅವರು ತ್ರಿವಿಕ್ರಂ ಶ್ರೀನಿವಾಸ್ ಜೊತೆ ಸಿನಿಮಾ ಮಾಡುತ್ತಾರೆ ಎಂದು ತಿಳಿದು ಬಂದಿದೆ.

ತ್ರಿವಿಕ್ರಂ ಶ್ರೀನಿವಾಸ್ ಅವರು ಮಹೇಶ್ ಬಾಬು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಜನವರಿ 12, 2023ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಕೆಲಸಗಳು ಮುಗಿದ ಬಳಿಕ ಅವರು ಅಲ್ಲು ಅರ್ಜುನ್ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಒಟ್ಟಾಗಿ ಕೆಲಸ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದು ಅನ್ನೋದು ವಿಶೇಷ. ‘ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲ ವೈಕುಂಠಪುರಮುಲೋ’ ಚಿತ್ರಗಳಲ್ಲಿ ಇವರು ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಮೂರು ಚಿತ್ರಗಳು ಹಿಟ್ ಸಿನಿಮಾ ಎನಿಸಿಕೊಂಡಿದೆ. ಈಗ ನಾಲ್ಕನೇ ಚಿತ್ರಕ್ಕಾಗಿ ಈ ಜೋಡಿ ಸಿದ್ಧವಾಗುತ್ತಿದೆ.

ಇದನ್ನೂ ಓದಿ: ‘ಪುಷ್ಪ 2’ ಪೋಸ್ಟರ್​ ರೀತಿ ವೇಷ ಧರಿಸಿ ಬಂದ ಸಂಸದ; ಅಲ್ಲು ಅರ್ಜುನ್​ ಅಭಿಮಾನಿಗಳಲ್ಲಿ ಹೆಚ್ಚಿತು ಕ್ರೇಜ್​

ಇತ್ತೀಚೆಗೆ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಭೇಟಿ ಆಗಿದ್ದಾರೆ. ಈ ಭೇಟಿ ವೇಳೆ ಕಥೆ ಚರ್ಚೆಗೆ ಬಂದಿದೆ. ಈ ಕಥೆಗೆ ಅಲ್ಲು ಅರ್ಜುನ್ ಇನ್ನಷ್ಟೇ ಅಧಿಕೃತ ಒಪ್ಪಿಗೆಯನ್ನು ಸೂಚಿಸಬೇಕಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ