ಎರಡೇ ವಾರದಲ್ಲಿ ತುಕಾಲಿ ಸಂತೋಷ್​ ಹೊಸ ಕಾರು ಅಪಘಾತ; ಆಟೋ ಜಖಂ

ಹಾಸ್ಯನಟ, ಬಿಗ್​ ಬಾಸ್​ ಮಾಜಿ ಸ್ಪರ್ಧಿ ತುಕಾಲಿ ಸಂತೋಷ್​ ಅವರ ಕಾರು ಅಪಘಾತ ಆಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಸಮೀಪ ಈ ಘಟನೆ ನಡೆದಿದ್ದು, ಫೋಟೋಗಳು ಲಭ್ಯವಾಗಿವೆ. ತುಕಾಲಿ ಸಂತೋಷ್​ ಅವರ ಕಾರಿಗೆ ಆಟೋ ಡಿಕ್ಕಿ ಹೊಡಿದಿದೆ. ಗಾಯಗೊಂಡಿರುವ ಆಟೋ ಚಾಲಕನಿಗೆ ಕುಣಿಗಲ್​ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡೇ ವಾರದಲ್ಲಿ ತುಕಾಲಿ ಸಂತೋಷ್​ ಹೊಸ ಕಾರು ಅಪಘಾತ; ಆಟೋ ಜಖಂ
ತುಕಾಲಿ ಸಂತೋಷ್​ ಹೊಸ ಕಾರಿಗೆ ಅಪಘಾತ
Follow us
| Updated By: ಮದನ್​ ಕುಮಾರ್​

Updated on:Mar 13, 2024 | 10:17 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್ (Tukali Santhosh) ಅವರು ಕೆಲವೇ ದಿನಗಳ ಹಿಂದೆ ಹೊಸ ಕಾರು ಖರೀದಿ ಮಾಡಿದ್ದರು. ಹೊಸ ಕಾರು ಮನೆಗೆ ಬಂದು 2 ವಾರ ಕಳೆಯುವುದರೊಳಗೆ ಅಪಘಾತ (Tukali Santhosh Car Accident) ಸಂಭವಿಸಿದೆ. ತುಮಕೂರಿನಲ್ಲಿ ತುಕಾಲಿ ಸಂತೋಷ್​ ಅವರ ಕಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ. ಇದರಿಂದ ಕಿಯಾ ಕಾರು ಜಖಂ ಆಗಿದೆ. ಆಟೋ ಕೂಡ ಭಾಗಶಃ ಜಖಂ ಆಗಿದೆ. ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದೇ ಸಮಾಧಾನದ ಸಂಗತಿ. ತುಕಾಲಿ ಸಂತೋಷ್​ ಅವರ ಕಾರು (Tukali Santhosh Car) ಅಪಘಾತದ ಫೋಟೋಗಳು ಲಭ್ಯವಾಗಿವೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ತುಕಾಲಿ ಸಂತೋಷ್​ ಅವರು ಹೋಗುತ್ತಿದ್ದರು. ಅದೇ ವೇಳೆ ಕುಣಿಗಲ್​ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು. ತುಕಾಲಿ ಸಂತೋಷ್​ ಅವರ ಕಾರಿನ ಬಲಗಡೆಗೆ ಆಟೋ ಡಿಕ್ಕಿ ಹೊಡೆದಿದೆ. ಆಟೋ ಚಾಲಕನನ್ನು ಜಗದೀಶ್​ ಎಂದು ಗುರುತಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಆಟೋ ಚಾಲಕ ಜಗದೀಶ್​ ಮದ್ಯ ಸೇವಿಸಿದ್ದ ಎನ್ನಲಾಗಿದೆ. ಗಾಯಗೊಂಡಿರುವ ಜಗದೀಶ್​ಗೆ ಕುಣಿಗಲ್​ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರವನ್ನು ನಿರೀಕ್ಷಿಸಲಾಗಿದೆ. ಅಪಘಾತದ ಬಗ್ಗೆ ತುಕಾಲಿ ಸಂತೋಷ್​ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಕಾರು ಅಪಘಾತದ ಸುದ್ದಿಯಿಂದ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.

ಇದನ್ನೂ ಓದಿ: ‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್

ಹಾಸ್ಯ ನಟನಾಗಿ ತುಕಾಲಿ ಸಂತೋಷ್ ಅವರು ಗುರುತಿಸಿಕೊಂಡಿದ್ದಾರೆ. ‘ಬಿಗ್​ ಬಾಸ್ ಕನ್ನಡ ಸೀಸನ್​ 10’ ಮಾತ್ರವಲ್ಲದೇ ಇನ್ನೂ ಹಲವು ರಿಯಾಲಿಟಿ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಬಿಗ್​ ಬಾಸ್​ನಿಂದ ಸಿಕ್ಕ ಸಂಭಾವನೆಯಲ್ಲಿ ಕಿಯಾ ಕಾರು ಖರೀದಿ ಮಾಡಿದ್ದರು. ಪತ್ನಿ ಜೊತೆ ಶೋ ರೂಮ್​ಗೆ ತೆರಳಿ ಕಾರು ಖರೀದಿಸಿ ತುಕಾಲಿ ಸಂತೋಷ್ ಅವರು ಖುಷಿಪಟ್ಟಿದ್ದರು. ಕೆಲವೇ ದಿನಗಳ ಹಿಂದೆ ಅವರ ಹೊಸ ಕಾರಿನ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:48 pm, Wed, 13 March 24

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು