AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಈ ಬೌಲರ್ ಮೇಲೆ ಊರ್ವಶಿ ರೌಟೇಲಾಗೆ ಹೆಚ್ಚಿತು ಒಲವು? ಟ್ರೋಲ್​ಗೆ ಒಳಗಾದ ನಟಿ

ಊರ್ವಶಿ ರೌಟೇಲಾ ಅವರು ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗೋಕೆ ಬಯಸುತ್ತಾರೆ. ಇಲ್ಲಸಲ್ಲದ ಹೇಳಿಕೆ ನೀಡಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಈ ಮೊದಲು ಅವರು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಹಿಂದೆ ಬಿದ್ದಿದ್ದರು. ಅವರ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡಿ ಸುದ್ದಿ ಆಗಿದ್ದರು. ಈಗ ಅವರು ಮತ್ತೊಮ್ಮೆ ಚರ್ಚೆಯಲ್ಲಿದ್ದಾರೆ.

ಪಾಕಿಸ್ತಾನದ ಈ ಬೌಲರ್ ಮೇಲೆ ಊರ್ವಶಿ ರೌಟೇಲಾಗೆ ಹೆಚ್ಚಿತು ಒಲವು? ಟ್ರೋಲ್​ಗೆ ಒಳಗಾದ ನಟಿ
ಊರ್ವಶಿ
ರಾಜೇಶ್ ದುಗ್ಗುಮನೆ
|

Updated on: Sep 04, 2023 | 12:49 PM

Share

ಏಷ್ಯಾ ಕಪ್ 2023 ನಡೆಯುತ್ತಿದೆ. ಶನಿವಾರ (ಸೆಪ್ಟೆಂಬರ್ 2) ಭಾರತ Vs ಪಾಕಿಸ್ತಾನ ಪಂದ್ಯ ನಡೆಯಿತು. ಮಳೆಯ ಕಾರಣದಿಂದ ಈ ಪಂದ್ಯ ರದ್ದಾಗಿದೆ. ಈ ಮಧ್ಯೆ ನಟಿ ಊರ್ವಶಿ ರೌಟೇಲಾ (Urvashi Rautela) ವಿವಾದ ಒಂದನ್ನು ಮಾಡಿಕೊಂಡಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಅವರು ಪಾಕಿಸ್ತಾನದ ಬೌಲರ್ ನಸೀಮ್ ಶಾ ಅವರ ಫೋಟೋ ಪೋಸ್ಟ್ ಮಾಡಿದ್ದಾರೆ. ಇವರನ್ನು ಅನೇಕರು ಟೀಕೆ ಮಾಡಿದ್ದಾರೆ. ನಟಿ ಊರ್ವಶಿ ಅವರು ಪಾಕಿಸ್ತಾನದ ಬೌಲರ್ ಕಡೆ ಇಷ್ಟೊಂದು ಒಲವು ತೋರಿಸುವುದು ಏಕೆ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಊರ್ವಶಿ ರೌಟೇಲಾ ಅವರು ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗೋಕೆ ಬಯಸುತ್ತಾರೆ. ಇಲ್ಲಸಲ್ಲದ ಹೇಳಿಕೆ ನೀಡಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಈ ಮೊದಲು ಅವರು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಹಿಂದೆ ಬಿದ್ದಿದ್ದರು. ಅವರ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡಿ ಸುದ್ದಿ ಆಗಿದ್ದರು. ಈಗ ಅವರು ಮತ್ತೊಮ್ಮೆ ಚರ್ಚೆಯಲ್ಲಿದ್ದಾರೆ.

ಭಾರತ-ಪಾಕಿಸ್ತಾನ ಮ್ಯಾಚ್​ ವೇಳೆ ಜಿಮ್​ನಲ್ಲಿರುವ ಟಿವಿಯ ಫೋಟೋನ ಊರ್ವಶಿ ಶೇರ್ ಮಾಡಿಕೊಂಡಿದ್ದಾರೆ. ಫೋಟೋದಲ್ಲಿ ಪಾಕಿಸ್ತಾನದ ಬೌಲರ್ ನಸೀಮ್ ಶಾ ಹೈಲೈಟ್ ಆಗಿದ್ದಾರೆ. ಈ ಫೋಟೋಗೆ ಅವರು ‘ವರ್ಕೌಟ್ ಟೈಮ್’ ಎನ್ನುವ ಕ್ಯಾಪ್ಶನ್ ನೀಡಿದ್ದರು. ಅವರು ಉದ್ದೇಶಪೂರ್ವಕವಾಗಿಯೇ ಈ ಫೋಟೋ ಹಾಕಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಅನೇಕರು ನಟಿಯನ್ನು ಟೀಕಿಸಿದ್ದಾರೆ.

ಅಂದಹಾಗೆ, ಊರ್ವಶಿ ಅವರು ಈ ರೀತಿ ಸುದ್ದಿ ಆಗುತ್ತಿರುವುದು ಇದೇ ಮೊದಲೇನು ಅಲ್ಲ. 2022ರ ಏಷ್ಯಾ ಕಪ್ ದುಬೈನಲ್ಲಿ ನಡೆದಿತ್ತು. ಈ ವೇಳೆ ಅವರು ನಸೀಮ್ ಶಾ ಫೋಟೋ ಹಂಚಿಕೊಂಡಿದ್ದರು. ಈ ವೇಳೆ ಅವರನ್ನು ಟೀಕಿಸಲಾಗಿತ್ತು. ಈಗ ಮತ್ತದೇ ಕೆಲಸವನ್ನು ಅವರು ಮಾಡಿದ್ದಾರೆ.

ಇದನ್ನೂ ಓದಿ: ಒಂದು ನಿಮಿಷಕ್ಕೆ ಒಂದು ಕೋಟಿ ಸಂಭಾವನೆ ಪಡೆಯುವುದಾಗಿ ಹೇಳಿದ ಊರ್ವಶಿ ರೌಟೆಲ್ಲಾ: ಹೌಹಾರಿದ ನೆಟ್ಟಿಗರು

ಊರ್ವಶಿ ಹಾಗೂ ರಿಷಭ್ ಪಂತ್ ಇಬ್ಬರೂ ಡೇಟಿಂಗ್ ಮಾಡಿದ್ದರು ಎನ್ನಲಾಗಿತ್ತು. ಬಳಿಕ ಇಬ್ಬರೂ ಬೇರೆ ಆದರು. ಪಂತ್ ಈ ವಿಚಾರದಲ್ಲಿ ರಹಸ್ಯ ಕಾಪಾಡಿಕೊಂಡು ಬಂದಿದ್ದರು. ಆದರೆ, ಊರ್ವಶಿ ಬಾಯಿಗೆ ಬಂದಂತೆ ಹೇಳಿಕೆ ನೀಡಿದ್ದರು. ‘ರಿಷಭ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು’ ಎಂದೆಲ್ಲ ಹೇಳಿಕೊಂಡಿದ್ದರು.  ಸಿನಿಮಾ ವಿಚಾರಕ್ಕೆ ಬರೋದಾದರೆ ‘ಪುಷ್ಪ 2’ ಚಿತ್ರದಲ್ಲಿ ಊರ್ವಶಿ ವಿಶೇಷ ಹಾಡಿಗೆ ಹೆಜ್ಜೆ ಹಾಕುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡದಿಂದ ಶೀಘ್ರವೇ ಘೋಷಣೆ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ