ಬರ್ತಿದೆ ‘ತುಂಬಾಡ್ 2’ ಸಿನಿಮಾ; ಖಳನಾಗಿ ಅಕ್ಷಯ್ ಖನ್ನಾ ಎಂಟ್ರಿ?

2018ರ ಹಿಟ್ ಚಿತ್ರ 'ತುಂಬಾಡ್' ಮುಂದುವರಿದ ಭಾಗ 'ತುಂಬಾಡ್ 2' ಶೀಘ್ರದಲ್ಲೇ ತೆರೆಗೆ ಬರಲಿದೆ. ನಟ-ನಿರ್ಮಾಪಕ ಸೋಹಮ್ ಶಾ, ಪೆನ್ ಸ್ಟುಡಿಯೋಸ್‌ನ ಜಯಂತಿಲಾಲ್ ಗಡಾ ಜೊತೆ ಕೈಜೋಡಿಸಿದ್ದಾರೆ. ಈ ಬಾರಿ ವಿನಾಯಕ ರಾವ್‍ಗೆ ಪ್ರಬಲ ಎದುರಾಳಿಯ ಹುಡುಕಾಟದಲ್ಲಿದ್ದು, ಅಕ್ಷಯ್ ಖನ್ನಾ ಅಥವಾ ನವಾಜುದ್ದೀನ್ ಸಿದ್ದಿಕಿ ಅಭಿನಯಿಸುವ ಸಾಧ್ಯತೆ ಇದೆ.

ಬರ್ತಿದೆ ‘ತುಂಬಾಡ್ 2’ ಸಿನಿಮಾ; ಖಳನಾಗಿ ಅಕ್ಷಯ್ ಖನ್ನಾ ಎಂಟ್ರಿ?
ತುಂಬಾಡ್
Edited By:

Updated on: Feb 17, 2026 | 11:08 AM

2018 ರಲ್ಲಿ ಬಿಡುಗಡೆಯಾದ ‘ತುಂಬಾಡ್’ ಚಿತ್ರ ಅನೇಕರಿಗೆ ಇಷ್ಟ ಆಗಿದೆ. ನಿಗೂಢ ಪ್ರಪಂಚ ಪ್ರೇಕ್ಷಕರಿಗೆ ರೋಮಾಂಚನ ಮೂಡಿಸುತ್ತಿತ್ತು. ಈ ಚಿತ್ರವು ಹಲವು ದಾಖಲೆಯನ್ನು ಸೃಷ್ಟಿಸಿತು. ಈ ಚಿತ್ರವು 2024ರಲ್ಲಿ ಮತ್ತೆ ದೊಡ್ಡ ಪರದೆಯ ಮೇಲೆ ಬಿಡುಗಡೆಯಾಯಿತು. ಈಗ ‘ತುಂಬಾಡ್ 2′ ಶೀಘ್ರದಲ್ಲೇ ಬರಲಿದೆಯಂತೆ. ಚಿತ್ರದ ನಟ ಮತ್ತು ನಿರ್ಮಾಪಕ ಸೋಹಮ್ ಶಾ, ಚಿತ್ರವನ್ನು ಇನ್ನಷ್ಟು ಅದ್ದೂರಿಯಾಗಿ ಮಾಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ, ಪೆನ್ ಸ್ಟುಡಿಯೋಸ್‌ನ ಜಯಂತಿಲಾಲ್ ಗಡಾ ಅವರೊಂದಿಗೆ ಕೈಜೋಡಿಸಿದ್ದಾರೆ.

‘ಗಂಗೂಬಾಯಿ ಕಥಿಯಾವಾಡಿ’ ನಂತಹ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ಬಾಲಿವುಡ್‌ಗೆ ನೀಡಿದ್ದು ಪೆನ್ ಸ್ಟುಡಿಯೋಸ್. ಇದು ‘ತುಂಬಾಡ್ 2’ನಲ್ಲಿಯೂ ಕೆಲಸ ಮಾಡುತ್ತಿದೆ. ಈ ಬಾರಿ ನಿರ್ಮಾಪಕರು ಸೋಹಮ್ ಶಾ ಪಾತ್ರದ ವಿನಾಯಕ್ ರಾವ್‌ಗೆ ಪರದೆಯ ಮೇಲೆ ಕಠಿಣ ಸ್ಪರ್ಧೆಯನ್ನು ನೀಡುವ ಪ್ರಬಲ ಖಳನಾಯಕನನ್ನು ಹುಡುಕುತ್ತಿದ್ದಾರೆ. ಈ ಪಾತ್ರಕ್ಕೆ ಇಬ್ಬರು ಜನಪ್ರಿಯ ಬಾಲಿವುಡ್ ನಟರನ್ನು ಪರಿಗಣಿಸಲಾಗುತ್ತಿದೆ. ಮೊದಲ ಹೆಸರು ನಟ ಅಕ್ಷಯ್ ಖನ್ನಾ, ಎರಡನೇ ಹೆಸರು ನವಾಜುದ್ದೀನ್ ಸಿದ್ದಿಕಿ.ಹಾಗಾಗಿ ಈಗ ಅಕ್ಷಯ್ ಖನ್ನಾ ‘ತುಂಬಾಡ 2’ ನಲ್ಲಿಯೂ ಕಾಣಿಸಿಕೊಳ್ಳುತ್ತಾರೆಯೇ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ.

ನಿರ್ಮಾಪಕರು ಮತ್ತು ನಿರ್ದೇಶಕರಿಗೆ ಒಂದೇ ಗುರಿ ಇದೆ – ಅದು ಭಯಾನಕ ಖಳನಾಯಕನನ್ನು ಹೊರತರುವುದು. ಸದ್ಯದ ಮಾಹಿತಿಯ ಪ್ರಕಾರ, ಚಿತ್ರತಂಡವು ಭಯಾನಕ ಮತ್ತು ಪ್ರೇಕ್ಷಕರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡುವ ವ್ಯಕ್ತಿಯನ್ನು ಹುಡುಕುತ್ತಿದೆ. ನಟರ ಆಯ್ಕೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಘೋಷಣೆ ಬಂದಿಲ್ಲವಾದರೂ, ಈ ಎರಡು ಹೆಸರುಗಳು ಚಿತ್ರದ ಬಗ್ಗೆ ಅಭಿಮಾನಿಗಳ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಮರು ಬಿಡುಗಡೆಯಲ್ಲಿ ಖುಲಾಯಿಸಿದ ಅದೃಷ್ಟ, ‘ತುಂಬಾಡ್’ ಭರ್ಜರಿ ಕಲೆಕ್ಷನ್

ಚಿತ್ರದ ಕಥೆಯ ಬಗ್ಗೆ ಹೇಳುವುದಾದರೆ, ದುರಾಸೆ, ಪುರಾಣ ಮತ್ತು ಮಾನಸಿಕ ಭಯಾನಕತೆಯನ್ನು ಸಿನಿಮಾ ಹೊಂದಿದೆ. ಕೊರೊನಾ ನಂತರ ಚಿತ್ರವು OTT ಪ್ಲಾಟ್‌ಫಾರ್ಮ್‌ನಲ್ಲಿ ಹಿಟ್ ಆಯಿತು. ಅದರ ನಂತರ, ಚಿತ್ರವು ಮತ್ತೆ ದೊಡ್ಡ ಪರದೆಯ ಮೇಲೆ ಬಿಡುಗಡೆಯಾಯಿತು. ನಂತರ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಲಾಭವನ್ನು ಗಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us