AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ರೀತಿ ಸಿಗರೇಟ್ ಸೇದಬೇಡಿ, ಸಿಕ್ಸ್ ಪ್ಯಾಕ್ ಮಾಡಿ: ಅಭಿಮಾನಿಗಳಿಗೆ ನಟನ ಬುದ್ಧಿಮಾತು

ಸಿಗರೇಟ್ ಸೇದುವ ಮೂಲಕ ನಟರನ್ನು ಅನುಕರಣೆ ಮಾಡುವುದು ಸುಲಭ. ಆದರೆ ಸಿಕ್ಸ್ ಪ್ಯಾಕ್ ಮಾಡುವುದು ಕಷ್ಟ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ಮಾಲಿವುಡ್ ಖ್ಯಾತ ನಟ ಉನ್ನಿ ಮುಕುಂದನ್ ಅವರು ಬುದ್ಧಿಮಾತು ಹೇಳಿದ್ದಾರೆ. ‘ಮಾರ್ಕೋ’ ಸಿನಿಮಾವನ್ನು ಉಲ್ಲೇಖಿಸಿ ಅವರು ಈ ವಿಷಯ ತಿಳಿಸಿದ್ದಾರೆ.

ನನ್ನ ರೀತಿ ಸಿಗರೇಟ್ ಸೇದಬೇಡಿ, ಸಿಕ್ಸ್ ಪ್ಯಾಕ್ ಮಾಡಿ: ಅಭಿಮಾನಿಗಳಿಗೆ ನಟನ ಬುದ್ಧಿಮಾತು
Unni Mukundan
ಮದನ್​ ಕುಮಾರ್​
|

Updated on: Apr 30, 2025 | 6:29 PM

Share

ಸ್ಟಾರ್ ಹೀರೋಗಳನ್ನು ಆರಾಧಿಸುವ ಅಭಿಮಾನಿಗಳು ಕೋಟ್ಯಂತರ ಮಂದಿ ಇದ್ದಾರೆ. ಸಿನಿಮಾದಲ್ಲಿ ಹೀರೋ ಸಿಗರೇಟ್ (Cigarette) ಸೇದಿದ್ದನ್ನು ನೋಡಿ ನಿಜಜೀವನದಲ್ಲಿ ಸಿಗರೇಟ್ ಚಟ ಹತ್ತಿಸಿಕೊಂಡವರು ಅನೇಕರಿದ್ದಾರೆ. ಅಂಥವರಿಗೆ ಮಾಲಿವುಡ್ ನಟ ಉನ್ನಿ ಮುಕುಂದನ್ ಅವರು ಬುದ್ಧಿಮಾತು ಹೇಳಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಸಿನಿಮಾದಲ್ಲಿ ತಮ್ಮನ್ನು ನೋಡಿ ಸಿಗರೇಟ್ ಸೇದುವ ಬದಲು ಸಿಕ್ಸ್ ಪ್ಯಾಕ್ (6 Pack Abs) ಮಾಡಿ ತೋರಿಸಿ ಎಂದು ಅಭಿಮಾನಿಗಳಿಗೆ ಉನ್ನಿ ಮುಕುಂದನ್ (Unni Mukundan) ಅವರು ಸವಾಲು ಹಾಕಿದ್ದಾರೆ.

ಇತ್ತೀಚೆಗೆ ಕಾಲಿವುಡ್ ನಟ ಸೂರ್ಯ ಕೂಡ ಇದೇ ಮಾತನ್ನು ಹೇಳಿದರು. ‘ರೆಟ್ರೋ’ ಸಿನಿಮಾದಲ್ಲಿ ಸೂರ್ಯ ಅವರು ರಫ್​ ಆ್ಯಂಡ್ ಟಫ್ ಪಾತ್ರ ಮಾಡಿದ್ದಾರೆ. ಮೇ 1ರಂದು ಬಿಡುಗಡೆ ಆಗಲಿರುವ ಈ ಸಿನಿಮಾದ ಟ್ರೇಲರ್​ನಲ್ಲಿ ಅವರು ಸಿಗರೇಟ್ ಸೇದುವ ದೃಶ್ಯ ಇದೆ. ಅದನ್ನು ಯಾರೂ ಅನುಕರಣೆ ಮಾಡಬಾರದು ಎಂದು ಸೂರ್ಯ ಹೇಳಿದರು. ಈಗ ಉನ್ನಿ ಮುಕುಂದನ್ ಕೂಡ ಈ ಬಗ್ಗೆ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ
Image
ಡ್ರಗ್ಸ್ ಪ್ರಕರಣ ಇಬ್ಬರು ಮಲಯಾಳಂ ನಿರ್ದೇಶಕರ ಬಂಧನ
Image
ಮಲಯಾಳಂ ನಟ ಶೈಮ್ ಟಾಮ್ ಚಾಕೊಗೆ ಕೊನೆ ಎಚ್ಚರಿಕೆ
Image
ಮಲಯಾಳಂ ಚಿತ್ರರಂಗ: ಒಂದೇ ತಿಂಗಳಲ್ಲಿ 52 ಕೋಟಿ ನಷ್ಟ
Image
ಈ ವರ್ಷ 700 ಕೋಟಿ ನಷ್ಟ ಕಂಡ ಮಲಯಾಳಂ ಚಿತ್ರರಂಗ: ಗೆದ್ದ ಸಿನಿಮಾಗಳೆಷ್ಟು?

ಸೂಪರ್ ಹಿಟ್ ‘ಮಾರ್ಕೋ’ ಸಿನಿಮಾದಲ್ಲಿ ಉನ್ನಿ ಮುಕುಂದನ್ ಅವರು ಸಿಗರೇಟ್ ಸೇದಿದ್ದರು. ಅಲ್ಲದೇ ಸಿಕ್ಸ್ ಪ್ಯಾಕ್ ಆ್ಯಬ್ಸ್ ಮೂಲಕವೇ ಗಮನ ಸೆಳೆದಿದ್ದರು. ಆದರೆ ಕೆಲವು ಅಭಿಮಾನಿಗಳು ಸಿಕ್ಸ್ ಪ್ಯಾಕ್ ಬಿಟ್ಟು ಸಿಗರೇಟ್ ಪ್ಯಾಕ್ ಹಿಡಿದರು! ಅಂಥವರನ್ನು ಉದ್ದೇಶಿಸಿ ಉನ್ನಿ ಮುಕುಂದನ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಪ್ರತಿ ಸಿಗರೇಟ್​ನ ತೂಕ ಅಂದಾಜು 1 ಗ್ರಾಂ ಇರುತ್ತದೆ. ಗಂಡಸರು ಹೈ ಆಗಲು 50 ಕೆಜಿ ಕಬ್ಬಿಣ ಎತ್ತುತ್ತಾರೆ. ಆಯ್ಕೆ ನಿಮ್ಮ ಕೈಯಲ್ಲಿ ಇದೆ. ಕೈಯಲ್ಲಿ ಸಿಗರೇಟ್ ಹಿಡಿದುಕೊಂಡು ಮಾರ್ಕೋ ಪಾತ್ರವನ್ನು ಅನುಕರಿಸುವುದು ಸುಲಭ. ಸಿಕ್ಸ್ ಪ್ಯಾಕ್ ಮಾಡಿಕೊಂಡು ಮಾರ್ಕೋ ಆಗಲು ಪ್ರಯತ್ನಿಸಿ. ಅದಕ್ಕೆ ತಾಕತ್ತು ಬೇಕು’ ಉನ್ನಿ ಮುಕುಂದನ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೂರ್ಯ ದಿನಕ್ಕೆ ಎಷ್ಟು ಸಿಗರೇಟ್ ಸೇದುತ್ತಾರೆ? ಅಭಿಮಾನಿಗಳ ಬಳಿ ಓಪನ್ ಆಗಿ ಹೇಳಿಕೊಂಡ ನಟ

ಉನ್ನಿ ಮುಕುಂದನ್ ಹೇಳಿದ ಈ ಮಾತಿಗೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಅಭಿಮಾನಿಗಳ ಆರೋಗ್ಯದ ಬಗ್ಗೆ ಕಾಳಜಿ ತೋರಿಸಿದ್ದಕ್ಕಾಗಿ ಅವರಿಗೆ ಭೇಷ್ ಎನ್ನಲಾಗಿದೆ. ಉನ್ನಿ ಮುಕುಂದನ್ ಅವರ ಈ ಪೋಸ್ಟ್ ವೈರಲ್ ಆಗಿದೆ. ಫ್ಯಾನ್ಸ್ ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ