AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗ ತ್ಯಜಿಸಲಿದ್ದಾರೆ ಸ್ಟಾರ್ ನಿರ್ದೇಶಕ ತ್ರಿವಿಕ್ರಮ್, ಎಲ್ಲದಕ್ಕೂ ಕಾರಣ ಪವನ್ ಕಲ್ಯಾಣ್?

‘ಅತಡು’, ‘ಜಲ್ಸಾ’ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ತೆಲುಗಿಗೆ ನೀಡಿರುವ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಚಿತ್ರರಂಗದಿಂದ ದೂರಾಗಲಿದ್ದಾರೆ ಎನ್ನಲಾಗುತ್ತಿದೆ.

ಚಿತ್ರರಂಗ ತ್ಯಜಿಸಲಿದ್ದಾರೆ ಸ್ಟಾರ್ ನಿರ್ದೇಶಕ ತ್ರಿವಿಕ್ರಮ್, ಎಲ್ಲದಕ್ಕೂ ಕಾರಣ ಪವನ್ ಕಲ್ಯಾಣ್?
ಮಂಜುನಾಥ ಸಿ.
|

Updated on:Jun 09, 2024 | 10:10 AM

Share

‘ಅತಡು’, ‘ಜಲ್ಸಾ’, ‘ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’, ‘ಅರವಿಂದ ಸಮೇತ’, ‘ಅತ್ತಾರಿಂಟಿಕಿ ದಾರೇದಿ’, ‘ಅಲಾ ವೈಕುಂಟಪುರಂಲೋ’ ಇನ್ನೂ ಹಲವು ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ತೆಲುಗು ಚಿತ್ರರಂಗಕ್ಕೆ ನೀಡಿರುವ ಸ್ಟಾರ್ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ (Trivikram Srinivas) ಚಿತ್ರರಂಗಕ್ಕೆ ಗುಡ್ ಬೈ ಹೇಳಲಿದ್ದಾರೆ ಎಂಬ ಮಾತುಗಳು ಇತ್ತೀಚೆಗೆ ಬಲು ಜೋರಾಗಿ ಕೇಳಿ ಬರುತ್ತಿದೆ. ತ್ರಿವಿಕ್ರಮ್ ಶ್ರೀನಿವಾಸ್ ಚಿತ್ರರಂಗ ತೊರೆಯಲು ನಟ, ರಾಜಕಾರಣಿ ಪವನ್ ಕಲ್ಯಾಣ್ ಅವರೇ ಕಾರಣ ಎನ್ನಲಾಗುತ್ತಿದೆ.

ಪವನ್ ಕಲ್ಯಾಣ್ ಹಾಗೂ ತ್ರಿವಿಕ್ರಮ್ ಆತ್ಮೀಯ ಸ್ನೇಹಿತರು. ತ್ರಿವಿಕ್ರಮ್ ನಿರ್ದೇಶನದ ಮೂರು ಸಿನಿಮಾಗಳಲ್ಲಿ ಪವನ್ ಕಲ್ಯಾಣ್ ನಟಿಸಿದ್ದಾರೆ. ಅಲ್ಲದೆ ಪವನ್​ರ ಬೇರೆ ಮೂರು ಸಿನಿಮಾಗಳಿಗೆ ಚಿತ್ರಕತೆ, ಸಂಭಾಷಣೆಗಳನ್ನು ತ್ರಿವಿಕ್ರಮ್ ಬರೆದುಕೊಂಡಿದ್ದಾರೆ. ಇಬ್ಬರ ಆಲೋಚನೆ, ಆದರ್ಶಗಳು ಬಹುತೇಕ ಒಂದೆ ಆಗಿರುವ ಕಾರಣ ಈ ಇಬ್ಬರು ಬಹಳ ಆತ್ಮೀಯರಾಗಿದ್ದು, ಪರಸ್ಪರರ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಮಾಡುತ್ತಿರುತ್ತಾರೆ. ಪವನ್ ಕಲ್ಯಾಣ್​ರ ರಾಜಕೀಯ ಭಾಷಣಗಳನ್ನು ಸಹ ತ್ರಿವಿಕ್ರಮ್ ಬರೆದುಕೊಡುತ್ತಾರೆ ಸುದ್ದಿ ಹರಿದಾಡುತ್ತಿದೆ.

ಇದೀಗ ಹೊಸ ಸುದ್ದಿ ಹರಿದಾಡುತ್ತಿದ್ದು ತ್ರಿವಿಕ್ರಮ್ ಶ್ರೀನಿವಾಸ್, ಸಿನಿಮಾ ರಂಗ ತ್ಯಜಿಸುತ್ತಿದ್ದಾರೆ ಎನ್ನಲಾಗಿದೆ. ಪವನ್ ಕಲ್ಯಾಣ್ ಇದೀಗ ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ್ದು, ಈ ಬಾರಿ ಅವರಿಗೆ ಮಂತ್ರಿಗಿರಿ ಸಹ ಲಭಿಸಲಿದೆ. ಹಾಗಾಗಿ ತ್ರಿವಿಕ್ರಮ್ ಶ್ರೀನಿವಾಸ್ ಪವನ್​ ಹಾಗೂ ಟಿಡಿಪಿ ಸರ್ಕಾರದ ಸಲಹೆಗಾರರಾಗಿ ನೇಮಕೊಳ್ಳಲಿದ್ದಾರೆ. ಹಾಗಾಗಿ ಚಿತ್ರರಂಗವನ್ನು ತ್ಯಜಿಸಿ ಮುಂದಿನ ಐದು ವರ್ಷಗಳು ಸರ್ಕಾರದ ಸಲಹೆಗಾರರಾಗಿ ವೃತ್ತಿವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಪವನ್ ಕಲ್ಯಾಣ್ ಸಿನಿಮಾಗಳಿಗೆ ಹೆಚ್ಚಳವಾಯ್ತು ಬೇಡಿಕೆ, ದುಪ್ಪಟ್ಟು ಹಣಕ್ಕೆ ಮಾರಾಟ

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತ್ರಿವಿಕ್ರಮ್ ಶ್ರೀನಿವಾಸ್​ರ ಹತ್ತಿರದ ಸಂಬಂಧಿ ನಿರ್ಮಾಪಕ ನಾಗ ವಂಶಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅದೆಲ್ಲ ಸುಳ್ಳು ಸುದ್ದಿ ಅವರು ಚಿತ್ರರಂಗ ಬಿಡುತ್ತಿಲ್ಲ ಎಂದಿದ್ದಾರೆ. ತುಸು ಖಾರವಾಗಿಯೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ನಾಗ ವಂಶಿ, ‘ರಿಸಲ್ಟ್ ನೋಡಿ ಪತ್ರಕರ್ತರು ಯಾರಾದರೂ ಕೆಲಸ ಬಿಟ್ಟಿದ್ದಾರಾ? ಹಾಗಾದರೆ ಅವರೇಕೆ ಬಿಡುತ್ತಾರೆ?’ ಎಂದಿದ್ದಾರೆ.

ತ್ರಿವಿಕ್ರಮ್ ನಿರ್ದೇಶನದ ‘ಜಲ್ಸಾ’, ‘ಅಜ್ಞಾತವಾಸಿ’, ‘ಅತ್ತಾರಿಂಟಿಕಿ ದಾರೇದಿ’ ಸಿನಿಮಾಗಳಲ್ಲಿ ಪವನ್ ಕಲ್ಯಾಣ್ ನಟಿಸಿದ್ದಾರೆ. ಪವನ್ ನಟನೆಯ ‘ತೀನ್ ಮಾರ್’, ‘ಭೀಮ್ಲಾ ನಾಯಕ್’, ‘ಬ್ರೋ’ ಸಿನಿಮಾಗಳಿಗೆ ಚಿತ್ರಕತೆ ಮತ್ತು ಸಂಭಾಷಣೆಯನ್ನು ತ್ರಿವಿಕ್ರಮ್ ಬರೆದಿದ್ದಾರೆ. ತ್ರಿವಿಕ್ರಮ್ ನಿರ್ದೇಶನದ ‘ಗುಂಟೂರು ಖಾರಂ’ ಸಿನಿಮಾ ಕೆಲ ತಿಂಗಳ ಹಿಂದೆ ಬಿಡುಗಡೆ ಆಗಿ ಹಿಟ್ ಆಗಿದೆ. ಇದೀಗ ಅಲ್ಲು ಅರ್ಜುನ್ ಸಿನಿಮಾ ನಿರ್ದೇಶಿಸಲಿದ್ದಾರೆ ತ್ರಿವಿಕ್ರಮ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:08 am, Sun, 9 June 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?