AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಈ ಕಷ್ಟದಲ್ಲೂ ಅಕ್ಷಯ್​ ಕುಮಾರ್​ ಏನೂ ಸಹಾಯ ಮಾಡ್ತಿಲ್ವಾ? ಪತ್ನಿ ಟ್ವಿಂಕಲ್​ ಖನ್ನಾ ಕೊಟ್ರು ಖಡಕ್​ ಉತ್ತರ

ನಿವೃತ್ತ ಐಎಎಸ್​ ಅಧಿಕಾರಿಯೊಬ್ಬರು ಅಕ್ಷಯ್​ ಕುಮಾರ್​ರನ್ನು ಟೀಕಿಸಿದ್ದಾರೆ. ‘ದೇಣಿಗೆ ಸಂಗ್ರಹ ಮಾಡಿ ಜನರಿಗೆ ಸಹಾಯ ಮಾಡಿದಂತೆ ನಟಿಸುವ ಬದಲು ನಿಮ್ಮ ಕುಟುಂಬವು ಜನರ ಬಗ್ಗೆ ಇನ್ನಷ್ಟು ಕರುಣೆ ತೋರಿಸುವುದು ಒಳಿತು’ ಎಂದು ಹೇಳಿದ್ದಾರೆ.

Akshay Kumar: ಈ ಕಷ್ಟದಲ್ಲೂ ಅಕ್ಷಯ್​ ಕುಮಾರ್​ ಏನೂ ಸಹಾಯ ಮಾಡ್ತಿಲ್ವಾ? ಪತ್ನಿ ಟ್ವಿಂಕಲ್​ ಖನ್ನಾ ಕೊಟ್ರು ಖಡಕ್​ ಉತ್ತರ
ಅಕ್ಷಯ್ ಕುಮಾರ್ - ಟ್ವಿಂಕಲ್ ಖನ್ನಾ
ಮದನ್​ ಕುಮಾರ್​
|

Updated on: May 07, 2021 | 2:01 PM

Share

ಕಳೆದ ವರ್ಷ ಲಾಕ್​ಡೌನ್​ ಆದಾಗ ನಟ ಅಕ್ಷಯ್​ ಕುಮಾರ್​ ಅವರು ಪಿಎಂ ಕೇರ್ಸ್​ ಫಂಡ್​ಗೆ ಬರೋಬ್ಬರಿ 25 ಕೋಟಿ ರೂ.ಗಳನ್ನು ನೀಡಿದ್ದರು. ಅದನ್ನು ಕಂಡು ಎಲ್ಲರಿಗೂ ಅಚ್ಚರಿ ಆಗಿತ್ತು. ಅಲ್ಲದೆ, ಬೇರೆ ಸೆಲೆಬ್ರಿಟಿಗಳಿಗೂ ಅಕ್ಷಯ್ ಕುಮಾರ್​ ಮಾದರಿ ಆಗಿದ್ದರು. ಆ ಬಳಿಕವೂ ಕೂಡ ಅವರು ಅನೇಕ ರೀತಿಯಲ್ಲಿ ಜನರಿಗೆ ಸಹಾಯ ಮಾಡಿದ್ದರು. ಈ ವರ್ಷ ಮತ್ತೆ ಲಾಕ್​ಡೌನ್​ ಆಗಿದೆ. ಹಲವು ರಾಜ್ಯಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಯಲ್ಲಿದೆ. ದಿನದಿಂದ ದಿನಕ್ಕೆ ಪರಿಸ್ಥಿತಿ ಕೈ ಮೀರುತ್ತಿದೆ. ಚಿಕಿತ್ಸೆ ಸಿಗದೆ ಜನರು ಸಾಯುತ್ತಿದ್ದಾರೆ. ಈ ಸಮಯದಲ್ಲಿ ನಟ ಅಕ್ಷಯ್​ ಕುಮಾರ್​ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಮೂಡಿದೆ.

ಸದ್ಯ ದೇಶದಲ್ಲಿ ಆಕ್ಸಿಜನ್​ ಸಿಲಿಂಡರ್​ಗಳ ಕೊರತೆ ಎದುರಾಗಿದೆ. ಈ ಸಂದರ್ಭದಲ್ಲಿ ಆಕ್ಸಿಜನ್​ ಕಾನ್ಸಂಟ್ರೇಟರ್​ಗಳನ್ನು ಖರೀದಿಸಲು ಅನುಕೂಲ ಆಗುವಂತೆ ದೇಣಿಗೆ ನೀಡಿ ಎಂದು ಕರೆ ಕೊಟ್ಟು ಅಕ್ಷಯ್​ ಕುಮಾರ್​ ಅವರ ಪತ್ನಿ, ನಟಿ ಟ್ವಿಂಕಲ್​ ಖನ್ನಾ ಟ್ವೀಟ್​ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ನಿವೃತ್ತ ಐಎಎಸ್​ ಅಧಿಕಾರಿಯೊಬ್ಬರು ಅಕ್ಷಯ್​ ಕುಮಾರ್​ರನ್ನು ಟೀಕಿಸಿದ್ದಾರೆ. ‘ಟ್ವಿಂಕಲ್​ ಅವರೇ, ನಿಮ್ಮ ಗಂಡ ಭಾರತದ ಶ್ರೀಮಂತ ನಟರಲ್ಲಿ ಒಬ್ಬರು. ದೇಣಿಗೆ ಸಂಗ್ರಹ ಮಾಡಿ ಜನರಿಗೆ ಸಹಾಯ ಮಾಡಿದಂತೆ ನಟಿಸುವ ಬದಲು ನಿಮ್ಮ ಕುಟುಂಬವು ಜನರ ಬಗ್ಗೆ ಇನ್ನಷ್ಟು ಕರುಣೆ ತೋರಿಸುವುದು ಒಳಿತು’ ಎಂದು ಹೇಳಿದ್ದಾರೆ.

ಈ ಕಮೆಂಟ್​ನಿಂದಾಗಿ ಟ್ವಿಂಟಕ್​ ಖನ್ನಾ ಅವರಿಗೆ ಬೇಸರ ಆಗಿದೆ. ಜನರಿಗೆ ಸಾಕಷ್ಟು ಸಹಾಯ ಮಾಡಿದ ಬಳಿಕವೂ ಇಂಥ ಮಾತುಗಳನ್ನು ಕೇಳಬೇಕಾಗಿ ಬಂದಿರುವುದಕ್ಕೆ ಅವರು ನೊಂದುಕೊಂಡಂತಿದೆ. ಅದರ ನಡುವೆಯೂ ಅವರು ಆ ಟ್ವೀಟ್​ಗೆ ಖಡಕ್​ ಆಗಿ ಉತ್ತರ ನೀಡಿದ್ದಾರೆ.

‘ನಾವು ಈ ಕಾರಣಕ್ಕಾಗಿ 100 ಆಕ್ಸಿಜನ್​ ಕಾನ್ಸಂಟ್ರೇಟರ್​ಗಳನ್ನು ದೇಣಿಗೆ ರೂಪದಲ್ಲಿ ನೀಡಿದ್ದೇವೆ. ಇನ್ನೂ ಬೇರೆ ಬೇರೆ ರೀತಿಯಲ್ಲಿ ಸಹಾಯ ಮಾಡಿದ್ದೇವೆ. ಈಗಾಗಲೇ ನಾನು ಹೇಳಿರುವಂತೆ, ನಾವು-ನೀವು ಅನ್ನೊಂದು ಮುಖ್ಯ ಅಲ್ಲ. ಎಲ್ಲರೂ ಸೇರಿ ಏನು ಮಾಡುತ್ತೇವೆ ಎಂಬುದು ಮುಖ್ಯ. ಇಂಥ ಸಂದರ್ಭದಲ್ಲಿ ಕೈಲಾದಷ್ಟು ದಾನ ಮಾಡುವ ಬದಲು, ಜನರನ್ನು ಕುಗ್ಗಿಸಲು ನಿಮ್ಮ ಶಕ್ತಿ ಖರ್ಚು ಮಾಡುತ್ತಿರುವುದು ವಿಷಾದನೀಯ’ ಎಂದು ಟ್ವಿಂಕಲ್​ ಖನ್ನಾ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

ಕೊರೊನಾ ಏರಿಕೆ ಮಧ್ಯೆಯೇ ಅಕ್ಷಯ್​ ಕುಮಾರ್​ ಮಾಡಿದ್ರು ಅತಿ ದೊಡ್ಡ ಸಹಾಯ; ಗೌತಮ್​ ಗಂಭೀರ್​ ಮೆಚ್ಚುಗೆ

ಕೊವಿಡ್​ ಸಂಕಷ್ಟಕ್ಕೆ ಅನುಷ್ಕಾ-ವಿರಾಟ್​ 2 ಕೋಟಿ ರೂ. ದೇಣಿಗೆ; ನಿಧಿ ಸಂಗ್ರಹಕ್ಕೆ ಮುಂದಾದ ದಂಪತಿ

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?