ಲೋಕೇಶ್ ಕನಗರಾಜ್ ಬಳಿಕ ಮತ್ತೊಬ್ಬ ತಮಿಳು ಸ್ಟಾರ್ ನಿರ್ದೇಶಕನ ಸಿನಿಮಾನಲ್ಲಿ ಉಪ್ಪಿ
Upendra movie: 2008 ರಲ್ಲಿ ‘ಸತ್ಯ’ ಹೆಸರಿನ ತಮಿಳು ಸಿನಿಮಾನಲ್ಲಿ ನಟಿಸಿದ್ದ ಉಪೇಂದ್ರ, ಇತ್ತೀಚೆಗಷ್ಟೆ ರಜನೀಕಾಂತ್ ನಟಿಸಿ ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿರುವ ‘ಕೂಲಿ’ ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಮತ್ತೊಮ್ಮೆ ಉಪ್ಪಿಗೆ ತಮಿಳಿನಿಂದ ಬುಲಾವ್ ಬಂದಿದ್ದು, ತಮಿಳಿನ ಮತ್ತೊಬ್ಬ ಜನಪ್ರಿಯ ನಿರ್ದೇಶನ ಸಿನಿಮಾನಲ್ಲಿ ಉಪೇಂದ್ರ ನಟಿಸಲಿದ್ದಾರೆ.

ಉಪೇಂದ್ರ (Upendra) ಅವರಿಗೆ ಕನ್ನಡ ಮಾತ್ರವಲ್ಲದೆ ಪರ ಭಾಷೆಗಳಲ್ಲಿಯೂ ಭರ್ಜರಿ ಬೇಡಿಕೆ ಇದೆ. ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಉಪೇಂದ್ರಗೆ ತೆಲುಗು ಚಿತ್ರರಂಗದಲ್ಲಿ ದೊಡ್ಡ ಅಭಿಮಾನಿ ವರ್ಗವೇ ಇದೆ. ಅಲ್ಲಿನ ಕೆಲವು ಸ್ಟಾರ್ ನಟ, ನಿರ್ದೇಶಕರುಗಳು ಸಹ ಉಪೇಂದ್ರ ಅವರ ಅಭಿಮಾನಿಗಳು. 2008 ರಲ್ಲಿ ‘ಸತ್ಯ’ ಹೆಸರಿನ ತಮಿಳು ಸಿನಿಮಾನಲ್ಲಿ ನಟಿಸಿದ್ದ ಉಪೇಂದ್ರ, ಇತ್ತೀಚೆಗಷ್ಟೆ ರಜನೀಕಾಂತ್ ನಟಿಸಿ ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿರುವ ‘ಕೂಲಿ’ ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಮತ್ತೊಮ್ಮೆ ಉಪ್ಪಿಗೆ ತಮಿಳಿನಿಂದ ಬುಲಾವ್ ಬಂದಿದ್ದು, ತಮಿಳಿನ ಮತ್ತೊಬ್ಬ ಜನಪ್ರಿಯ ನಿರ್ದೇಶನ ಸಿನಿಮಾನಲ್ಲಿ ಉಪೇಂದ್ರ ನಟಿಸಲಿದ್ದಾರೆ.
‘ಪಿಜ್ಜಾ’, ‘ಜಿಗರ್ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಮಹಾನ್’, ‘ರೆಟ್ರೊ’ ಅಂಥಹಾ ಸಿನಿಮಾಗಳನ್ನು ನಿರ್ದೇಶಿಸಿರುವ ಕಾರ್ತಿಕ್ ಸುಬ್ಬರಾಜ್ ಅವರ ಹೊಸ ಸಿನಿಮಾನಲ್ಲಿ ಉಪೇಂದ್ರ ಪ್ರಮುಖವಾದ ಪಾತ್ರವೊಂದರಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ಅಥರ್ವ ನಾಯಕನಾಗಿ ನಟಿಸುತ್ತಿದ್ದು, ಈ ಸಿನಿಮಾದ ಬಹಳ ಪ್ರಮುಖ ಪಾತ್ರವೊಂದರಲ್ಲಿ ಉಪೇಂದ್ರ ನಟಿಸಲಿದ್ದಾರೆ. ಈ ಸಿನಿಮಾ ಅನ್ನು ಕಾರ್ತಿಕ್ ಸುಬ್ಬರಾಜು ಅವರು ತಮ್ಮ ಸ್ವಂತ ಬ್ಯಾನರ್ ಆಗಿರುವ ಸ್ಟೋನ್ ಬೆಂಚ್ ಮೂಲಕ ಖುದ್ದು ನಿರ್ಮಾಣ ಸಹ ಮಾಡುತ್ತಿದ್ದಾರೆ.
ಇದನ್ನೂ ಓದಿ:ಉಪೇಂದ್ರ ಅಣ್ಣನ ಮಗ ನಿರಂಜನ್ ನಿಶ್ಚಿತಾರ್ಥ; ಹುಡುಗಿ ಬಗ್ಗೆ ಇಲ್ಲಿದೆ ಮಾಹಿತಿ
ಕಾರ್ತಿಕ್ ಸುಬ್ಬರಾಜು ಪ್ರಸ್ತುತ ಆಸ್ಕರ್ ವಿಜೇತ ನಿರ್ಮಾಪಕಿ ಗುನೀತ್ ಮೊಂಗಾ ನಿರ್ಮಾಣ ಮಾಡುತ್ತಿರುವ ಸಿನಿಮಾದ ನಿರ್ದೇಶನ ಮಾಡುತ್ತಿದ್ದು, ಆ ಸಿನಿಮಾ ಅಂತಿಮ ಹಂತದಲ್ಲಿದೆ. ಸಿನಿಮಾಕ್ಕೆ ಇಳಯರಾಜ ಸಂಗೀತ ನೀಡಿದ್ದಾರೆ. ಆ ಸಿನಿಮಾ ಮುಗಿದ ಬಳಿಕ ಹೊಸ ಸಿನಿಮಾವನ್ನು ಕಾರ್ತಿಕ್ ಸುಬ್ಬರಾಜು ಕೈಗೆತ್ತಿಕೊಳ್ಳಲಿದ್ದಾರೆ. ಸಿನಿಮಾದ ಘೋಷಣೆ ಕೆಲವೇ ದಿನಗಳಲ್ಲಿ ಹೊರಬೀಳಲಿದೆ ಎನ್ನಲಾಗುತ್ತಿದೆ. ಉಪೇಂದ್ರ ಅವರು ಪ್ರಸ್ತುತ ಕೆಲವು ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಉಪೇಂದ್ರ ಅವರ ‘ಬುದ್ಧಿವಂತ 2’ ತಡವಾಗಿದೆ. ‘ಗೊರಿಲ್ಲಾ ವಾರ್’, ‘ಭಾರ್ಗವ’ ಮತ್ತು ಮತ್ತೊಂದು ಸಿನಿಮಾ ಚಿತ್ರೀಕರಣ ಹಂತದಲ್ಲಿದೆ. ‘ಕಬ್ಜ 2’ ಸಿನಿಮಾ ಸಹ ನಿರ್ಮಾಣ ಆಗಬೇಕಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




