AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಟ್ಟೆ ಕಿರಿಕ್; ತುಂಡುಡುಗೆ ಧರಿಸಿದ್ದಕ್ಕೆ ಉರ್ಫಿ ಜಾವೇದ್​ನ ವಶಕ್ಕೆ ಪಡೆದ ಪೊಲೀಸರು

ಕಿರುತೆರೆಯಲ್ಲಿ ನಟಿಸಿ ಫೇಮಸ್ ಆದರು ಉರ್ಫಿ. ಆ ಬಳಿಕ ಅವರು ‘ಹಿಂದಿ ಬಿಗ್ ಬಾಸ್’ ಒಟಿಟಿ ಸೀಸನ್​ಗೆ ಬಂದರು. ಅಲ್ಲಿಯೂ ಅವರು ಚಿತ್ರವಿಚಿತ್ರ ಬಟ್ಟೆ ಧರಿಸಿದ್ದರು. ದೊಡ್ಮನೆಯಿಂದ ಹೊರ ಬಂದ ಬಳಿಕ ಅವರು ಇದನ್ನೇ ಕಾಯಕವನ್ನಾಗಿ ಮಾಡಿಕೊಂಡರು.

ಬಟ್ಟೆ ಕಿರಿಕ್; ತುಂಡುಡುಗೆ ಧರಿಸಿದ್ದಕ್ಕೆ ಉರ್ಫಿ ಜಾವೇದ್​ನ ವಶಕ್ಕೆ ಪಡೆದ ಪೊಲೀಸರು
ಉರ್ಫಿ
ರಾಜೇಶ್ ದುಗ್ಗುಮನೆ
|

Updated on: Nov 03, 2023 | 10:45 AM

Share

ನಟಿ ಉರ್ಫಿ ಜಾವೇದ್ (Urfi Javed) ಅವರು ಬಟ್ಟೆ ವಿಚಾರಕ್ಕೆ ಆಗಾಗ ತೊಂದರೆ ಅನುಭವಿಸುತ್ತಲೇ ಇರುತ್ತಾರೆ. ಅವರು ಸಣ್ಣ ಬಟ್ಟೆ ಧರಿಸಿದ್ದಕ್ಕೆ ಅನೇಕ ಬಾರಿ ಪೊಲೀಸ್ ಠಾಣೆಯ ಮೆಟ್ಟಿಲು ಏರುವ ಪರಿಸ್ಥಿತಿ ಬಂದೊದಗಿದೆ. ಈಗ ಅವರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ಬಟ್ಟೆ ವಿಚಾರದಲ್ಲಿ ಆದ ಕಿರಿಕ್ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ‘ಅವರಿಗೆ ಸರಿಯಾಗಿಯೇ ಆಗಿದೆ’ ಎಂದು ಎಲ್ಲರೂ ಮಾತನಾಡಿಕೊಂಡಿದ್ದಾರೆ.

ಕಿರುತೆರೆಯಲ್ಲಿ ನಟಿಸಿ ಫೇಮಸ್ ಆದರು ಉರ್ಫಿ. ಆ ಬಳಿಕ ಅವರು ‘ಹಿಂದಿ ಬಿಗ್ ಬಾಸ್’ ಒಟಿಟಿ ಸೀಸನ್​ಗೆ ಬಂದರು. ಅಲ್ಲಿಯೂ ಅವರು ಚಿತ್ರವಿಚಿತ್ರ ಬಟ್ಟೆ ಧರಿಸಿದ್ದರು. ದೊಡ್ಮನೆಯಿಂದ ಹೊರ ಬಂದ ಬಳಿಕ ಅವರು ಇದನ್ನೇ ಕಾಯಕವನ್ನಾಗಿ ಮಾಡಿಕೊಂಡರು. ಮೊಬೈಲ್​ನಿಂದ ಎದೆ ಭಾಗ ಮುಚ್ಚಿಕೊಳ್ಳುವುದು ಸೇರಿದಂತೆ ಅನೇಕ ರೀತಿಯ ವಿಚಿತ್ರ ಉಡುಗೆಯನ್ನು ಅವರು ಧರಿಸಿದ್ದರು.

ಇತ್ತೀಚೆಗೆ ಉರ್ಫಿ ಜಾವೇದ್ ಅವರು ಸಣ್ಣ ಬಟ್ಟೆ ಧರಿಸಿ ಬಂದರು. ಈ ಕಾರಣಕ್ಕೆ ಉರ್ಫಿಯನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ‘ನನ್ನನ್ನು ಯಾಕೆ ಕರೆದುಕೊಂಡು ಹೋಗುತ್ತಿದ್ದೀರಿ’ ಎಂದು ಉರ್ಫಿ ಜಾವೇದ್ ಕೂಗಾಡಿದ್ದಾರೆ. ಇದಕ್ಕೆ ಉತ್ತರಿಸಿದ ಪೊಲೀಸರು, ‘ಇಷ್ಟು ಸಣ್ಣ ಬಟ್ಟೆ ಧರಿಸಿ ಯಾರು ಓಡಾಡುತ್ತಾರೆ’ ಎಂದು ಮರಳಿ ಪ್ರಶ್ನೆ ಕೇಳಿದ್ದಾರೆ.

ಇದನ್ನೂ ಓದಿ: ಈ ಡ್ರೆಸ್​ ಧರಿಸಿದ್ದಕ್ಕೆ ಉರ್ಫಿ ಜಾವೇದ್​ಗೆ ಧರ್ಮ ರಕ್ಷಕರಿಂದ ಬಂತು ಕೊಲೆ ಮತ್ತು ರೇಪ್​ ಬೆದರಿಕೆ

ಬಟ್ಟೆ ವಿಚಾರದಲ್ಲಿ ಉರ್ಫಿಯನ್ನು ವಶಕ್ಕೆ ಪಡೆದಿದ್ದು ಇದೇ ಮೊದಲೇನು ಅಲ್ಲ. ವಿದೇಶಕ್ಕೆ ತೆರಳಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಅವರು ಸಣ್ಣ ಬಟ್ಟೆ ಧರಿಸಿದ್ದೇ ಇದಕ್ಕೆ ಕಾರಣ ಆಗಿತ್ತು. ಇನ್ನು, ಇವರ ವಿರುದ್ಧ ಮುಂಬೈನಲ್ಲಿ ಹಲವು ಪ್ರಕರಣ ದಾಖಲಾಗಿದೆ. ಅವರ ಬಟ್ಟೆ ಅಶ್ಲೀಲವಾಗಿರುತ್ತದೆ ಎಂದು ಅನೇಕರು ಹೇಳಿದ್ದಿದೆ. ಎಷ್ಟೇ ಕೇಸ್ ಬಿದ್ದರೂ ತಲೆಕೆಡಿಸಿಕೊಳ್ಳದೆ ಅವರು ತಮ್ಮ ಕಾಯಕ ಮುಂದುವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು