AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೇ ವಾರದಲ್ಲಿ ತುಕಾಲಿ ಸಂತೋಷ್​ ಹೊಸ ಕಾರು ಅಪಘಾತ; ಆಟೋ ಜಖಂ

ಹಾಸ್ಯನಟ, ಬಿಗ್​ ಬಾಸ್​ ಮಾಜಿ ಸ್ಪರ್ಧಿ ತುಕಾಲಿ ಸಂತೋಷ್​ ಅವರ ಕಾರು ಅಪಘಾತ ಆಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಸಮೀಪ ಈ ಘಟನೆ ನಡೆದಿದ್ದು, ಫೋಟೋಗಳು ಲಭ್ಯವಾಗಿವೆ. ತುಕಾಲಿ ಸಂತೋಷ್​ ಅವರ ಕಾರಿಗೆ ಆಟೋ ಡಿಕ್ಕಿ ಹೊಡಿದಿದೆ. ಗಾಯಗೊಂಡಿರುವ ಆಟೋ ಚಾಲಕನಿಗೆ ಕುಣಿಗಲ್​ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡೇ ವಾರದಲ್ಲಿ ತುಕಾಲಿ ಸಂತೋಷ್​ ಹೊಸ ಕಾರು ಅಪಘಾತ; ಆಟೋ ಜಖಂ
ತುಕಾಲಿ ಸಂತೋಷ್​ ಹೊಸ ಕಾರಿಗೆ ಅಪಘಾತ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Mar 13, 2024 | 10:17 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್ (Tukali Santhosh) ಅವರು ಕೆಲವೇ ದಿನಗಳ ಹಿಂದೆ ಹೊಸ ಕಾರು ಖರೀದಿ ಮಾಡಿದ್ದರು. ಹೊಸ ಕಾರು ಮನೆಗೆ ಬಂದು 2 ವಾರ ಕಳೆಯುವುದರೊಳಗೆ ಅಪಘಾತ (Tukali Santhosh Car Accident) ಸಂಭವಿಸಿದೆ. ತುಮಕೂರಿನಲ್ಲಿ ತುಕಾಲಿ ಸಂತೋಷ್​ ಅವರ ಕಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ. ಇದರಿಂದ ಕಿಯಾ ಕಾರು ಜಖಂ ಆಗಿದೆ. ಆಟೋ ಕೂಡ ಭಾಗಶಃ ಜಖಂ ಆಗಿದೆ. ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದೇ ಸಮಾಧಾನದ ಸಂಗತಿ. ತುಕಾಲಿ ಸಂತೋಷ್​ ಅವರ ಕಾರು (Tukali Santhosh Car) ಅಪಘಾತದ ಫೋಟೋಗಳು ಲಭ್ಯವಾಗಿವೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ತುಕಾಲಿ ಸಂತೋಷ್​ ಅವರು ಹೋಗುತ್ತಿದ್ದರು. ಅದೇ ವೇಳೆ ಕುಣಿಗಲ್​ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು. ತುಕಾಲಿ ಸಂತೋಷ್​ ಅವರ ಕಾರಿನ ಬಲಗಡೆಗೆ ಆಟೋ ಡಿಕ್ಕಿ ಹೊಡೆದಿದೆ. ಆಟೋ ಚಾಲಕನನ್ನು ಜಗದೀಶ್​ ಎಂದು ಗುರುತಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಆಟೋ ಚಾಲಕ ಜಗದೀಶ್​ ಮದ್ಯ ಸೇವಿಸಿದ್ದ ಎನ್ನಲಾಗಿದೆ. ಗಾಯಗೊಂಡಿರುವ ಜಗದೀಶ್​ಗೆ ಕುಣಿಗಲ್​ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರವನ್ನು ನಿರೀಕ್ಷಿಸಲಾಗಿದೆ. ಅಪಘಾತದ ಬಗ್ಗೆ ತುಕಾಲಿ ಸಂತೋಷ್​ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಕಾರು ಅಪಘಾತದ ಸುದ್ದಿಯಿಂದ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.

ಇದನ್ನೂ ಓದಿ: ‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್

ಹಾಸ್ಯ ನಟನಾಗಿ ತುಕಾಲಿ ಸಂತೋಷ್ ಅವರು ಗುರುತಿಸಿಕೊಂಡಿದ್ದಾರೆ. ‘ಬಿಗ್​ ಬಾಸ್ ಕನ್ನಡ ಸೀಸನ್​ 10’ ಮಾತ್ರವಲ್ಲದೇ ಇನ್ನೂ ಹಲವು ರಿಯಾಲಿಟಿ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಬಿಗ್​ ಬಾಸ್​ನಿಂದ ಸಿಕ್ಕ ಸಂಭಾವನೆಯಲ್ಲಿ ಕಿಯಾ ಕಾರು ಖರೀದಿ ಮಾಡಿದ್ದರು. ಪತ್ನಿ ಜೊತೆ ಶೋ ರೂಮ್​ಗೆ ತೆರಳಿ ಕಾರು ಖರೀದಿಸಿ ತುಕಾಲಿ ಸಂತೋಷ್ ಅವರು ಖುಷಿಪಟ್ಟಿದ್ದರು. ಕೆಲವೇ ದಿನಗಳ ಹಿಂದೆ ಅವರ ಹೊಸ ಕಾರಿನ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:48 pm, Wed, 13 March 24

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ