AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೇ ವಾರದಲ್ಲಿ ತುಕಾಲಿ ಸಂತೋಷ್​ ಹೊಸ ಕಾರು ಅಪಘಾತ; ಆಟೋ ಜಖಂ

ಹಾಸ್ಯನಟ, ಬಿಗ್​ ಬಾಸ್​ ಮಾಜಿ ಸ್ಪರ್ಧಿ ತುಕಾಲಿ ಸಂತೋಷ್​ ಅವರ ಕಾರು ಅಪಘಾತ ಆಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಸಮೀಪ ಈ ಘಟನೆ ನಡೆದಿದ್ದು, ಫೋಟೋಗಳು ಲಭ್ಯವಾಗಿವೆ. ತುಕಾಲಿ ಸಂತೋಷ್​ ಅವರ ಕಾರಿಗೆ ಆಟೋ ಡಿಕ್ಕಿ ಹೊಡಿದಿದೆ. ಗಾಯಗೊಂಡಿರುವ ಆಟೋ ಚಾಲಕನಿಗೆ ಕುಣಿಗಲ್​ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡೇ ವಾರದಲ್ಲಿ ತುಕಾಲಿ ಸಂತೋಷ್​ ಹೊಸ ಕಾರು ಅಪಘಾತ; ಆಟೋ ಜಖಂ
ತುಕಾಲಿ ಸಂತೋಷ್​ ಹೊಸ ಕಾರಿಗೆ ಅಪಘಾತ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on:Mar 13, 2024 | 10:17 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್ (Tukali Santhosh) ಅವರು ಕೆಲವೇ ದಿನಗಳ ಹಿಂದೆ ಹೊಸ ಕಾರು ಖರೀದಿ ಮಾಡಿದ್ದರು. ಹೊಸ ಕಾರು ಮನೆಗೆ ಬಂದು 2 ವಾರ ಕಳೆಯುವುದರೊಳಗೆ ಅಪಘಾತ (Tukali Santhosh Car Accident) ಸಂಭವಿಸಿದೆ. ತುಮಕೂರಿನಲ್ಲಿ ತುಕಾಲಿ ಸಂತೋಷ್​ ಅವರ ಕಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ. ಇದರಿಂದ ಕಿಯಾ ಕಾರು ಜಖಂ ಆಗಿದೆ. ಆಟೋ ಕೂಡ ಭಾಗಶಃ ಜಖಂ ಆಗಿದೆ. ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದೇ ಸಮಾಧಾನದ ಸಂಗತಿ. ತುಕಾಲಿ ಸಂತೋಷ್​ ಅವರ ಕಾರು (Tukali Santhosh Car) ಅಪಘಾತದ ಫೋಟೋಗಳು ಲಭ್ಯವಾಗಿವೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ತುಕಾಲಿ ಸಂತೋಷ್​ ಅವರು ಹೋಗುತ್ತಿದ್ದರು. ಅದೇ ವೇಳೆ ಕುಣಿಗಲ್​ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು. ತುಕಾಲಿ ಸಂತೋಷ್​ ಅವರ ಕಾರಿನ ಬಲಗಡೆಗೆ ಆಟೋ ಡಿಕ್ಕಿ ಹೊಡೆದಿದೆ. ಆಟೋ ಚಾಲಕನನ್ನು ಜಗದೀಶ್​ ಎಂದು ಗುರುತಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಆಟೋ ಚಾಲಕ ಜಗದೀಶ್​ ಮದ್ಯ ಸೇವಿಸಿದ್ದ ಎನ್ನಲಾಗಿದೆ. ಗಾಯಗೊಂಡಿರುವ ಜಗದೀಶ್​ಗೆ ಕುಣಿಗಲ್​ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರವನ್ನು ನಿರೀಕ್ಷಿಸಲಾಗಿದೆ. ಅಪಘಾತದ ಬಗ್ಗೆ ತುಕಾಲಿ ಸಂತೋಷ್​ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಕಾರು ಅಪಘಾತದ ಸುದ್ದಿಯಿಂದ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.

ಇದನ್ನೂ ಓದಿ: ‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್

ಹಾಸ್ಯ ನಟನಾಗಿ ತುಕಾಲಿ ಸಂತೋಷ್ ಅವರು ಗುರುತಿಸಿಕೊಂಡಿದ್ದಾರೆ. ‘ಬಿಗ್​ ಬಾಸ್ ಕನ್ನಡ ಸೀಸನ್​ 10’ ಮಾತ್ರವಲ್ಲದೇ ಇನ್ನೂ ಹಲವು ರಿಯಾಲಿಟಿ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಬಿಗ್​ ಬಾಸ್​ನಿಂದ ಸಿಕ್ಕ ಸಂಭಾವನೆಯಲ್ಲಿ ಕಿಯಾ ಕಾರು ಖರೀದಿ ಮಾಡಿದ್ದರು. ಪತ್ನಿ ಜೊತೆ ಶೋ ರೂಮ್​ಗೆ ತೆರಳಿ ಕಾರು ಖರೀದಿಸಿ ತುಕಾಲಿ ಸಂತೋಷ್ ಅವರು ಖುಷಿಪಟ್ಟಿದ್ದರು. ಕೆಲವೇ ದಿನಗಳ ಹಿಂದೆ ಅವರ ಹೊಸ ಕಾರಿನ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:48 pm, Wed, 13 March 24

Follow Us
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್