AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್ ಅವರನ್ನು ಆಂಧ್ರ ಪ್ರದೇಶ ಸಿಎಂ ಎಂದ ಊರ್ವಶಿ ರೌಟೇಲಾ; ಸೋಶಿಯಲ್ ಮೀಡಿಯಾದಲ್ಲಿ ಟೀಕೆ

ಊರ್ವಶಿ ರೌಟೇಲಾ ಅವರು ಸಿನಿಮಾ ರಿಲೀಸ್​ಗೂ ಮೊದಲು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಉದ್ದೇಶಪೂರ್ವಕವಾಗಿ ಮಾಡಿದ ತಪ್ಪಿಗೆ ಅನೇಕರು ಟೀಕೆ ಮಾಡಿದ್ದಾರೆ.

ಪವನ್ ಕಲ್ಯಾಣ್ ಅವರನ್ನು ಆಂಧ್ರ ಪ್ರದೇಶ ಸಿಎಂ ಎಂದ ಊರ್ವಶಿ ರೌಟೇಲಾ; ಸೋಶಿಯಲ್ ಮೀಡಿಯಾದಲ್ಲಿ ಟೀಕೆ
ಊರ್ವಶಿ-ಸಾಯಿ ಧರಮ್ ತೇಜ್-ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on:Jul 29, 2023 | 6:31 AM

Share

ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಒಂದಿಲ್ಲೊಂದು ವಿಚಾರಕ್ಕೆ ಅವರು ಸುದ್ದಿ ಆಗುತ್ತಲೇ ಇರುತ್ತಾರೆ. ಟ್ರೋಲ್ ಆದರೂ ಅವರಿಗೆ ಬೇಸರ ಇಲ್ಲ. ಒಟ್ಟಿನಲ್ಲಿ ಹೆಸರು ಚಾಲ್ತಿಯಲ್ಲಿರಬೇಕು ಎಂದು ಅವರು ಬಯಸುತ್ತಾರೆ. ಈಗ ಊರ್ವಶಿ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಪವನ್ ಕಲ್ಯಾಣ್ (Pawan Kalyan) ಅವರನ್ನು ಆಂಧ್ರಪ್ರದೇಶದ ಸಿಎಂ ಎಂದು ಘೋಷಣೆ ಮಾಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ. ಫ್ಯಾನ್ಸ್ ಕಡೆಯಿಂದ ಇದಕ್ಕೆ ವಿವಿಧ ರೀತಿಯಲ್ಲಿ ಕಮೆಂಟ್​ಗಳು ಬರುತ್ತಿವೆ.

‘ಬ್ರೋ’ ಸಿನಿಮಾ ಇಂದು (ಜುಲೈ 28) ರಿಲೀಸ್ ಆಗಿದೆ. ಸಾಯಿ ಧರಮ್ ತೇಜ್ ಹಾಗೂ ಪವನ್ ಕಲ್ಯಾಣ್​ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಊರ್ವಶಿ ರೌಟೇಲಾ ಕೂಡ ಅಭಿನಯಿಸಿದ್ದಾರೆ. ಅವರು ಸಿನಿಮಾ ರಿಲೀಸ್​ಗೂ ಮೊದಲು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಉದ್ದೇಶಪೂರ್ವಕವಾಗಿ ಮಾಡಿದ ತಪ್ಪಿಗೆ ಅನೇಕರು ಟೀಕೆ ಮಾಡಿದ್ದಾರೆ.

‘ಬ್ರೋ’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆದಿದೆ. ಈ ವೇಳೆ ಊರ್ವಶಿ ಅವರು ಸಾಯಿ ಧರಮ್ ತೇಜ್ ಹಾಗೂ ಪವನ್ ಕಲ್ಯಾಣ್ ಜೊತೆ ಪೋಸ್ ಕೊಟ್ಟಿದ್ದಾರೆ. ‘ಗೌರವಾನ್ವಿತ ಆಂಧ್ರಪ್ರದೇಶದ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ನಮ್ಮ ಸಿನಿಮಾದಲ್ಲಿ ಬ್ರೋ ಅವತಾರದಲ್ಲಿ. ಈ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗತ್ತಿದೆ. ಎಲ್ಲರೂ ಸಿನಿಮಾ ವೀಕ್ಷಿಸಿ’ ಎಂದು ಕೋರಿದ್ದಾರೆ.

ಇದನ್ನೂ ಓದಿ: ಪವನ್ ಕಲ್ಯಾಣ್ ಹಂಚಿಕೊಂಡ ಮೊದಲ ಇನ್​ಸ್ಟಾಗ್ರಾಂ ವಿಡಿಯೋನಲ್ಲಿ ಕನ್ನಡದ ನಾಲ್ಕು ನಟರು

ಇದಕ್ಕೆ ಅನೇಕರು ಟೀಕೆ ಮಾಡಿದ್ದಾರೆ. ‘ಅಕ್ಕಾ ಅವರು ಸಿಎಂ ಅಲ್ಲ. ಅವರ ಬಳಿ ಎಂಎಲ್​ಎ ಆಗೋಕೂ ಸಾಧ್ಯವಾಗಿಲ್ಲ. ನಿಮಗೆ ಒಳ್ಳೆಯ ಡಾಕ್ಟರ್ ಅವಶ್ಯಕತೆ ಇದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಊರ್ವಶಿಗೆ ನಿಜಕ್ಕೂ ತಲೆಕೆಟ್ಟಿದೆ. ಖ್ಯಾತಿ ಪಡೆಯಲು ಅವರು ಏನು ಮಾಡಲೂ ರೆಡಿ ಇದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:50 am, Fri, 28 July 23

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ