AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ನೌಕಾಸೇನೆ ಅಧಿಕಾರಿಗಳ ಬಾಯಲ್ಲೂ ಬಾಲಿವುಡ್​​​ ಹಾಡು! ಇಲ್ಲಿದೆ ವೈರಲ್​ ವಿಡಿಯೋ

ಒಂದೂವರೆ ನಿಮಿಷ ಅವಧಿಯ ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವ್ಯೂಸ್​ ಪಡೆದುಕೊಂಡಿದೆ. 26 ಸಾವಿರಕ್ಕೂ ಹೆಚ್ಚು ಲೈಕ್ಸ್​ ಸಿಕ್ಕಿವೆ. ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಅಮೆರಿಕದ ನೌಕಾಸೇನೆ ಅಧಿಕಾರಿಗಳ ಬಾಯಲ್ಲೂ ಬಾಲಿವುಡ್​​​ ಹಾಡು! ಇಲ್ಲಿದೆ ವೈರಲ್​ ವಿಡಿಯೋ
ಅಮೆರಿಕದ ನೌಕಾಸೇನೆ ಅಧಿಕಾರಿಗಳು
ಮದನ್​ ಕುಮಾರ್​
| Edited By: |

Updated on: Mar 29, 2021 | 8:02 PM

Share

ಬಾಲಿವುಡ್​ ಸಿನಿಮಾ ಗೀತೆಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತವೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಆದರೆ ಅಮೆರಿಕದ ನೌಕಾಸೇನೆಯ ಅಧಿಕಾರಿಗಳು ಕೂಡ ಹಿಂದಿ ಚಿತ್ರದ ಹಾಡುಗಳನ್ನು ಗುನುಗುತ್ತಾರೆ ಎಂಬುದು ಅಚ್ಚರಿಯ ವಿಚಾರ. ಹೌದು, ಅಮೆರಿಕದ ನೌಕಾಸೇನೆ​ ಅಧಿಕಾರಿಗಳು ಶಾರುಖ್​ ಖಾನ್​ ಸಿನಿಮಾದ ಒಂದು ಹಾಡನ್ನು ಹಾಡುತ್ತಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ.

ಅಮೆರಿಕದಲ್ಲಿ ಇರುವ ಭಾರತೀಯ ರಾಯಭಾರಿ ತರಂಜಿತ್​​ ಸಿಂಗ್​ ಅವರ ಜೊತೆ ಇತ್ತೀಚೆಗೆ ಯುಎಸ್​ ನೌಕಾಸೇನಾ ಅಧಿಕಾರಿಗಳ ಸಭೆ ನಡೆಯಿತು. ಆ ವೇಳೆ ಅಲ್ಲಿನ ಅಧಿಕಾರಿಗಳು ‘ಯೇ ಜೋ ದೇಶ್​ ತೇರಾ ಹೈ…’ ಹಾಡನ್ನು ಬಹಳ ಶಿಸ್ತಿನಿಂದ ಹಾಡಿದ್ದಾರೆ. ಅವರಿಗೆ ಸಂಗೀತ ವಾದ್ಯಗಳು ಸಾಥ್​ ನೀಡಿವೆ. ಇದು 2004ರಲ್ಲಿ ಬಿಡುಗಡೆಯಾದ ‘ಸ್ವದೇಸ್​’ ಸಿನಿಮಾದ ಗೀತೆ. ಶಾರುಖ್​ ಖಾನ್​ ನಟನೆಯ ಈ ಚಿತ್ರಕ್ಕೆ ಎ.ಆರ್​. ರೆಹಮಾನ್​ ಸಂಗೀತ ಸಂಯೋಜಿಸಿದ್ದರು.

ನೌಕಾಸೇನೆ ಅಧಿಕಾರಿಗಳು ಈ ಹಾಡನ್ನು ಗುನುಗುತ್ತಿರುವ ವಿಡಿಯೋವನ್ನು ತರಂಜಿತ್​ ಸಿಂಗ್ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಒಂದೂವರೆ ನಿಮಿಷ ಅವಧಿಯ ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವ್ಯೂಸ್​ ಪಡೆದುಕೊಂಡಿದೆ. 26 ಸಾವಿರಕ್ಕೂ ಹೆಚ್ಚು ಲೈಕ್ಸ್​ ಸಿಕ್ಕಿವೆ. ಸಾವಿರಾರು ಜನರು ಇದನ್ನು ಶೇರ್​ ಮಾಡಿಕೊಳ್ಳುತ್ತಿದ್ದು, ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

‘ಭಾರತ ಮತ್ತು ಅಮೆರಿಕದ ಈ ಸಂಬಂಧ ಎಂದಿಗೂ ಹಾಳಾಗಲು ಸಾಧ್ಯವಿಲ್ಲ’ ಎಂದು ತರಂಜಿತ್​ ಸಿಂಗ್ ಸಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ವೈರಲ್​ ಆಗಿರುವುದು ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್​ ಅವರ ಗಮನಕ್ಕೂ ಬಂದಿದೆ. ಅವರು ಕೂಡ ಇದನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದು, ‘ಸ್ವದೇಸ್​ ಎಂದೆಂದಿಗೂ ಆಳ್ವಿಕೆ ನಡೆಸುತ್ತದೆ’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಬಾಲಿವುಡ್​ ಸಿನಿಪ್ರೇಮಿಗಳು ಈ ವಿಡಿಯೋಗೆ ಸಿಕ್ಕಾಪಟ್ಟೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ: ಅಣ್ಣಾವ್ರ ಹಾಡು ಹೇಳಿ ಕನ್ನಡಿಗರ ಮನ ಗೆದ್ದ ಬಾಲಿವುಡ್​ ನಟ ಗೋವಿಂದ! ಹರ್ಷಿಕಾ ಜತೆಗಿನ ವಿಡಿಯೋ ವೈರಲ್​

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ