Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaali Documentary: ಕಾಳಿ ದೇವಿಗೆ ಅವಮಾನ: ಭಾರಿ ವಿರೋಧದ ಬಳಿಕ ನಿರ್ದೇಶಕಿ ಲೀನಾ ಮಣಿಮೇಕಲೈ ಟ್ವೀಟ್​ಗೆ ತಡೆ

Leena Manimekalai Twitter: ‘ಕಾಳಿ’ ಸಾಕ್ಷ್ಯಚಿತ್ರದ ಪೋಸ್ಟರ್​ ಅನ್ನು ಟ್ವಿಟರ್​ ತಡೆ ಹಿಡಿದಿದೆ. ಈ ಬೆಳವಣಿಗೆಗಳ ಬಗ್ಗೆ ‘ಕಾಳಿ’ ಚಿತ್ರದ ನಿರ್ದೇಶಕಿ ಲೀನಾ ಮಣಿಮೇಕಲೈ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

Kaali Documentary: ಕಾಳಿ ದೇವಿಗೆ ಅವಮಾನ: ಭಾರಿ ವಿರೋಧದ ಬಳಿಕ ನಿರ್ದೇಶಕಿ ಲೀನಾ ಮಣಿಮೇಕಲೈ ಟ್ವೀಟ್​ಗೆ ತಡೆ
ಲೀನಾ ಮಣಿಮೇಕಲೈ, ವಿವಾದಿತ ‘ಕಾಳಿ’ ಡಾಕ್ಯುಮೆಂಟರಿ ಪೋಸ್ಟರ್​
Follow us
TV9 Web
| Updated By: ಮದನ್​ ಕುಮಾರ್​

Updated on:Jul 06, 2022 | 12:29 PM

ಡಾಕ್ಯುಮೆಂಟರಿಯ ಪೋಸ್ಟರ್​ನಲ್ಲಿ ಕಾಳಿ ದೇವಿಗೆ ಅವಮಾನ ಮಾಡಿದ ನಿರ್ದೇಶಕಿ ಲೀನಾ ಮಣಿಮೇಕಲೈ (Leena Manimekalai) ಅವರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಅದರ ಬೆನ್ನಲ್ಲೇ ಅವರ ಟ್ವೀಟ್​ ಅನ್ನು ತಡೆಹಿಡಿಯಲಾಗಿದೆ. ‘ಕಾಳಿ’ ಶೀರ್ಷಿಕೆಯಲ್ಲಿ ಲೀನಾ ಮಣಿಮೇಕಲೈ ಅವರು ಸಾಕ್ಷ್ಯಚಿತ್ರ ಮಾಡಿದ್ದಾರೆ. ಅದರ ಪೋಸ್ಟರ್​ (Kaali Documentary Poster) ವಿವಾದಾತ್ಮಕವಾಗಿದೆ. ಕಾಳಿ ದೇವಿಯು ಸಿಗರೇಟ್​ ಸೇದುತ್ತಿರುವ ಮತ್ತು ಕೈಯಲ್ಲಿ ಲೈಂಗಿಕ ಅಲ್ಪ ಸಂಖ್ಯಾತರ ಧ್ವಜ ಹಿಡಿದಿರುವ ಚಿತ್ರ ಇದೆ. ಈ ಪೋಸ್ಟರ್ ಅನ್ನು ಲೀನಾ ಮಣಿಮೇಕಲೈ ಅವರು ಟ್ವಿಟರ್​ನಲ್ಲಿ (Twitter) ಹಂಚಿಕೊಂಡಿದ್ದರು. ಜನರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಮತ್ತು ಅನೇಕ ಕಡೆಗಳಲ್ಲಿ ದೂರು ದಾಖಲಾದ ಪರಿಣಾಮ ಈ ಟ್ವೀಟ್​ ಅನ್ನು ಭಾರತದಲ್ಲಿ ತಡೆ ಹಿಡಿಯಲಾಗಿದೆ.

‘ಕಾಳಿ’ ಪೋಸ್ಟರ್​ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂಬ ಆರೋಪ ಇದೆ. ಹಾಗಾಗಿ ‘ಮಾಹಿತಿ ತಂತ್ರಜ್ಞಾನ ಕಾಯ್ದೆ 2000’ರ ಅನ್ವಯ ಈ ಪೋಸ್ಟ್​ ಅನ್ನು ತಡೆ ಹಿಡಿಯುವಂತೆ ಟ್ವಿಟರ್​ ಸಂಸ್ಥೆಗೆ ಸರ್ಕಾರ ಸೂಚನೆ ನೀಡಿತ್ತು. ಆದ್ದರಿಂದ ಟ್ವಿಟರ್​ ಈ ತೀರ್ಮಾನ ತೆಗೆದುಕೊಂಡಿದೆ. ಜುಲೈ 5ರಿಂದ ಈಚೆಗೆ ಈ ಟ್ವೀಟ್​ ಕಾಣಿಸುತ್ತಿಲ್ಲ.

ಕೆಲವು ಟ್ವೀಟ್​ಗಳನ್ನು ನಿರ್ಬಂಧಿಸುವಂತೆ ಸರ್ಕಾರವು ಟ್ವಿಟರ್​ಗೆ ಆಗಾಗ ಆದೇಶಿಸುತ್ತಿದೆ. ಈ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್​ಗೆ ಟ್ವಿಟರ್​ ಸಂಸ್ಥೆ ಅರ್ಜಿ ಸಲ್ಲಿಸಿದೆ. ಸರ್ಕಾರವು ತನ್ನ ಅಧಿಕಾರವನ್ನು ಈ ರೀತಿ ಬಳಸಿಕೊಳ್ಳುವ ಮೂಲಕ ಅನಗತ್ಯವಾಗಿ ಮಧ್ಯಪ್ರವೇಶ ಮಾಡುತ್ತಿರುವ ಕ್ರಮವನ್ನು ಪರಿಶೀಲಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಒಟ್ಟಾರೆ ಬೆಳವಣಿಗೆಗಳ ಬಗ್ಗೆ ‘ಕಾಳಿ’ ಚಿತ್ರದ ನಿರ್ದೇಶಕಿ ಲೀನಾ ಮಣಿಮೇಕಲೈ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ಇದನ್ನೂ ಓದಿ
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​
Image
Pranitha Subhash: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿದ ಪ್ರಣಿತಾ; ‘ಹಿಂದೂಗಳ ಜೀವ ಮುಖ್ಯ’ ಎಂದು ಫಲಕ ಹಿಡಿದ ನಟಿ
Image
ಯೋಗ ಎಂದರೆ ಹಿಂದೂ ಧರ್ಮಕ್ಕೆ ಸಂಬಂಧಿಸಿದ್ದಲ್ಲ, ಅದು ದೇಹಕ್ಕೆ ಸಂಬಂಧಿಸಿದ್ದು ಎಂದ ಜಗ್ಗೇಶ್​
Image
ಮುಸ್ಲಿಮರು ಮಾತ್ರವಲ್ಲ ಹಿಂದೂಗಳು ಕೂಡ ಗೋಮಾಂಸ ತಿನ್ನುತ್ತಾರೆ: ಸಿದ್ದರಾಮಯ್ಯ

ಇಷ್ಟೆಲ್ಲ ವಿವಾದ ಎಬ್ಬಿಸಿರುವ ಲೀನಾ ಮಣಿಮೇಕಲೈ ಅವರು ಕೆನಡಾದಲ್ಲಿ ವಾಸವಾಗಿದ್ದಾರೆ. ಆದರೆ ಅವರು ಮೂಲತಃ ಭಾರತದವರು. ತಮಿಳುನಾಡಿನವರಾದ ಅವರು ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಅದರ ಮೂಲಕ ಹಲವು ಪ್ರಯೋಗಗಳನ್ನು ಅವರು ಮಾಡಿದ್ದಾರೆ. ಅನೇಕ ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿ ಅವರು ಗುರುತಿಸಿಕೊಂಡಿದ್ದಾರೆ. ಹಲವಾರು ಚಿತ್ರೋತ್ಸವಗಳಲ್ಲಿ ಅವರ ಡಾಕ್ಯುಮೆಂಟರಿಗಳು ಪ್ರದರ್ಶನ ಆಗಿದ್ದೂ ಅಲ್ಲದೇ ಒಂದಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿವೆ.

ಇದನ್ನೂ ಓದಿ: Leena Manimekalai: ಕಾಳಿ ದೇವಿಗೆ ಅವಮಾನ ಮಾಡಿದ ಲೀನಾ ಮಣಿಮೇಕಲೈ ಯಾರು? ವಿವಾದ ಎಬ್ಬಿಸಿದ ಡೈರೆಕ್ಟರ್​ ಹಿನ್ನೆಲೆ ಇಲ್ಲಿದೆ

ಹಿಂದೂಗಳ ಅವಮಾನಿಸುವವರನ್ನು ಗಲ್ಲಿಗೇರಿಸಬೇಕು ಅಥವಾ ಗುಂಡು ಹೊಡೆದು ಸಾಯಿಸಬೇಕು: ‘ಕಾಳಿ’ ಪೋಸ್ಟರ್​ ವಿರುದ್ಧ ಕೆಎಸ್ ಈಶ್ವರಪ್ಪ ಕೆಂಡಾಮಂಡಲ

Published On - 12:29 pm, Wed, 6 July 22

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !