AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಕಿಂಗ್ ಆಗಿದ್ದಾರೆ ಉಪೇಂದ್ರ, ಚಿತ್ರೀಕರಣ ಶುರು, ಆದರೆ…

Upendra: ಕನ್ನಡ ಸಿನಿಮಾ ಪ್ರೇಮಿಗಳ ಪಾಲಿಗೆ, ರಿಯಲ್ ಸ್ಟಾರ್, ಸೂಪರ್ ಸ್ಟಾರ್ ಆಗಿರುವ ಉಪೇಂದ್ರ ಇನ್ನು ಮುಂದೆ ‘ ಆಂಧ್ರ ಕಿಂಗ್. ಹೌದು, ಅವರ ಅಭಿಮಾನಿಗಳು ಉಪೇಂದ್ರ ಅವರ ಭಾರಿ ದೊಡ್ಡ ಕಟೌಟ್ ನಿಲ್ಲಿಸಿ, ಅದಕ್ಕೆ ಸ್ಪರ್ಧೆಗೆ ಬಿದ್ದು ಹಾರಗಳನ್ನು ಹಾಕುತ್ತಿದ್ದಾರೆ. ಉಪೇಂದ್ರ ಚಿತ್ರವಿರುವ ಟಿ-ಶರ್ಟ್ ತೊಟ್ಟುಕೊಂಡು ಉಪೇಂದ್ರಗೆ ‘ಆಂಧ್ರ ಕಿಂಗ್’ ಎಂದು ಜೈಕಾರಗಳನ್ನು ಹಾಕುತ್ತಿದ್ದಾರೆ. ಏನಿದು ಕತೆ? ಇಲ್ಲಿದೆ ಮಾಹಿತಿ...

ಆಂಧ್ರ ಕಿಂಗ್ ಆಗಿದ್ದಾರೆ ಉಪೇಂದ್ರ, ಚಿತ್ರೀಕರಣ ಶುರು, ಆದರೆ...
Upendra
ಮಂಜುನಾಥ ಸಿ.
|

Updated on:May 24, 2025 | 8:57 PM

Share

ಕನ್ನಡ ಸಿನಿಮಾ (Sandalwood) ಪ್ರೇಮಿಗಳ ಪಾಲಿಗೆ ಉಪೇಂದ್ರ ರಿಯಲ್ ಸ್ಟಾರ್, ಸೂಪರ್ ಸ್ಟಾರ್. ಆದರೆ ಈಗ ಉಪೇಂದ್ರ, ತೆಲುಗು ಚಿತ್ರರಂಗಕ್ಕೆ ಹೋಗಿ ಅಲ್ಲಿ ‘ಆಂಧ್ರ ಕಿಂಗ್’ ಆಗುತ್ತಿದ್ದಾರೆ. ಉಪೇಂದ್ರ ಅವರ ಭಾರಿ ದೊಡ್ಡ ಕಟೌಟ್ ಅನ್ನು ಚಿತ್ರಮಂದಿರದ ಮುಂದೆ ನಿಲ್ಲಿಸಲಾಗಿದೆ. ಉಪೇಂದ್ರ ಅವರ ಚಿತ್ರವಿರುವ ಶರ್ಟುಗಳನ್ನು ಧರಿಸಿ ಯುವಕರು ಜಯಘೋಷ ಹಾಕುತ್ತಿದ್ದಾರೆ. ಉಪೇಂದ್ರ ಸಿನಿಮಾದ ಮೊದಲ ದಿನದ ಮೊದಲ ಶೋ ನೋಡಲು ಭಾರಿ ಜನ ಸೇರಿದ್ದಾರೆ. ಯುವಕರಂತೂ ಸ್ಪರ್ಧೆಗೆ ಬಿದ್ದಂತೆ ಒಬ್ಬರ ಮೇಲೊಬ್ಬರು ಏರಿ ಉಪೇಂದ್ರ ಅವರ ಕಟೌಟ್​ಗೆ ಹಾರ ಹಾಕುತ್ತಿದ್ದಾರೆ. ‘ಆಂಧ್ರ ಕಿಂಗ್’ಗೆ ಜೈ ಎಂದು ಜಯಕಾರ ಹಾಕುತ್ತಿದ್ದಾರೆ. ಆದರೆ ಇದೆಲ್ಲವೂ ನಿಜವಾಗಿ ಅಲ್ಲ ಬದಲಿಗೆ ಸಿನಿಮಾನಲ್ಲಿ.

ಹೌದು, ತೆಲುಗಿನ ಹೊಸ ಸಿನಿಮಾನಲ್ಲಿ ಉಪೇಂದ್ರ ನಟಿಸುತ್ತಿದ್ದು, ಸಿನಿಮಾನಲ್ಲಿ ಸೂಪರ್ ಸ್ಟಾರ್ ಸೂರ್ಯ ಕುಮಾರ್ ಪಾತ್ರದಲ್ಲಿ ಉಪ್ಪಿ ನಟಿಸುತ್ತಿದ್ದಾರೆ. ಸಿನಿಮಾದ ಹೆಸರು ‘ಆಂಧ್ರ ಕಿಂಗ್’. ಸಿನಿಮಾದ ನಾಯಕ ಖ್ಯಾತ ನಟ ರಾಮ್ ಪೋತಿನೇನಿ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಟೀಸರ್​ ಪ್ರಕಾರ, ‘ಆಂಧ್ರ ಕಿಂಗ್’ ಸಿನಿಮಾನಲ್ಲಿ ಉಪೇಂದ್ರ ಆಂಧ್ರ ಕಿಂಗ್ ಅಂದರೆ ಸೂಪರ್ ಸ್ಟಾರ್ ಸೂರ್ಯ ಕುಮಾರ್, ರಾಮ್ ಪೋತಿನೇನಿ ಆಂಧ್ರ ಕಿಂಗ್​ನ ಅಪ್ಪಟ ಅಭಿಮಾನಿ. ಸ್ಟಾರ್ ನಟ ಮತ್ತು ಅಭಿಮಾನಿಯ ನಡುವೆ ನಡೆವ ಕತೆಯೇ ಈ ‘ಆಂಧ್ರ ಕಿಂಗ್’.

ಹೈದರಾಬಾದ್​ನಲ್ಲಿ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದ್ದು, ನಟ ಉಪೇಂದ್ರ ಇಂದು ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಸಿನಿಮಾ ಅನ್ನು ಮಹೇಶ್ ಬಾಬು ಪಿ ನಿರ್ದೇಶನ ಮಾಡುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ನಿರ್ಮಾಪಕರಾದ ನವೀನ್ ಯೆರಿನೇನಿ, ರವಿ ಶಂಕರ್ ಅವರುಗಳು ಮೈತ್ರಿ ಮೂವಿ ಮೇಕರ್ಸ್ ವತಿಯಿಂದ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಸಿನಿಮಾದ ನಾಯಕಿ ಭಾಗ್ಯಶ್ರೀ ಬೋರ್ಸೆ. ಸಿನಿಮಾಕ್ಕೆ ವಿವೇಕ್ ಮೆರ್ವಿನ್ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ:Mukul Dev Death: ಉಪೇಂದ್ರ ಚಿತ್ರದಲ್ಲಿ ವಿಲನ್ ಆಗಿದ್ದ ಜನಪ್ರಿಯ ನಟ ಮುಕುಲ್ ದೇವ್ ನಿಧನ       

ಉಪೇಂದ್ರ ಅವರನ್ನು ‘ಆಂಧ್ರ ಕಿಂಗ್’ ಎಂದು ಕರೆದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಲ್ಲಲ್ಲಿ ಸಣ್ಣ ಅಸಮಾಧಾನಗಳು ವ್ಯಕ್ತವಾಗಿವೆಯಾದರೂ ಅವು ದೊಡ್ಡ ಮಟ್ಟದಲ್ಲೇನೂ ಇಲ್ಲ. ಅಷ್ಟಕ್ಕೂ ಉಪೇಂದ್ರ ಅವರಿಗೆ ತೆಲುಗು ಚಿತ್ರರಂಗ ಹೊಸದೇನೂ ಅಲ್ಲ. 1997 ರಲ್ಲಿಯೇ ಅವರು ತೆಲುಗು ಸಿನಿಮಾ ನಿರ್ದೇಶಿಸಿದ್ದರು. 1998 ರಲ್ಲಿ ‘ಕನ್ಯಾದಾನಂ’ ತೆಲುಗು ಸಿನಿಮಾನಲ್ಲಿ ನಾಯಕನಾಗಿ ನಟಿಸಿದ್ದರು. ಆ ನಂತರ ಸಹ ಹಲವು ತೆಲುಗು ಸಿನಿಮಾಗಳಲ್ಲಿ ನಾಯಕ ನಟನಾಗಿ ಉಪೇಂದ್ರ ನಟಿಸಿದರು. ಇತ್ತೀಚೆಗೆ ಕೆಲ ವರ್ಷಗಳಿಂದ ಪೋಷಕ ಪಾತ್ರ, ವಿಲನ್ ಪಾತ್ರಗಳಲ್ಲಿ ಉಪೇಂದ್ರ ನಟಿಸುತ್ತಿದ್ದಾರೆ. ಈಗ ‘ಆಂಧ್ರ ಕಿಂಗ್’ ಸಿನಿಮಾನಲ್ಲಿಯೂ ಅವರು ವಿಲನ್ ಶೇಡ್​ ಇರುವ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:56 pm, Sat, 24 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ