AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ನಿರ್ದೇಶನಕ್ಕೆ ನಾನು ದೊಡ್ಡ ಫ್ಯಾನ್ ಎಂದ ರಜನಿ ಸಿನಿಮಾ ಡೈರೆಕ್ಟರ್

ಲೋಕೇಶ್ ಕನಗರಾಜ್ ಅವರು ತಮ್ಮ ಸಂದರ್ಶನದಲ್ಲಿ ರಜನಿಕಾಂತ್ ನಟನೆಯ 'ಕೂಲಿ' ಚಿತ್ರದಲ್ಲಿ ಉಪೇಂದ್ರರೊಂದಿಗೆ ಕೆಲಸ ಮಾಡುವ ಅನುಭವ ಹಂಚಿಕೊಂಡಿದ್ದಾರೆ. ಅವರು ಉಪೇಂದ್ರ ಅವರ ಅಭಿಮಾನಿಯಾಗಿದ್ದು, ಅವರ ನಿರ್ದೇಶನದ ಶಕ್ತಿಯನ್ನು ಅರ್ಥಮಾಡಿಕೊಂಡ ಬಳಿಕ ಈ ಚಿತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.

ಉಪೇಂದ್ರ ನಿರ್ದೇಶನಕ್ಕೆ ನಾನು ದೊಡ್ಡ ಫ್ಯಾನ್ ಎಂದ ರಜನಿ ಸಿನಿಮಾ ಡೈರೆಕ್ಟರ್
ರಜನಿ-ಉಪೇಂದ್ರ
 ಶ್ರೀಲಕ್ಷ್ಮೀ ಎಚ್
| Edited By: |

Updated on:May 14, 2025 | 7:48 AM

Share

ಕನ್ನಡದ ಖ್ಯಾತ ನಿರ್ದೇಶಕ ಉಪೇಂದ್ರ (Upendra) ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿಡಿದ್ದಾರೆ. ಅವರು ನಿರ್ದೇಶನ ಮಾಡಿದ್ದ ‘ಓಂ’ ಸಿನಿಮಾ ಬೇರೆಯದೇ ದಾಖಲೆಯನ್ನು ಹೊಂದಿರೋದು ಗೊತ್ತೇ ಇದೆ. ಅವರಿಗೆ ಕೇವಲ ಜನ ಸಾಮಾನ್ಯರು ಮಾತ್ರವಲ್ಲ, ಸೆಲೆಬ್ರಿಟಿಗಳು ಕೂಡ ಅಭಿಮಾನಿ ಆಗಿದ್ದಾರೆ. ಇದರಲ್ಲಿ ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾ ನಿರ್ದೇಶಕ ಲೋಕೇಶ್ ಕನಗರಾಜ್ ಕೂಡ ಇದ್ದಾರೆ ಅನ್ನೋದು ಗೊತ್ತ? ಆ ಬಗ್ಗೆ ಅವರು ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ.

ಲೋಕೇಶ್ ಕನಗರಾಜ್ ಅವರು ತಮಿಳಿನ ಖ್ಯಾತ ನಿರ್ದೇಶಕರು. ಅವರು ‘ಕೈದಿ’, ‘ಮಾಸ್ಟರ್’, ‘ವಿಕ್ರಮ್’ ರೀತಿಯ ಚಿತ್ರಗಳನ್ನು ನೀಡಿದ್ದು ಗೊತ್ತೇ ಇದೆ. ಅವರ ಕೊನೆಯ ಸಿನಿಮಾ ‘ಲಿಯೋ’ ಹೆಚ್ಚು ಸದ್ದು ಮಾಡದೆ ಇರಬಹುದು. ಆದರೆ, ಸಿನಿಮಾ ಮೆಚ್ಚುಗೆಯನ್ನಂತೂ ಪಡೆದಿದೆ. ಉತ್ತಮ ಬಿಸ್ನೆಸ್ ಮಾಡಿದೆ. ಈಗ ಅವರು ನಿರ್ದೇಶನ ಮಾಡುತ್ತಿರುವ ‘ಕೂಲಿ’ ಚಿತ್ರದಲ್ಲಿ ರಜನಿಕಾಂತ್ ಜೊತೆ ಉಪೇಂದ್ರ ಕೂಡ ಇದ್ದಾರೆ.

ಇದನ್ನೂ ಓದಿ
Image
ಪವನ್ ಕಲ್ಯಾಣ್ ಹಳೆಯ ಚಿತ್ರಕ್ಕೆ ಕೊನೆಗೂ ಬಂತು ರಿಲೀಸ್ ಭಾಗ್ಯ
Image
ರಶ್ಮಿಕಾ ಮಂದಣ್ಣ ಹೀರೋ ಜೊತೆ ತೆಲುಗು ಸಿನಿಮಾ ಘೋಷಿಸಿದ ಸಪ್ತಮಿ ಗೌಡ
Image
ರಾಜ್​ಕುಮಾರ್ ಸದಾ ಬಿಳಿ ಪಂಚೆ, ಶರ್ಟ್​ನಲ್ಲೇ ಇರುತ್ತಿದ್ದರೇಕೆ?
Image
ನನ್ನ ತಂದೆ ಪಾಕಿಸ್ತಾನದವರು ಎಂದಿದ್ದ ಶಾರುಖ್ ಖಾನ್; ಈ ಕಾರಣಕ್ಕೆ ಮೌನ?

ಉಪೇಂದ್ರ ಬಗ್ಗೆ ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ ಲೋಕೇಶ್ ಅವರು. ‘ನನಗೆ ಉಪೇಂದ್ರ ಅಂದ್ರೆ ಇಷ್ಟ. ಉಪೇಂದ್ರ ಅವರ ನಿರ್ದೇಶನಕ್ಕೆ ನಾನು ಫ್ಯಾನ್. ಅವರ ಸ್ಟ್ರೆಂತ್ ಏನು ಎಂದು ತಿಳಿದುಕೊಳ್ಳದೆ ಅವರ ಜೊತೆ ಸಿನಿಮಾ ಮಾಡಲು ಸಾಧ್ಯವಿಲ್ಲ. ಅವರು ಸಿನಿಮಾದಲ್ಲಿ ಏನು ಮಾಡುತ್ತಾರೆ ಎಂದು ತಿಳಿದುಕೊಂಡ ಬಳಿಕವೇ ಸಿನಿಮಾ ಮಾಡಬೇಕು. ಇಲ್ಲವಾದಲ್ಲಿ ಫ್ಯಾನ್ಸ್ ನಿರಾಸೆ ಗೊಳ್ಳುವ ಸಾಧ್ಯತೆ ಇರುತ್ತದೆ’ ಎಂದು ಅವರು ಹೇಳಿದ್ದಾರೆ.

ಅಂದರೆ ಲೋಕೇಶ್ ಕನಗರಾಜ್ ಅವರು ಉಪೇಂದ್ರ ಜೊತೆ ಈ ಪಾತ್ರದ ಬಗ್ಗೆ ಮಾತನಾಡುವುದಕ್ಕೂ ಮೊದಲು ಆ ಬಗ್ಗೆ ಸಾಕಷ್ಟು ತಿಳಿದುಕೊಂಡು ಸಿದ್ಧತೆ ಮಾಡಿಕೊಂಡಿದ್ದರು ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಅವರ ಪಾತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ: ‘ಕೂಲಿ’ ಸಿನಿಮಾದ ಬಹುತೇಕ ಶೂಟ್​ನ ಬಾಡಿ ಡಬಲ್​ ಮೂಲಕವೇ ಮುಗಿಸಿದ ನಿರ್ದೇಶಕ

‘ಕೂಲಿ’ ಸಿನಿಮಾದಲ್ಲಿ ರಜನಿಕಾಂತ್, ಉಪೇಂದ್ರ ಜೊತೆಗೆ ಆಮಿರ್ ಖಾನ್, ಅಕ್ಕಿನೇನಿ ನಾಗಾರ್ಜುನ, ಶ್ರುತಿ ಹಾಸನ್, ಸೌಬಿನ್ ಶಾಹಿರ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರ ಆಗಸ್ಟ್ 14ರಂದು ರಿಲೀಸ್ ಆಗಲಿದೆ. ಇನ್ನು, ಉಪೇಂದ್ರ ಅವರು ಸದ್ಯ ಪರಭಾಷೆಯಲ್ಲಿ ಹಾಗೂ ಕನ್ನಡದಲ್ಲಿ ಬ್ಯುಸಿ ಇದ್ದಾರೆ. ಅವರ ನಟನೆಯ ‘45’ ಸಿನಿಮಾ ರಿಲೀಸ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:45 am, Wed, 14 May 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ