AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗ ತ್ಯಜಿಸಲಿದ್ದಾರೆ ಸ್ಟಾರ್ ನಿರ್ದೇಶಕ ತ್ರಿವಿಕ್ರಮ್, ಎಲ್ಲದಕ್ಕೂ ಕಾರಣ ಪವನ್ ಕಲ್ಯಾಣ್?

‘ಅತಡು’, ‘ಜಲ್ಸಾ’ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ತೆಲುಗಿಗೆ ನೀಡಿರುವ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಚಿತ್ರರಂಗದಿಂದ ದೂರಾಗಲಿದ್ದಾರೆ ಎನ್ನಲಾಗುತ್ತಿದೆ.

ಚಿತ್ರರಂಗ ತ್ಯಜಿಸಲಿದ್ದಾರೆ ಸ್ಟಾರ್ ನಿರ್ದೇಶಕ ತ್ರಿವಿಕ್ರಮ್, ಎಲ್ಲದಕ್ಕೂ ಕಾರಣ ಪವನ್ ಕಲ್ಯಾಣ್?
ಮಂಜುನಾಥ ಸಿ.
|

Updated on:Jun 09, 2024 | 10:10 AM

Share

‘ಅತಡು’, ‘ಜಲ್ಸಾ’, ‘ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’, ‘ಅರವಿಂದ ಸಮೇತ’, ‘ಅತ್ತಾರಿಂಟಿಕಿ ದಾರೇದಿ’, ‘ಅಲಾ ವೈಕುಂಟಪುರಂಲೋ’ ಇನ್ನೂ ಹಲವು ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ತೆಲುಗು ಚಿತ್ರರಂಗಕ್ಕೆ ನೀಡಿರುವ ಸ್ಟಾರ್ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ (Trivikram Srinivas) ಚಿತ್ರರಂಗಕ್ಕೆ ಗುಡ್ ಬೈ ಹೇಳಲಿದ್ದಾರೆ ಎಂಬ ಮಾತುಗಳು ಇತ್ತೀಚೆಗೆ ಬಲು ಜೋರಾಗಿ ಕೇಳಿ ಬರುತ್ತಿದೆ. ತ್ರಿವಿಕ್ರಮ್ ಶ್ರೀನಿವಾಸ್ ಚಿತ್ರರಂಗ ತೊರೆಯಲು ನಟ, ರಾಜಕಾರಣಿ ಪವನ್ ಕಲ್ಯಾಣ್ ಅವರೇ ಕಾರಣ ಎನ್ನಲಾಗುತ್ತಿದೆ.

ಪವನ್ ಕಲ್ಯಾಣ್ ಹಾಗೂ ತ್ರಿವಿಕ್ರಮ್ ಆತ್ಮೀಯ ಸ್ನೇಹಿತರು. ತ್ರಿವಿಕ್ರಮ್ ನಿರ್ದೇಶನದ ಮೂರು ಸಿನಿಮಾಗಳಲ್ಲಿ ಪವನ್ ಕಲ್ಯಾಣ್ ನಟಿಸಿದ್ದಾರೆ. ಅಲ್ಲದೆ ಪವನ್​ರ ಬೇರೆ ಮೂರು ಸಿನಿಮಾಗಳಿಗೆ ಚಿತ್ರಕತೆ, ಸಂಭಾಷಣೆಗಳನ್ನು ತ್ರಿವಿಕ್ರಮ್ ಬರೆದುಕೊಂಡಿದ್ದಾರೆ. ಇಬ್ಬರ ಆಲೋಚನೆ, ಆದರ್ಶಗಳು ಬಹುತೇಕ ಒಂದೆ ಆಗಿರುವ ಕಾರಣ ಈ ಇಬ್ಬರು ಬಹಳ ಆತ್ಮೀಯರಾಗಿದ್ದು, ಪರಸ್ಪರರ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಮಾಡುತ್ತಿರುತ್ತಾರೆ. ಪವನ್ ಕಲ್ಯಾಣ್​ರ ರಾಜಕೀಯ ಭಾಷಣಗಳನ್ನು ಸಹ ತ್ರಿವಿಕ್ರಮ್ ಬರೆದುಕೊಡುತ್ತಾರೆ ಸುದ್ದಿ ಹರಿದಾಡುತ್ತಿದೆ.

ಇದೀಗ ಹೊಸ ಸುದ್ದಿ ಹರಿದಾಡುತ್ತಿದ್ದು ತ್ರಿವಿಕ್ರಮ್ ಶ್ರೀನಿವಾಸ್, ಸಿನಿಮಾ ರಂಗ ತ್ಯಜಿಸುತ್ತಿದ್ದಾರೆ ಎನ್ನಲಾಗಿದೆ. ಪವನ್ ಕಲ್ಯಾಣ್ ಇದೀಗ ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ್ದು, ಈ ಬಾರಿ ಅವರಿಗೆ ಮಂತ್ರಿಗಿರಿ ಸಹ ಲಭಿಸಲಿದೆ. ಹಾಗಾಗಿ ತ್ರಿವಿಕ್ರಮ್ ಶ್ರೀನಿವಾಸ್ ಪವನ್​ ಹಾಗೂ ಟಿಡಿಪಿ ಸರ್ಕಾರದ ಸಲಹೆಗಾರರಾಗಿ ನೇಮಕೊಳ್ಳಲಿದ್ದಾರೆ. ಹಾಗಾಗಿ ಚಿತ್ರರಂಗವನ್ನು ತ್ಯಜಿಸಿ ಮುಂದಿನ ಐದು ವರ್ಷಗಳು ಸರ್ಕಾರದ ಸಲಹೆಗಾರರಾಗಿ ವೃತ್ತಿವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಪವನ್ ಕಲ್ಯಾಣ್ ಸಿನಿಮಾಗಳಿಗೆ ಹೆಚ್ಚಳವಾಯ್ತು ಬೇಡಿಕೆ, ದುಪ್ಪಟ್ಟು ಹಣಕ್ಕೆ ಮಾರಾಟ

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತ್ರಿವಿಕ್ರಮ್ ಶ್ರೀನಿವಾಸ್​ರ ಹತ್ತಿರದ ಸಂಬಂಧಿ ನಿರ್ಮಾಪಕ ನಾಗ ವಂಶಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅದೆಲ್ಲ ಸುಳ್ಳು ಸುದ್ದಿ ಅವರು ಚಿತ್ರರಂಗ ಬಿಡುತ್ತಿಲ್ಲ ಎಂದಿದ್ದಾರೆ. ತುಸು ಖಾರವಾಗಿಯೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ನಾಗ ವಂಶಿ, ‘ರಿಸಲ್ಟ್ ನೋಡಿ ಪತ್ರಕರ್ತರು ಯಾರಾದರೂ ಕೆಲಸ ಬಿಟ್ಟಿದ್ದಾರಾ? ಹಾಗಾದರೆ ಅವರೇಕೆ ಬಿಡುತ್ತಾರೆ?’ ಎಂದಿದ್ದಾರೆ.

ತ್ರಿವಿಕ್ರಮ್ ನಿರ್ದೇಶನದ ‘ಜಲ್ಸಾ’, ‘ಅಜ್ಞಾತವಾಸಿ’, ‘ಅತ್ತಾರಿಂಟಿಕಿ ದಾರೇದಿ’ ಸಿನಿಮಾಗಳಲ್ಲಿ ಪವನ್ ಕಲ್ಯಾಣ್ ನಟಿಸಿದ್ದಾರೆ. ಪವನ್ ನಟನೆಯ ‘ತೀನ್ ಮಾರ್’, ‘ಭೀಮ್ಲಾ ನಾಯಕ್’, ‘ಬ್ರೋ’ ಸಿನಿಮಾಗಳಿಗೆ ಚಿತ್ರಕತೆ ಮತ್ತು ಸಂಭಾಷಣೆಯನ್ನು ತ್ರಿವಿಕ್ರಮ್ ಬರೆದಿದ್ದಾರೆ. ತ್ರಿವಿಕ್ರಮ್ ನಿರ್ದೇಶನದ ‘ಗುಂಟೂರು ಖಾರಂ’ ಸಿನಿಮಾ ಕೆಲ ತಿಂಗಳ ಹಿಂದೆ ಬಿಡುಗಡೆ ಆಗಿ ಹಿಟ್ ಆಗಿದೆ. ಇದೀಗ ಅಲ್ಲು ಅರ್ಜುನ್ ಸಿನಿಮಾ ನಿರ್ದೇಶಿಸಲಿದ್ದಾರೆ ತ್ರಿವಿಕ್ರಮ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:08 am, Sun, 9 June 24

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!