AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎ’ ಸಿನಿಮಾದಲ್ಲಿ ನಟಿಸಿದ ಬಾಲಕ ಬೆಳೆದು ದೊಡ್ಡವನಾಗಿ ಸುದ್ದಿಗೋಷ್ಠಿಯಲ್ಲಿ ಉಪೇಂದ್ರಗೆ ಸಿಕ್ಕಾಗ

'ಎ' ಸಿನಿಮಾದಲ್ಲಿ ಉಪೇಂದ್ರ ಹೇಳಿದ ಮಾತು ಕೇಳಿ ಓಡಿ ಹೋದ ಬಾಲಕ 27 ವರ್ಷಗಳ ಬಳಿಕ ಮತ್ತೆ ನಟ ಉಪೇಂದ್ರಗೆ ಸಿಕ್ಕಿದ್ದರು. ‘ಯುಐ’ ಚಿತ್ರದ ಸುದ್ದಿಗೋಷ್ಠಿ ವೇಳೆ ಈ ಅನಿರೀಕ್ಷಿತ ಭೇಟಿ ನಡೆದಿತ್ತು, ಉಪೇಂದ್ರ ಅವರಿಗೆ ಈ ವಿಚಾರ ಅಚ್ಚರಿ ತಂದಿದೆ. ಬಾಲಕ ಈಗ ದೊಡ್ಡವನಾಗಿ ತಮ್ಮನ್ನು ಭೇಟಿಯಾದ ಕ್ಷಣವನ್ನು ಉಪೇಂದ್ರ ಅಚ್ಚರಿಗೊಂಡರು.

‘ಎ’ ಸಿನಿಮಾದಲ್ಲಿ ನಟಿಸಿದ ಬಾಲಕ ಬೆಳೆದು ದೊಡ್ಡವನಾಗಿ ಸುದ್ದಿಗೋಷ್ಠಿಯಲ್ಲಿ ಉಪೇಂದ್ರಗೆ ಸಿಕ್ಕಾಗ
ಉಪೇಂದ್ರ
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 31, 2025 | 8:04 AM

Share

ಸಿನಿಮಾಗಳನ್ನು ಮಾಡುವಾಗ ನಿರ್ದೇಶಕರು ಸಾಕಷ್ಟು ಅತಿಥಿ ಪಾತ್ರಗಳನ್ನು ತೆಗೆದುಕೊಳ್ಳುತ್ತಾರೆ. ಅವರು ಹೀಗೆ ಬಂದು ಹಾಗೆ ಹೋಗುತ್ತಾರೆ. ಅವರ ಬಗ್ಗೆ ನಿರ್ದೇಶಕರಿಗೆ ನೆನಪಿರುವುದೇ ಇಲ್ಲ. ಮುಂದೊಂದು ದಿನ ಅವರು ಮತ್ತೆ ಸಿಗಬಹುದು. ಈ ರೀತಿಯ ಅಪರೂಪದ ಘಟನೆ ಒಂದು ‘ಯುಐ’ (UI) ಚಿತ್ರದ ಸುದ್ದಿಗೋಷ್ಠಿ ವೇಳೆ ನಡೆದಿತ್ತು ಎಂದರೆ ನಂಬಲೇಬೇಕು. ‘ಎ’ ಚಿತ್ರದಲ್ಲಿ ಬಾಲಕನ ಪಾತ್ರ ಮಾಡಿದ್ದ ಹುಡುಗ ಈಗ ಬೆಳೆದು ದೊಡ್ಡವನಾಗಿ ಉಪ್ಪಿ ಎದುರು ಬಂದು ನಿಂತಿದ್ದಾರೆ. ಆ ಬಗ್ಗೆ ಇಂದು ನಾವು ಹೇಳುತ್ತಿದ್ದೇವೆ ಕೇಳಿ.

‘ಎ’ ಸಿನಿಮಾ ಬಿಡುಗಡೆ ಆಗಿದ್ದು 1998ರಲ್ಲಿ. ಅಂದರೆ ಸುಮಾರು 27 ವರ್ಷಗಳ ಹಿಂದೆ. ‘ಐ ಆ್ಯಮ್ ಗಾಡ್, ಗಾಡ್ ಈಸ್ ಗ್ರೇಟ್’ ಎಂದು ಡೈಲಾಗ್ ಹೊಡೆಯುತ್ತಾ ಉಪ್ಪಿ ಸುತ್ತಾಡುವುದನ್ನು ಸಿನಿಮಾದಲ್ಲಿ ಕಾಣಬಹುದು. ಈ ಚಿತ್ರದ ಆರಂಭದಲ್ಲಿ ಕೆಲಸಕ್ಕೆ ಬಾರದ ವ್ಯಕ್ತಿಗಳು ಎಂದು ಉಪೇಂದ್ರ ಸಾಯಿಸೋ ದೃಶ್ಯ ಇದೆ. ಈ ವೇಳೆ ರೈಲ್ವೆ ಟ್ರ್ಯಾಕ್ ಬಳಿ ಉಪ್ಪಿ ಅವರು ನಡೆದು ಬರುವಾಗ, ಮಹಿಳೆ ಒಬ್ಬಳು ಪತಿಗೆ ‘ಸತ್ತೋಗು’ ಎಂದು ಹೇಳುತ್ತಾಳೆ. ಮರುಕ್ಷಣವೇ ಗುಂಡು ಹೊಡೆದು ಉಪ್ಪಿ ಆ ವ್ಯಕ್ತಿಯನ್ನು ಸಾಯಿಸುತ್ತಾರೆ. ಈ ರೀತಿಯಲ್ಲಿ ದೃಶ್ಯ ಇದೆ.

ಉಪ್ಪಿ ಹಾಗೂ ಎ ಕಲಾವಿದನ ಭೇಟಿ

ಇದನ್ನೂ ಓದಿ
Image
‘ಗಿಲ್ಲಿಗೆ ಕಳಪೆ ಕೊಡಬೇಕು’; ಮೊದಲೇ ಪ್ಲ್ಯಾನ್ ಮಾಡಿದ ಅಶ್ವಿನಿ, ರಿಷಾ
Image
ಪ್ರಪೋಸ್ ಮಾಡೇ ಬಿಟ್ಟ ಸೂರಜ್; ಅಚ್ಚರಿಯ ಉತ್ತರ ಕೊಟ್ಟ ರಾಶಿಕಾ
Image
ಗಿಲ್ಲಿಗೂ ಚಿಕ್ಕಪ್ಪನಿದ್ದಾನೆ, ಅವರದ್ದೂ ಒಂದು ಕತೆ ಇದೆ ಕೇಳಿ
Image
ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ

ಈ ದಂಪತಿಗೆ ಒಂದು ಮಗು ಇರುತ್ತದೆ. ಆ ಬಾಲಕ ಅಳುತ್ತಾನೆ. ಇದಕ್ಕೆ ಸಮಜಾಯಿಶಿ ಕೊಡೋ ಉಪ್ಪಿ, ‘ಅಳಬೇಡ, ಅವರ ತೆವಲಿಗೆ ನಿನ್ನ ಹುಟ್ಟಿಸಿದ್ದಾರೆ. ಜಾಸ್ತಿ ಯೋಚನೆ ಮಾಡಿದ್ರೆ ನೀನು ನನ್ನ ರೀತಿ ಆಗ್ಬಿಡ್ತೀಯಾ. ಸೆಂಟಿಮೆಂಟ್ ಇದ್ರೆ ಖಾಲಿ ತಟ್ಟೆನೇ ಗಟ್ಟಿ ಆಗಿಬಿಡುತ್ತದೆ. ಪ್ರಪಂಚ ವಿಶಾಲವಾಗಿದೆ. ಆರಾಮಾಗಿ ಹೋಗಿ ಬದುಕಿಕೋ’ ಎನ್ನುತ್ತಾರೆ ಉಪ್ಪಿ. ಆ ಕ್ಷಣವೇ ಬಾಲಕ ಓಡಿ ಹೋಗುತ್ತಾನೆ.

ಇದನ್ನೂ ಓದಿ: ‘ರಕ್ತ ಕಾಶ್ಮೀರ’ ಸಿನಿಮಾ ಪ್ರಚಾರಕ್ಕೆ ಉಪ್ಪಿ-ರಮ್ಯಾ ಬರುತ್ತಿಲ್ಲವೇಕೆ? ಉತ್ತರಿಸಿದ ಬಾಬು ಸಿಂಗ್

ಹೀಗೆ ಓಡಿ ಹೋದ ಬಾಲಕ ಮತ್ತೆ ಉಪ್ಪಿಗೆ ಸಿಕ್ಕಿದ್ದು ಸುದ್ದಿಗೋಷ್ಠಿಯಲ್ಲಿ. ‘ಯುಐ’ ಚಿತ್ರದ ಸುದ್ದಿಗೋಷ್ಠಿ ಹೈದರಾಬಾದ್​ನಲ್ಲಿ ನಡೆದಿತ್ತು. ಈ ವೇಳೆ ಸುದ್ದಿಗೋಷ್ಠಿಗೆ ಆ ಹುಡುಗ ಕೂಡ ಬಂದಿದ್ದರು. ‘ಎ ಚಿತ್ರದಲ್ಲಿ ನಟಿಸಿದ್ದ ಹುಡುಗ ನಾನೇ’ ಎಂದು ಪರಿಚಯಿಸಿಕೊಂಡರು. ಇದನ್ನು ಕೇಳಿ ಉಪ್ಪಿ ಅವರಿಗೆ ಅಚ್ಚರಿ ಆಯಿತು. ‘ಅಲ್ಲಿ ಓಡಿ ಹೋದ ನೀವು, ಈಗ ಬಂದಿದ್ದೀರಾ’ ಎಂದು ಕೇಳಿ ನಕ್ಕರು ಉಪ್ಪಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:03 am, Fri, 31 October 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು