AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾದಿಂದ ಅರ್ಧಕ್ಕೆ ಹೊರ ನಡೆದ ಪೂಜಾ ಹೆಗ್ಡೆಗೆ ಮತ್ತೊಂದು ಚಾನ್ಸ್ ಕೊಟ್ಟ ತ್ರಿವಿಕ್ರಂ ಶ್ರೀನಿವಾಸ್?

‘ಗುಂಟೂರು ಖಾರಂ’ ಸಿನಿಮಾದ ಕೆಲಸ ವಿಳಂಬ ಆಯಿತು. ಈ ಕಾರಣದಿಂದ ಪೂಜಾ ಹೆಗ್ಡೆಗೆ ಡೇಟ್​​ ಹೊಂದಿಸಲು ಸಾಧ್ಯವಾಗಿಲ್ಲ. ಹೀಗಾಗಿ, ಅವರು ಈ ಚಿತ್ರದಿಂದ ಹೊರ ನಡೆದರು.

ಸಿನಿಮಾದಿಂದ ಅರ್ಧಕ್ಕೆ ಹೊರ ನಡೆದ ಪೂಜಾ ಹೆಗ್ಡೆಗೆ ಮತ್ತೊಂದು ಚಾನ್ಸ್ ಕೊಟ್ಟ ತ್ರಿವಿಕ್ರಂ ಶ್ರೀನಿವಾಸ್?
ಪೂಜಾ-ತ್ರಿವಿಕ್ರಂ ಶ್ರೀನಿವಾಸ್
ರಾಜೇಶ್ ದುಗ್ಗುಮನೆ
|

Updated on: Jul 11, 2023 | 6:30 AM

Share

ಪೂಜಾ ಹೆಗ್ಡೆ (Pooja Hegde)  ಹಾಗೂ ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿದೆ. ‘ಅರವಿಂದ ಸಮೇತ ವೀರ ರಾಘವ’ ಚಿತ್ರದಲ್ಲಿ ಇವರಿಬ್ಬರೂ ಮೊದಲ ಬಾರಿಗೆ ಒಟ್ಟಾಗಿ ಕೆಲಸ ಮಾಡಿದ್ದರು. ‘ಅಲ ವೈಕುಂಟಪುರಮುಲೋ’ ಚಿತ್ರದಲ್ಲಿ ಇಬ್ಬರೂ ಮತ್ತೆ ಒಂದಾದರು. ‘ಗುಂಟೂರು ಖಾರಂ’ ಚಿತ್ರದ ಮೂಲಕ ಹ್ಯಾಟ್ರಿಕ್ ಬಾರಿಸುವ ತವಕದಲ್ಲಿದ್ದ ಇದ್ದರು. ಆದರೆ, ಈ ಚಿತ್ರದಿಂದ ಪೂಜಾ ಹೆಗ್ಡೆ ಹೊರ ನಡೆದಿದ್ದಾರೆ. ಇವರಿಗೆ ಮತ್ತೊಂದು ಚಾನ್ಸ್ ನೀಡೋಕೆ ತ್ರಿವಿಕ್ರಂ ಶ್ರೀನಿವಾಸ್ ಮುಂದಾಗಿದ್ದಾರೆ. ಹಾಗಂತ ಅವರ ನಿರ್ದೇಶನದ ಸಿನಿಮಾದಲ್ಲಿ ಅಲ್ಲ, ಅವರ ನಿರ್ಮಾಣದ ಹೊಸ ಚಿತ್ರಕ್ಕೆ ಪೂಜಾ ನಾಯಕಿ ಆಗಲಿದ್ದಾರೆ ಎನ್ನಲಾಗಿದೆ.

‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್ ಬಾಬು ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಆದರೆ, ಹಲವು ಕಾರಣದಿಂದ ಸಿನಿಮಾ ಕೆಲಸ ವಿಳಂಬ ಆದವು. ಈ ಮಧ್ಯೆ ಸಿನಿಮಾದ ಸ್ಕ್ರಿಪ್ಟ್​ನಲ್ಲಿ ತ್ರಿವಿಕ್ರಂ ಶ್ರೀನಿವಾಸ್ ಕೆಲ ಬದಲಾವಣೆ ಮಾಡಿಕೊಂಡರು ಎನ್ನಲಾಗಿದೆ. ಈ ಕಾರಣದಿಂದ ಪೂಜಾ ಹೆಗ್ಡೆಗೆ ಡೇಟ್​​ ಹೊಂದಿಸಲು ಸಾಧ್ಯವಾಗಿಲ್ಲ. ಹೀಗಾಗಿ, ಅವರು ಈ ಚಿತ್ರದಿಂದ ಹೊರ ನಡೆದರು.

ನಾಯಕಿಯರು ಈ ರೀತಿ ಅರ್ಧದಲ್ಲಿ ಸಿನಿಮಾದಿಂದ ಹೊರ ನಡೆದರೆ ನಿರ್ದೇಶಕರಿಗೆ ಕೋಪ ಬರುತ್ತದೆ. ಅವರು ಎಂದಿಗೂ ಆ ಹೀರೋಯಿನ್ ಜೊತೆ ಮತ್ತೆ ಸಿನಿಮಾ ಮಾಡ ಬಯಸುವುದಿಲ್ಲ. ಆದರೆ, ತ್ರಿವಿಕ್ರಂ ಶ್ರೀನಿವಾಸ್ ಆ ರೀತಿ ಅಲ್ಲ. ಪೂಜಾ ಹೆಗ್ಡೆ ಮೇಲೆ ಮೊದಲಿದ್ದಷ್ಟೇ ಗೌರವ ಈಗಲೂ ಇದೆ. ಈ ಕಾರಣಕ್ಕೆ ಅವರು ಮತ್ತೊಂದು ಆಫರ್ ನೀಡಿದ್ದಾರೆ.

ಇದನ್ನೂ ಓದಿ: Pooja Hegde: ಸರಿಯಾದ ಅವಕಾಶ ಇಲ್ಲದೇ ಐಟಂ ಡ್ಯಾನ್ಸ್​ ಮಾಡಲು ಮುಂದಾದ್ರಾ ನಟಿ ಪೂಜಾ ಹೆಗ್ಡೆ?

ಸಂಪತ್ ನಂದಿ ನಿರ್ದೇಶನದ ಚಿತ್ರದಲ್ಲಿ ಸಾಯಿ ಧರಂ ತೇಜ್ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಲು ಪೂಜಾ ಹೆಗ್ಡೆಗೆ ಆಫರ್ ನೀಡಲಾಗಿದೆ. ತ್ರಿವಿಕ್ರಂ ಶ್ರೀನಿವಾಸ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ವರ್ಷದ ಅಂತ್ಯಕ್ಕೆ ಸಿನಿಮಾ ಸೆಟ್ಟೇರಲಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ. ಪೂಜಾ ಹೆಗ್ಡೆ ಸದ್ಯ ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಕೂಡ ಸೋತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ