Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಈ ಬೌಲರ್ ಮೇಲೆ ಊರ್ವಶಿ ರೌಟೇಲಾಗೆ ಹೆಚ್ಚಿತು ಒಲವು? ಟ್ರೋಲ್​ಗೆ ಒಳಗಾದ ನಟಿ

ಊರ್ವಶಿ ರೌಟೇಲಾ ಅವರು ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗೋಕೆ ಬಯಸುತ್ತಾರೆ. ಇಲ್ಲಸಲ್ಲದ ಹೇಳಿಕೆ ನೀಡಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಈ ಮೊದಲು ಅವರು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಹಿಂದೆ ಬಿದ್ದಿದ್ದರು. ಅವರ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡಿ ಸುದ್ದಿ ಆಗಿದ್ದರು. ಈಗ ಅವರು ಮತ್ತೊಮ್ಮೆ ಚರ್ಚೆಯಲ್ಲಿದ್ದಾರೆ.

ಪಾಕಿಸ್ತಾನದ ಈ ಬೌಲರ್ ಮೇಲೆ ಊರ್ವಶಿ ರೌಟೇಲಾಗೆ ಹೆಚ್ಚಿತು ಒಲವು? ಟ್ರೋಲ್​ಗೆ ಒಳಗಾದ ನಟಿ
ಊರ್ವಶಿ
Follow us
ರಾಜೇಶ್ ದುಗ್ಗುಮನೆ
|

Updated on: Sep 04, 2023 | 12:49 PM

ಏಷ್ಯಾ ಕಪ್ 2023 ನಡೆಯುತ್ತಿದೆ. ಶನಿವಾರ (ಸೆಪ್ಟೆಂಬರ್ 2) ಭಾರತ Vs ಪಾಕಿಸ್ತಾನ ಪಂದ್ಯ ನಡೆಯಿತು. ಮಳೆಯ ಕಾರಣದಿಂದ ಈ ಪಂದ್ಯ ರದ್ದಾಗಿದೆ. ಈ ಮಧ್ಯೆ ನಟಿ ಊರ್ವಶಿ ರೌಟೇಲಾ (Urvashi Rautela) ವಿವಾದ ಒಂದನ್ನು ಮಾಡಿಕೊಂಡಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಅವರು ಪಾಕಿಸ್ತಾನದ ಬೌಲರ್ ನಸೀಮ್ ಶಾ ಅವರ ಫೋಟೋ ಪೋಸ್ಟ್ ಮಾಡಿದ್ದಾರೆ. ಇವರನ್ನು ಅನೇಕರು ಟೀಕೆ ಮಾಡಿದ್ದಾರೆ. ನಟಿ ಊರ್ವಶಿ ಅವರು ಪಾಕಿಸ್ತಾನದ ಬೌಲರ್ ಕಡೆ ಇಷ್ಟೊಂದು ಒಲವು ತೋರಿಸುವುದು ಏಕೆ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಊರ್ವಶಿ ರೌಟೇಲಾ ಅವರು ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗೋಕೆ ಬಯಸುತ್ತಾರೆ. ಇಲ್ಲಸಲ್ಲದ ಹೇಳಿಕೆ ನೀಡಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಈ ಮೊದಲು ಅವರು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಹಿಂದೆ ಬಿದ್ದಿದ್ದರು. ಅವರ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡಿ ಸುದ್ದಿ ಆಗಿದ್ದರು. ಈಗ ಅವರು ಮತ್ತೊಮ್ಮೆ ಚರ್ಚೆಯಲ್ಲಿದ್ದಾರೆ.

ಭಾರತ-ಪಾಕಿಸ್ತಾನ ಮ್ಯಾಚ್​ ವೇಳೆ ಜಿಮ್​ನಲ್ಲಿರುವ ಟಿವಿಯ ಫೋಟೋನ ಊರ್ವಶಿ ಶೇರ್ ಮಾಡಿಕೊಂಡಿದ್ದಾರೆ. ಫೋಟೋದಲ್ಲಿ ಪಾಕಿಸ್ತಾನದ ಬೌಲರ್ ನಸೀಮ್ ಶಾ ಹೈಲೈಟ್ ಆಗಿದ್ದಾರೆ. ಈ ಫೋಟೋಗೆ ಅವರು ‘ವರ್ಕೌಟ್ ಟೈಮ್’ ಎನ್ನುವ ಕ್ಯಾಪ್ಶನ್ ನೀಡಿದ್ದರು. ಅವರು ಉದ್ದೇಶಪೂರ್ವಕವಾಗಿಯೇ ಈ ಫೋಟೋ ಹಾಕಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಅನೇಕರು ನಟಿಯನ್ನು ಟೀಕಿಸಿದ್ದಾರೆ.

ಅಂದಹಾಗೆ, ಊರ್ವಶಿ ಅವರು ಈ ರೀತಿ ಸುದ್ದಿ ಆಗುತ್ತಿರುವುದು ಇದೇ ಮೊದಲೇನು ಅಲ್ಲ. 2022ರ ಏಷ್ಯಾ ಕಪ್ ದುಬೈನಲ್ಲಿ ನಡೆದಿತ್ತು. ಈ ವೇಳೆ ಅವರು ನಸೀಮ್ ಶಾ ಫೋಟೋ ಹಂಚಿಕೊಂಡಿದ್ದರು. ಈ ವೇಳೆ ಅವರನ್ನು ಟೀಕಿಸಲಾಗಿತ್ತು. ಈಗ ಮತ್ತದೇ ಕೆಲಸವನ್ನು ಅವರು ಮಾಡಿದ್ದಾರೆ.

ಇದನ್ನೂ ಓದಿ: ಒಂದು ನಿಮಿಷಕ್ಕೆ ಒಂದು ಕೋಟಿ ಸಂಭಾವನೆ ಪಡೆಯುವುದಾಗಿ ಹೇಳಿದ ಊರ್ವಶಿ ರೌಟೆಲ್ಲಾ: ಹೌಹಾರಿದ ನೆಟ್ಟಿಗರು

ಊರ್ವಶಿ ಹಾಗೂ ರಿಷಭ್ ಪಂತ್ ಇಬ್ಬರೂ ಡೇಟಿಂಗ್ ಮಾಡಿದ್ದರು ಎನ್ನಲಾಗಿತ್ತು. ಬಳಿಕ ಇಬ್ಬರೂ ಬೇರೆ ಆದರು. ಪಂತ್ ಈ ವಿಚಾರದಲ್ಲಿ ರಹಸ್ಯ ಕಾಪಾಡಿಕೊಂಡು ಬಂದಿದ್ದರು. ಆದರೆ, ಊರ್ವಶಿ ಬಾಯಿಗೆ ಬಂದಂತೆ ಹೇಳಿಕೆ ನೀಡಿದ್ದರು. ‘ರಿಷಭ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು’ ಎಂದೆಲ್ಲ ಹೇಳಿಕೊಂಡಿದ್ದರು.  ಸಿನಿಮಾ ವಿಚಾರಕ್ಕೆ ಬರೋದಾದರೆ ‘ಪುಷ್ಪ 2’ ಚಿತ್ರದಲ್ಲಿ ಊರ್ವಶಿ ವಿಶೇಷ ಹಾಡಿಗೆ ಹೆಜ್ಜೆ ಹಾಕುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡದಿಂದ ಶೀಘ್ರವೇ ಘೋಷಣೆ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ