ಪವನ್ ಕಲ್ಯಾಣ್ ಅವರನ್ನು ಆಂಧ್ರ ಪ್ರದೇಶ ಸಿಎಂ ಎಂದ ಊರ್ವಶಿ ರೌಟೇಲಾ; ಸೋಶಿಯಲ್ ಮೀಡಿಯಾದಲ್ಲಿ ಟೀಕೆ

ಊರ್ವಶಿ ರೌಟೇಲಾ ಅವರು ಸಿನಿಮಾ ರಿಲೀಸ್​ಗೂ ಮೊದಲು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಉದ್ದೇಶಪೂರ್ವಕವಾಗಿ ಮಾಡಿದ ತಪ್ಪಿಗೆ ಅನೇಕರು ಟೀಕೆ ಮಾಡಿದ್ದಾರೆ.

ಪವನ್ ಕಲ್ಯಾಣ್ ಅವರನ್ನು ಆಂಧ್ರ ಪ್ರದೇಶ ಸಿಎಂ ಎಂದ ಊರ್ವಶಿ ರೌಟೇಲಾ; ಸೋಶಿಯಲ್ ಮೀಡಿಯಾದಲ್ಲಿ ಟೀಕೆ
ಊರ್ವಶಿ-ಸಾಯಿ ಧರಮ್ ತೇಜ್-ಪವನ್ ಕಲ್ಯಾಣ್
Follow us
|

Updated on:Jul 29, 2023 | 6:31 AM

ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಒಂದಿಲ್ಲೊಂದು ವಿಚಾರಕ್ಕೆ ಅವರು ಸುದ್ದಿ ಆಗುತ್ತಲೇ ಇರುತ್ತಾರೆ. ಟ್ರೋಲ್ ಆದರೂ ಅವರಿಗೆ ಬೇಸರ ಇಲ್ಲ. ಒಟ್ಟಿನಲ್ಲಿ ಹೆಸರು ಚಾಲ್ತಿಯಲ್ಲಿರಬೇಕು ಎಂದು ಅವರು ಬಯಸುತ್ತಾರೆ. ಈಗ ಊರ್ವಶಿ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಪವನ್ ಕಲ್ಯಾಣ್ (Pawan Kalyan) ಅವರನ್ನು ಆಂಧ್ರಪ್ರದೇಶದ ಸಿಎಂ ಎಂದು ಘೋಷಣೆ ಮಾಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ. ಫ್ಯಾನ್ಸ್ ಕಡೆಯಿಂದ ಇದಕ್ಕೆ ವಿವಿಧ ರೀತಿಯಲ್ಲಿ ಕಮೆಂಟ್​ಗಳು ಬರುತ್ತಿವೆ.

‘ಬ್ರೋ’ ಸಿನಿಮಾ ಇಂದು (ಜುಲೈ 28) ರಿಲೀಸ್ ಆಗಿದೆ. ಸಾಯಿ ಧರಮ್ ತೇಜ್ ಹಾಗೂ ಪವನ್ ಕಲ್ಯಾಣ್​ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಊರ್ವಶಿ ರೌಟೇಲಾ ಕೂಡ ಅಭಿನಯಿಸಿದ್ದಾರೆ. ಅವರು ಸಿನಿಮಾ ರಿಲೀಸ್​ಗೂ ಮೊದಲು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಉದ್ದೇಶಪೂರ್ವಕವಾಗಿ ಮಾಡಿದ ತಪ್ಪಿಗೆ ಅನೇಕರು ಟೀಕೆ ಮಾಡಿದ್ದಾರೆ.

‘ಬ್ರೋ’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆದಿದೆ. ಈ ವೇಳೆ ಊರ್ವಶಿ ಅವರು ಸಾಯಿ ಧರಮ್ ತೇಜ್ ಹಾಗೂ ಪವನ್ ಕಲ್ಯಾಣ್ ಜೊತೆ ಪೋಸ್ ಕೊಟ್ಟಿದ್ದಾರೆ. ‘ಗೌರವಾನ್ವಿತ ಆಂಧ್ರಪ್ರದೇಶದ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ನಮ್ಮ ಸಿನಿಮಾದಲ್ಲಿ ಬ್ರೋ ಅವತಾರದಲ್ಲಿ. ಈ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗತ್ತಿದೆ. ಎಲ್ಲರೂ ಸಿನಿಮಾ ವೀಕ್ಷಿಸಿ’ ಎಂದು ಕೋರಿದ್ದಾರೆ.

ಇದನ್ನೂ ಓದಿ: ಪವನ್ ಕಲ್ಯಾಣ್ ಹಂಚಿಕೊಂಡ ಮೊದಲ ಇನ್​ಸ್ಟಾಗ್ರಾಂ ವಿಡಿಯೋನಲ್ಲಿ ಕನ್ನಡದ ನಾಲ್ಕು ನಟರು

ಇದಕ್ಕೆ ಅನೇಕರು ಟೀಕೆ ಮಾಡಿದ್ದಾರೆ. ‘ಅಕ್ಕಾ ಅವರು ಸಿಎಂ ಅಲ್ಲ. ಅವರ ಬಳಿ ಎಂಎಲ್​ಎ ಆಗೋಕೂ ಸಾಧ್ಯವಾಗಿಲ್ಲ. ನಿಮಗೆ ಒಳ್ಳೆಯ ಡಾಕ್ಟರ್ ಅವಶ್ಯಕತೆ ಇದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಊರ್ವಶಿಗೆ ನಿಜಕ್ಕೂ ತಲೆಕೆಟ್ಟಿದೆ. ಖ್ಯಾತಿ ಪಡೆಯಲು ಅವರು ಏನು ಮಾಡಲೂ ರೆಡಿ ಇದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:50 am, Fri, 28 July 23

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು