AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ಗೆ ಒಳ್ಳೆಯ ಟಿಆರ್​ಪಿ ಬರೋಕೆ ನೀವಲ್ಲ, ನಾನು ಕಾರಣ’; ಓಪನ್ ಆಗಿ ಹೇಳಿದ ಸುದೀಪ್

‘ಕಳೆದ ವರ್ಷ ಫಿನಾಲೆಯಲ್ಲಿ 12 ಟಿವಿಆರ್ ಸಿಕ್ಕಿತ್ತು. ಅದು ಅತಿ ಹೆಚ್ಚು ಎಂದು ಅನಿಸಿಕೊಂಡಿತ್ತು. 7 ಸರಾಸರಿ ಟಿವಿಆರ್ ಸಿಕ್ಕರೆ ಅದು ಒಳ್ಳೆಯ ಟಿಆರ್​ಪಿ ಎಂದರ್ಥ. ಸಿಸನ್ ಮಧ್ಯದಲ್ಲೇ ನಮಗೆ 12 ಟಿವಿಆರ್ ಸಿಕ್ಕಿದೆ’ ಎಂದು ಸುದೀಪ್ ಮೆಚ್ಚುಗೆ ಹೊರಹಾಕಿದರು.

‘ಬಿಗ್ ಬಾಸ್​ಗೆ ಒಳ್ಳೆಯ ಟಿಆರ್​ಪಿ ಬರೋಕೆ ನೀವಲ್ಲ, ನಾನು ಕಾರಣ’; ಓಪನ್ ಆಗಿ ಹೇಳಿದ ಸುದೀಪ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Dec 09, 2024 | 8:16 AM

Share

ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುತ್ತಿದ್ದಾರೆ ಎಂಬ ಕಾರಣಕ್ಕೆ ವೀಕೆಂಡ್​ನಲ್ಲಿ ಭರ್ಜರಿ ಟಿಆರ್​ಪಿ ಬರುತ್ತಿದೆ. ವಾರದ ದಿನಗಳಿಗೆ ಹೋಲಿಕೆ ಮಾಡಿದರೆ ವೀಕೆಂಡ್​ನಲ್ಲಿ ಟಿಆರ್​ಪಿ ಹೆಚ್ಚಿರುತ್ತದೆ. ಇದನ್ನು ಅನೇಕರು ಒಪ್ಪಿದ್ದಾರೆ. ಒಂದು ವಾರ ಸುದೀಪ್ ಅವರು ಬಿಗ್ ಬಾಸ್ ವೇದಿಕೆ ಏರಿರಲಿಲ್ಲ. ಆ ವಾರ ಟಿಆರ್​ಪಿ ಕುಸಿದಿತ್ತು. ಈಗ ಬಿಗ್ ಬಾಸ್ ಪೂರ್ಣಗೊಳ್ಳುತ್ತಿರುವಾಗ ಇದರ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ ಕಂಡಿದೆ. ಸುದೀಪ್ ಕೂಡ ಈ ಬಗ್ಗೆ ಮಾತನಾಡಿದ್ದಾರೆ.

‘ಕಳೆದ ವರ್ಷ ಫಿನಾಲೆಯಲ್ಲಿ 12 ಟಿವಿಆರ್ ಸಿಕ್ಕಿತ್ತು. ಅದು ಅತಿ ಹೆಚ್ಚು ಎಂದು ಅನಿಸಿಕೊಂಡಿತ್ತು. 7 ಸರಾಸರಿ ಟಿವಿಆರ್ ಸಿಕ್ಕರೆ ಅದು ಒಳ್ಳೆಯ ಟಿಆರ್​ಪಿ ಎಂದರ್ಥ. ಸಿಸನ್ ಮಧ್ಯದಲ್ಲೇ ನಮಗೆ 12 ಟಿವಿಆರ್ ಸಿಕ್ಕಿದೆ’ ಎಂದು ಸುದೀಪ್ ಮೆಚ್ಚುಗೆ ಹೊರಹಾಕಿದರು. ಅಲ್ಲದೆ ಮುಂದಿನ ದಿನಗಳಲ್ಲಿ ಟಿಆರ್​ಪಿ ಹೆಚ್ಚಬಹುದು ಎಂಬ ಸೂಚನೆಯನ್ನು ಅವರು ನೀಡಿದರು.

ಆ ಬಳಿಕ ಯಾವ ಸ್ಪರ್ಧಿಗಳಿಗೆ ಎಷ್ಟು ಟಿಆರ್​ಪಿ ನೀಡುತ್ತೀರಿ ಎಂಬ ಟಾಸ್ಕ್ ನೀಡಲಾಯಿತು. ಪ್ರತಿ ಸ್ಪರ್ಧಿ ಬಂದು 1ರಿಂದ 12ವರೆಗೆ ನೀಡಿದ ಸ್ಥಾನಗಳಲ್ಲಿ ಎದುರಾಳಿಗಳನ್ನು ಕೂರಿಸಬೇಕು. ಈ ವೇಳೆ ಸ್ಪರ್ಧಿಗಳು ಕಿತ್ತಾಡಿಕೊಂಡರು. ಆಗ ಸುದೀಪ್ ಅವರು ನೇರ ಮಾತುಗಳಲ್ಲಿ ಒಂದಷ್ಟು ವಿಚಾರಗಳನ್ನು ಹೇಳಿದರು. ‘ಒಬ್ಬರೂ ನಾನು ಮನೆಯಲ್ಲಿ ಏನೂ ಮಾಡುತ್ತಿಲ್ಲ, ಹೀಗಾಗಿ ನನ್ನನ್ನು ನಾನು ಕೆಳಕ್ಕೆ ಇಟ್ಟುಕೊಳ್ಳುತ್ತೇನೆ ಎಂದು ಹೇಳಿಲ್ಲ. 12 ಟಿವಿಆರ್​ ಬರೋಕೆ ನೀವಲ್ಲ, ನಾನು ಕಾರಣ’ ಎಂದು ಸುದೀಪ್ ನೇರ ಮಾತಲ್ಲಿ ಹೇಳಿದರು.

ಇದನ್ನೂ ಓದಿ: ‘ನಾವು ಸೋತಿಲ್ಲ, ಅವ್ರನ್ನ ಗೆಲ್ಲಿಸಿದ್ರು’: ಬಿಗ್​ಬಾಸ್​ ಮೇಲೆ ತ್ರಿವಿಕ್ರಮ್ ಆರೋಪ, ಕೆಂಡವಾದ ಸುದೀಪ್

ಈ ವೇಳೆ ಮನೆಯ ಎಲ್ಲಾ ಸ್ಪರ್ಧಿಗಳಿಗೆ ಇದು ಹೌದು ಎನಿಸಿದೆ. ಹೀಗಾಗಿ, ಅವರು ಎದ್ದು ನಿಂತು ಚಪ್ಪಾಳೆ ತಟ್ಟಿದರು. ‘ಹೊರಗೆ ಏನು ನಡೆಯುತ್ತಿದೆ ಎಂಬುದು ನಿಮಗೆ ಗೊತ್ತಿರಲ್ಲ. ಹೊರಗೆ ಬೇರೆಯದೇ ಇರುತ್ತದೆ’ ಎಂದರು. ಈ ಮೂಲಕ ದೊಡ್ಮನೆ ಒಳಗೆ ಅಂದುಕೊಂಡಿರುವುದು ಒಂದಾದರೆ, ಹೊರಗೆ ಬೇರೆ ರೀತಿಯಲ್ಲಿ ಇರುತ್ತದೆ ಎಂದು ಪರೋಕ್ಷವಾಗಿ ತಿಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:28 am, Mon, 9 December 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು