AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್ ಸಿನಿಮಾ ಸೆಟ್​ನಲ್ಲಿ ತ್ರಿವಿಕ್ರಮ್, ಅಭಿಮಾನಿಗಳಿಗೆ ಆತಂಕ

Pawan Kalyan-Trivikram Srinivas: ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುಂಚೆ ಪ್ರಾರಂಭಿಸಿದ್ದ ‘ಹರಿ ಹರ ವೀರ ಮಲ್ಲು’ ಸಿನಿಮಾ ಅನ್ನು ಪೂರ್ಣಗೊಳಿಸಲು ಪವನ್ ಕಲ್ಯಾಣ್ ನಿರ್ಧರಿಸಿದ್ದಾರೆ. ಸಿನಿಮಾದ ಚಿತ್ರೀಕರಣವನ್ನು ಪವನ್ ಪ್ರಾರಂಭಿಸಿದ್ದಾರೆ. ಆದರೆ ಸಿನಿಮಾ ಸೆಟ್​ನಲ್ಲಿ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಕಾಣಿಸಿಕೊಂಡಿದ್ದು ಪವನ್ ಅಭಿಮಾನಿಗಳಲ್ಲಿ ಆತಂಕ ತಂದಿದೆ.

ಪವನ್ ಕಲ್ಯಾಣ್ ಸಿನಿಮಾ ಸೆಟ್​ನಲ್ಲಿ ತ್ರಿವಿಕ್ರಮ್, ಅಭಿಮಾನಿಗಳಿಗೆ ಆತಂಕ
Pawan Kalyan Trivikram Srinivas
ಮಂಜುನಾಥ ಸಿ.
|

Updated on: May 06, 2025 | 1:25 PM

Share

ಆಂಧ್ರ ಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ (Pawan Kalyan), ‘ಹರಿ ಹರ ವೀರ ಮಲ್ಲು’ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಆರು ದಿನಗಳ ಶೆಡ್ಯೂಲ್ ಇದಾಗಿದೆ. ಆಂಧ್ರ ವಿಧಾನಸಭೆ ಚುನಾವಣೆ ಘೋಷಣೆಗೆ ಮುಂಚೆ ಆರಂಭಿಸಲಾಗಿದ್ದ ಸಿನಿಮಾ ಚಿತ್ರೀಕರಣ ಇನ್ನೂ ಮುಗಿದಿಲ್ಲ, ಹಲವಾರು ಅಡೆ-ತಡೆಗಳ ಬಳಿಕ ಈಗ ಚಿತ್ರೀಕರಣ ಪೂರ್ಣಗೊಳಿಸುವ ನಿರ್ಧಾರ ಮಾಡಲಾಗಿದೆ. ಸಿನಿಮಾ ಚಿತ್ರೀಕರಣ ಪ್ರಾರಂಭ ಆಗಿದೆಯಾದರೂ ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಹೊಸ ಆತಂಕ ಶುರುವಾಗಿದೆ.

‘ಹರಿ ಹರ ವೀರ ಮಲ್ಲು’ ಸಿನಿಮಾ ಸೆಟ್​ನಲ್ಲಿ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಕಾಣಿಸಿಕೊಂಡಿದ್ದಾರೆ. ಇದು ಪವನ್ ಅಭಿಮಾನಿಗಳ ಆತಂಕ್ಕೆ ಕಾರಣವಾಗಿದೆ. ‘ಹರಿ ಹರ ವೀರ ಮಲ್ಲು’ ಸಿನಿಮಾಕ್ಕೆ ಈಗಾಗಲೇ ಇಬ್ಬರು ನಿರ್ದೇಶಕರಿದ್ದಾರೆ. ಕೃಷ್ಣ ಜಗರಲಮುಡಿ ಅಲಿಯಾಸ್ ಕೃಷ್ ಮತ್ತು ಜ್ಯೋತಿ ಕೃಷ್ಣ. ಈ ಇಬ್ಬರೂ ‘ಹರಿ ಹರ ವೀರ ಮಲ್ಲು’ ಸಿನಿಮಾ ನಿರ್ದೇಶಿಸಿದ್ದಾರೆ. ಈಗ ತ್ರಿವಿಕ್ರಮ್ ಶ್ರೀನಿವಾಸ್ ಸಹ ಈ ಸಿನಿಮಾಕ್ಕೆ ಕೈ ಹಾಕಿದ್ದಾರೆ ಎನ್ನಲಾಗುತ್ತಿದೆ. ಮೂರು ನಿರ್ದೇಶಕರು ಸೇರಿ ಸಿನಿಮಾ ಹಾಳು ಮಾಡುತ್ತಾರೇನೋ ಎಂಬ ಅನುಮಾನ ಅಭಿಮಾನಿಗಳದ್ದು.

ಇದನ್ನೂ ಓದಿ:ಹತ್ತಿರ ಕರೆದು ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ

ಮತ್ತೊಂದು ಭಯವೆಂದರೆ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡದೆ ಆದರೆ ಪವನ್​ ಸಿನಿಮಾಕ್ಕೆ ತೆರೆ ಮರೆಯಲ್ಲಿ ಕೆಲಸ ಮಾಡಿದ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಗಮನ ಸೆಳೆಯಲು ವಿಫಲವಾಗಿವೆ. ‘ಭಿಮ್ಲಾ ನಾಯಕ್’, ಜಯಂತ್ ಸಿ ಪರಾಂಜೆ ನಿರ್ದೇಶನ ಮಾಡಿದ್ದ ‘ತೀನ್ ಮಾರ್’ ಸಿನಿಮಾ ಇನ್ನೂ ಕೆಲ ಸಿನಿಮಾಗಳಿಗೆ ತ್ರಿವಿಕ್ರಮ್ ಸಂಭಾಷಣೆಗಾರ, ಕತೆಗಾರರಾಗಿ ಕೆಲಸ ಮಾಡಿದ್ದರು. ಆದರೆ ಆ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಪ್ರದರ್ಶನ ಕಂಡಿಲ್ಲ. ಇದು ಸಹ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ‘ವಕೀಲ್ ಸಾಬ್’ ಸಿನಿಮಾಕ್ಕೂ ತ್ರಿವಿಕ್ರಮ್ ಸಂಭಾಷಣೆ ಬರೆದಿದ್ದರು ಆ ಸಿನಿಮಾ ಹಿಟ್ ಆಗಿತ್ತು.

ತ್ರಿವಿಕ್ರಮ್ ಶ್ರೀನಿವಾಸ್ ಮತ್ತು ಪವನ್ ಕಲ್ಯಾಣ್ ಬಲು ಆಪ್ತ ಮಿತ್ರರು. ಪವನ್ ಕಲ್ಯಾಣ್​ ರಾಜಕೀಯ ಪ್ರವೇಶಿಸಿದ ಆರಂಭದಲ್ಲಿ ತ್ರಿವಿಕ್ರಮ್ ಶ್ರೀನಿವಾಸ್ ಸಾಕಷ್ಟು ಸಲಹೆಗಳನ್ನು ನೀಡುತ್ತಿದ್ದರಂತೆ. ಅವರಿಗೆ ಭಾಷಣದ ಪಾಯಿಂಟರ್ಸ್​ಗಳನ್ನು ಸಹ ಹಾಕಿಕೊಡುತ್ತಿದ್ದರಂತೆ. ಈಗಲೂ ಸಹ ಪವನ್ ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಬಲು ಆಪ್ತ ಮಿತ್ರರು. ಪವನ್ ಅತಿಯಾಗಿ ನಂಬಿ ಸಲಹೆ ಪಡೆಯುವ ಮಿತ್ರರಲ್ಲಿ ತ್ರಿವಿಕ್ರಮ್ ಶ್ರೀನಿವಾಸ್ ಪ್ರಮುಖರು. ಪವನ್​ಗಾಗಿ ತ್ರಿವಿಕ್ರಮ್ ‘ಜಲ್ಸಾ’, ‘ಅತ್ತಾರಿಂಟಿಕಿ ದಾರೇದಿ’ ಮತ್ತು ‘ಅಜ್ಞಾತನವಾಸಿ’ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ‘ಜಲ್ಸಾ’, ‘ಅತ್ತಾರಿಂಟಿಕಿ ದಾರೇದಿ’ ಸೂಪರ್ ಹಿಟ್ ಆದರೆ ‘ಅಜ್ಞಾತವಾಸಿ’ ಅಟ್ಟರ್ ಫ್ಲಾಪ್ ಆಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ