AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆದ ಕೆಲವೇ ದಿನಗಳಲ್ಲಿ ನಟಿ ಯಾಮಿ ಗೌತಮ್​ಗೆ ಶಾಕ್​; ಸಮನ್ಸ್​ ನೀಡಿದ ಇಡಿ

ಜೂ.4ರಂದು ಬಾಲಿವುಡ್​ ನಿರ್ದೇಶಕ ಆದಿತ್ಯ ಧಾರ್​ ಜೊತೆ ಯಾಮಿ ಗೌತಮ್​ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ಆಗಿ ಒಂದು ತಿಂಗಳು ಕಳೆಯುವುದರೊಳಗೆ ಅವರ ಮೇಲೆ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿದೆ.

ಮದುವೆ ಆದ ಕೆಲವೇ ದಿನಗಳಲ್ಲಿ ನಟಿ ಯಾಮಿ ಗೌತಮ್​ಗೆ ಶಾಕ್​; ಸಮನ್ಸ್​ ನೀಡಿದ ಇಡಿ
ಮದುವೆ ಆದ ಕೆಲವೇ ದಿನಗಳಲ್ಲಿ ನಟಿ ಯಾಮಿ ಗೌತಮ್​ಗೆ ಶಾಕ್
TV9 Web
| Edited By: |

Updated on: Jul 02, 2021 | 7:28 PM

Share

ಕೆಲವೇ ದಿನಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ನಟಿ ಯಾಮಿ ಗೌತಮ್​ ಅವರಿಗೆ ಈಗ ಸಂಕಷ್ಟ ಶುರುವಾಗಿದೆ. ಲಾಕ್​ಡೌನ್​ ಕಾರಣದಿಂದ ತುಂಬ ಸರಳವಾಗಿ ಯಾಮಿ ಮದುವೆ ಆಗಿದ್ದರು. ಅದರ ಬೆನ್ನಲ್ಲೇ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪ ಅವರ ಮೇಲೆ ಕೇಳಿಬಂದಿದೆ. ಈ ಸಂಬಂಧ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ನೀಡಿದೆ. ಕೋಟ್ಯಂತರ ರೂ. ಹಣವನ್ನು ಅಕ್ರಮವಾಗಿ ಯಾಮಿ ಗೌತಮ್​ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ ನಿಯಮ ಉಲ್ಲಂಘಿಸಿ ಯಾಮಿ ಗೌತಮ್​ ಬ್ಯಾಂಕ್​ ಖಾತೆಯಿಂದ 1.5 ಕೋಟಿ ರೂ. ಹಣ ಅಕ್ರಮ ವರ್ಗಾವಣೆ ಆಗಿರುವುದು ತಿಳಿದುಬಂದಿದೆ. ಹಾಗಾಗಿ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚಿಸಲಾಗಿದೆ. ಈ ಹಿಂದೆ ಕೂಡ ಅವರಿಗೆ ಸಮನ್ಸ್​ ನೀಡಲಾಗಿದ್ದರೂ ಅವರು ವಿಚಾರಣೆಗೆ ಬಂದಿರಲಿಲ್ಲ ಎನ್ನಲಾಗಿದೆ. ಆದ್ದರಿಂದ ಎರಡನೇ ಬಾರಿಗೆ ನೋಟಿಸ್​ ನೀಡಲಾಗಿದ್ದು, ಜು.7ರಂದು ಅವರು ಅಧಿಕಾರಿಗಳ ಎದುರು ಹಾಜರಾಗಬೇಕಿದೆ.

ಜೂ.4ರಂದು ಬಾಲಿವುಡ್​ ನಿರ್ದೇಶಕ ಆದಿತ್ಯ ಧಾರ್​ ಜೊತೆ ಯಾಮಿ ಗೌತಮ್​ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ‘ಕುಟುಂಬದವರ ಆಶೀರ್ವಾದದೊಂದಿಗೆ ನಾವು ಇಂದು ಮದುವೆ ಆದೆವು. ಕೇವಲ ನಮ್ಮ ಆಪ್ತರ ಸಮ್ಮುಖದಲ್ಲಿ ಖಾಸಗಿಯಾಗಿ ಈ ವಿವಾಹ ಸಮಾರಂಭ ನೆರವೇರಿತು. ಪ್ರೀತಿ-ಸ್ನೇಹದ ನಮ್ಮ ಈ ಹೊಸ ಪಯಣಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕು’ ಎಂದು ಅವರು ತಿಳಿಸಿದ್ದರು. ಮದುವೆ ಆಗಿ ಒಂದು ತಿಂಗಳು ಕಳೆಯುವುದರೊಳಗೆ ಅವರ ಮೇಲೆ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿದೆ.

ಕನ್ನಡದ ‘ಉಲ್ಲಾಸ ಉತ್ಸಾಹ’ ಚಿತ್ರವು ಯಾಮಿ ಗೌತಮ್​ ನಟಿಸಿದ ಮೊದಲ ಸಿನಿಮಾ. ಆ ಬಳಿಕ ಅವರು ಪರಭಾಷೆಯಲ್ಲಿ ಫೇಮಸ್​ ಆದರು. 2019ರಲ್ಲಿ ತೆರೆಕಂಡ ಬಾಲಿವುಡ್​ನ ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾ ದೊಡ್ಡ ಹಿಟ್ ಆಯಿತು. ಆ ಚಿತ್ರದಿಂದ ಆದಿತ್ಯ ಧಾರ್​ ಅವರ ಜನಪ್ರಿಯತೆ ಹೆಚ್ಚಿತು. ವಿಕ್ಕಿ ಕೌಶಾಲ್​ ನಾಯಕನಾಗಿದ್ದ ಆ ಚಿತ್ರದಲ್ಲಿ ಯಾಮಿ ಗೌತಮ್​ ಅವರು ರಾ ಏಜೆಂಟ್​ ಪಾತ್ರ ಮಾಡಿದ್ದರು. ಆಗಲೇ ಆದಿತ್ಯ ಮತ್ತು ಯಾಮಿ ನಡುವೆ ಗೆಳೆತನ ಬೆಳೆದಿತ್ತು.

ಇದನ್ನೂ ಓದಿ:

ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ

ಎಷ್ಟು ಕೋಟಿ ಕೊಟ್ಟರೂ ಈ ಮದುಮಗಳು ಧರಿಸಿದ ಸೀರೆಗೆ ಬೆಲೆ ಕಟ್ಟೋಕಾಗಲ್ಲ; ಏನಿದರ ವಿಶೇಷ?

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ