AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉರ್ಫಿ ಮೂರು ವರ್ಷಗಳಿಂದ ದೈಹಿಕ ಸಂಪರ್ಕ ನಡೆಸಿಲ್ಲ; ಕಾರಣ ಮಾತ್ರ ವಿಚಿತ್ರ

ಉರ್ಫಿ ಜಾವೇದ್ ಅವರು ಆಗಾಗ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡುತ್ತಾ ಇರುತ್ತಾರೆ. ಈಗ ಅವರು ಕಳೆದ ಮೂರು ವರ್ಷದಿಂದ ದೈಹಿಕ ಸಂಪರ್ಕ ನಡೆಸಿಲ್ಲ ಎಂಬುದನ್ನು ಹೇಳಿಕೊಂಡಿದ್ದಾರೆ. ಇದಕ್ಕೆ ಅವರು ಕಾರಣವನ್ನೂ ನೀಡಿದ್ದಾರೆ. ಈ ಕಾರಣ ಅನೇಕರಿಗೆ ವಿಚಿತ್ರ ಎನಿಸಿದೆ.

ಉರ್ಫಿ ಮೂರು ವರ್ಷಗಳಿಂದ ದೈಹಿಕ ಸಂಪರ್ಕ ನಡೆಸಿಲ್ಲ; ಕಾರಣ ಮಾತ್ರ ವಿಚಿತ್ರ
ಉರ್ಫಿ
ರಾಜೇಶ್ ದುಗ್ಗುಮನೆ
|

Updated on:Aug 27, 2024 | 3:03 PM

Share

ನಟಿ ಉರ್ಫಿ ಜಾವೇದ್ ಅವರು ಯಾವಾಗಲೂ ಸುದ್ದಿಯಲ್ಲಿ ಇರಲು ಬಯಸುತ್ತಾರೆ. ಅವರು ‘ಫಾಲೋ ಕರ್ ಲೋ ಯಾರ್’ ಹೆಸರಿನ ಶೋ ಮಾಡಿದ್ದಾರೆ. ಇದರಲ್ಲಿ ಹಲವು ವಿಚಾರಗಳನ್ನು ಅವರು ರಿವೀಲ್ ಮಾಡಿದ್ದಾರೆ. ಅವರು ಖಾಸಗಿ ಜೀವನದ ಬಗ್ಗೆಯೂ ಮಾತನಾಡಿದ್ದಾರೆ. ಅವರು ಕಳೆದ ಮೂರು ವರ್ಷಗಳಿಂದ ದೈಹಿಕ ಸಂಪರ್ಕ ಮಾಡಿಲ್ಲಂವಂತೆ. ಇದಕ್ಕೆ ಅವರು ನೀಡಿದ ಕಾರಣ ಮಾತ್ರ ವಿಚಿತ್ರವಾಗಿದೆ.

‘ನಾನು ಕಳೆದ ಮೂರು ವರ್ಷಗಳಿಂದ ಸೆ* ಮಾಡಿಲ್ಲ. ನಾನು ಈ ಮೂರು ವರ್ಷಗಳಲ್ಲಿ ಯಾರಿಗೂ ಕಿಸ್ ಕೂಡ ಮಾಡಿಲ್ಲ. ಯಾವುದೇ ಪುರುಷನ ಜೊತೆ ರೊಮ್ಯಾಂಟಿಕ್ ಆಗಿ ಮಾತನಾಡಿಲ್ಲ’ ಎಂದಿದ್ದಾರೆ ಅವರು. ಹಾಗಾದರೆ ಇದಕ್ಕೆ ಒಂದು ಕಾರಣ ಇರಬೇಕಲ್ಲ. ಇದನ್ನು ಕೂಡ ಅವರು ವಿವರಿಸಿದ್ದಾರೆ. ‘ನಾನೇಕೆ ದೈಹಿಕ ಸಂಪರ್ಕ ನಡೆಸಿಲ್ಲ ಎಂಬುದಕ್ಕೂ ಒಂದು ಕಾರಣ ಇದೆ. ನನ್ನ ಬಳಿ ಎಲ್ಲಿಯವರೆಗೆ ಪ್ರೈವೆಟ್ ಜೆಟ್ ಇರುವುದಿಲ್ಲವೋ ಅಲ್ಲಿಯವರೆಗೆ ನಾನು ಟೆಂಪ್ಟ್ ಆಗುವುದಿಲ್ಲ ಎಂದು ನಾನು ಮೂರು ವರ್ಷಗಳ ಹಿಂದೆ ಪ್ರತಿಜ್ಞೆ ಮಾಡಿದ್ದೆ’ ಎಂದಿದ್ದಾರೆ ಅವರು.

‘ನಾನು ಸ್ವಾಭಿಮಾನಿ. ನಾನು ನನ್ನ ಜೀವನದಲ್ಲಿ ಎಲ್ಲವನ್ನು ನಾನೇ ಮಾಡಿಕೊಂಡಿದ್ದೇನೆ. ನನ್ನ ಪಾರ್ಟ್ನರ್ ಜೊತೆ ದುರ್ಬಲನಾಗಿ ಕಾಣಿಸಿಕೊಳ್ಳಲು ಇಷ್ಟಪಡಲ್ಲ’ ಎಂದಿದ್ದಾರೆ ಉರ್ಫಿ. ಈ ಮೂಲಕ ತಾವು ಎಷ್ಟು ಸ್ವಾಭಿಮಾನಿ ಎಂಬುದನ್ನು ಅವರು ತೋರಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸೀರೆಯ ಅವತಾರವನ್ನೇ ಬದಲಾಯಿಸಿದ ಉರ್ಫಿ ಜಾವೇದ್​; ಇನ್ನೇನು ಕಾದಿದೆಯೋ..

ಈ ಮೊದಲು ಉರ್ಫಿ ಜಾವೇದ್ ಅವರು ಪರಾಸ್ ಕಲ್ನಾವತ್ ಜೊತೆ ಸಂಬಂಧ ಹೊಂದಿದ್ದರು. 2017ರಿಂದ 2022ರವರೆಗೆ ಸುತ್ತಾಟ ನಡೆಸಿದ್ದರು. ಆ ಬಳಿಕ ಇವರದ್ದು ಬ್ರೇಕಪ್ ಆಯಿತು. ಬಿಗ್ ಬಾಸ್​ ಒಟಿಟಿಗೆ ಕಾಲಿಟ್ಟ ಬಳಿಕ ಅವರ ಖ್ಯಾತಿ ಹೆಚ್ಚಾಯಿತು. ಅಲ್ಲಿಂದ ಅವರು ಚಿತ್ರ ವಿಚಿತ್ರ ಬಟ್ಟೆ ಹಾಕೋಕೆ ಆರಂಭಿಸಿದರು. ಅವರು ತಮ್ಮ ಖಾಸಗಿ ಭಾಗಗಳನ್ನು ತೋರಿಸಲು ಯಾವುದೇ ಮುಜುಗರ ಮಾಡಿಕೊಳ್ಳುವುದಿಲ್ಲ. ಇತ್ತೀಚೆಗೆ ಒಳ ಉಡುಪು ಹಾಕದೆ ಡ್ರೆಸ್ ಹಾಕಿ ರಸ್ತೆಗೆ ಇಳಿದಿದ್ದ ವಿಡಿಯೋ ವೈರಲ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:45 am, Tue, 27 August 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು