Tunisha Sharma: ಧಾರಾವಾಹಿಯ ಶೂಟಿಂಗ್​ ಸೆಟ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಕಿರುತೆರೆ ನಟಿ

ಟಿವಿ ಧಾರಾವಾಹಿಯೊಂದರ ಸೆಟ್​ನಲ್ಲಿ ಕಿರುತೆರೆ ನಟಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

Tunisha Sharma: ಧಾರಾವಾಹಿಯ ಶೂಟಿಂಗ್​ ಸೆಟ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಕಿರುತೆರೆ ನಟಿ
ನಟಿ ತುನಿಷಾ ಶರ್ಮಾ (ಸಂಗ್ರಹ ಚಿತ್ರ)  Image Credit source: timesnownews.com
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Dec 24, 2022 | 7:51 PM

ಟಿವಿ ಧಾರಾವಾಹಿಯೊಂದರ ಸೆಟ್​ನಲ್ಲಿ ಕಿರುತೆರೆ ನಟಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ‘ಅಲಿಬಾಬಾ ದಸ್ತಾನ್-ಎ-ಕಾಬೂಲ್’ (Ali Baba Ali Baba: Dastaan-E-Kabul) ಧಾರಾವಾಹಿಯ ನಟಿ ತುನಿಷಾ ಶರ್ಮಾ (Tunisha Sharma) (20) ಶನಿವಾರ (ಡಿ.24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ರೀಕರಣ ನಡೆಯುತ್ತಿದ್ದ ಧಾರಾವಾಹಿ ಸೆಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದರೆ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಸದ್ಯ ತುನಿಷಾ ಶರ್ಮಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭಿವಾಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಣ್ಣ ವಯಸ್ಸಿನಲ್ಲೇ ಕೊನೆಯುಸಿರೆಳೆದ ಕಿರುತೆರೆ ನಟಿ

ನಟಿ ತುನಿಷಾ ಶರ್ಮಾ ಅವರು ತಮ್ಮ 20ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ. ತುನಿಷಾ ಶರ್ಮಾ ಅವರು ಬಾಲ ಕಲಾವಿದರಾಗಿ ತಮ್ಮ ಕಲಾ ವೃತ್ತಿಯನ್ನು ಆರಂಭಿಸಿದ್ದರು. ಬಳಿಕ ‘ಭಾರತ್ ಕಾ ವೀರ್ ಪುತ್ರ ಮಹಾರಾಣಾ ಪ್ರತಾಪ್’ ಧಾರಾವಾಹಿ ಮೂಲಕ ಬಾಲಿವುಡ್​ ಕಿರುತೆಗೆ ಪಾದಾರ್ಪಣೆ ಮಾಡಿದ್ದರು.

ತುನಿಷಾ ಶರ್ಮಾ ಅವರ ವೃತ್ತಿಜೀವನ:

ತುನಿಷಾ ಶರ್ಮಾ ಅವರು ಪ್ರಸ್ತುತ ಸೋನಿ ಎಸ್‌ಎಬಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ‘ಅಲಿಬಾಬಾ ದಸ್ತಾನ್-ಎ-ಕಾಬೂಲ್’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಇಂಟರ್ನೆಟ್ ವಾಲಾ ಲವ್’ ಧಾರಾವಾಹಿಯಲ್ಲಿ ಕೂಡ ಅವರ ಪಾತ್ರ ಚೆನ್ನಾಗಿ ಮೂಡಿಬಂದಿತ್ತು. ಕೇವಲ ಧಾರಾವಾಹಿಗಳಲ್ಲಿ ಮಾತ್ರವಲ್ಲದೇ ‘ಫಿತೂರ್’, ‘ಬಾರ್ ಬಾರ್ ದೇಖೋ’, ‘ಕಹಾನಿ 2: ದುರ್ಗಾ ರಾಣಿ ಸಿಂಗ್’, ‘ದಬಾಂಗ್ 3’ ಮುಂತಾದ ಚಿತ್ರಗಳಲ್ಲಿಯೂ ತುನಿಷಾ ಶರ್ಮಾ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಧಾರ್ಮಿಕ ಭಯೋತ್ಪಾದನೆ ತಡೆಗೆ ತೆರಿಗೆ ಹಣ ಬಳಕೆ ಆಗುತ್ತಿದೆ’; ಬೊಬ್ಬೆ ಹೊಡೆದವರಿಗೆ ವಿವೇಕ್ ಅಗ್ನಿಹೋತ್ರಿ ತಿರುಗೇಟು

ವರದಿಗಳ ಪ್ರಕಾರ ನಟಿ ತುನಿಷಾ ಶರ್ಮಾ ತುಂಬಾ ಮೃದು ಸ್ವಭಾವದವರಾಗಿದ್ದು ಮತ್ತು ಸೋಶಿಯಲ್​ ಮೀಡಿಯಾದಲ್ಲಿ ತುಂಬಾ ಸಕ್ರಿಯರಾಗಿದ್ದರು. ಸೆಟ್‌ನಲ್ಲಿ ಸದಾ ಖುಷಿಯಿಂದ ಇರುತ್ತಿದ್ದ ತುನಿಷಾ ಶರ್ಮಾ ಅವರ ಹಠಾತ್​ ಆತ್ಮಹತ್ಯೆಯಿಂದ ಅಭಿಮಾನಿಗಳು ಹಾಗೂ ಕಿರುತೆರೆ ಮಂದಿ ಬೆಚ್ಚಿಬಿದ್ದಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:42 pm, Sat, 24 December 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ