AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ನೌಕಾಸೇನೆ ಅಧಿಕಾರಿಗಳ ಬಾಯಲ್ಲೂ ಬಾಲಿವುಡ್​​​ ಹಾಡು! ಇಲ್ಲಿದೆ ವೈರಲ್​ ವಿಡಿಯೋ

ಒಂದೂವರೆ ನಿಮಿಷ ಅವಧಿಯ ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವ್ಯೂಸ್​ ಪಡೆದುಕೊಂಡಿದೆ. 26 ಸಾವಿರಕ್ಕೂ ಹೆಚ್ಚು ಲೈಕ್ಸ್​ ಸಿಕ್ಕಿವೆ. ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಅಮೆರಿಕದ ನೌಕಾಸೇನೆ ಅಧಿಕಾರಿಗಳ ಬಾಯಲ್ಲೂ ಬಾಲಿವುಡ್​​​ ಹಾಡು! ಇಲ್ಲಿದೆ ವೈರಲ್​ ವಿಡಿಯೋ
ಅಮೆರಿಕದ ನೌಕಾಸೇನೆ ಅಧಿಕಾರಿಗಳು
ಮದನ್​ ಕುಮಾರ್​
| Edited By: |

Updated on: Mar 29, 2021 | 8:02 PM

Share

ಬಾಲಿವುಡ್​ ಸಿನಿಮಾ ಗೀತೆಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತವೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಆದರೆ ಅಮೆರಿಕದ ನೌಕಾಸೇನೆಯ ಅಧಿಕಾರಿಗಳು ಕೂಡ ಹಿಂದಿ ಚಿತ್ರದ ಹಾಡುಗಳನ್ನು ಗುನುಗುತ್ತಾರೆ ಎಂಬುದು ಅಚ್ಚರಿಯ ವಿಚಾರ. ಹೌದು, ಅಮೆರಿಕದ ನೌಕಾಸೇನೆ​ ಅಧಿಕಾರಿಗಳು ಶಾರುಖ್​ ಖಾನ್​ ಸಿನಿಮಾದ ಒಂದು ಹಾಡನ್ನು ಹಾಡುತ್ತಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ.

ಅಮೆರಿಕದಲ್ಲಿ ಇರುವ ಭಾರತೀಯ ರಾಯಭಾರಿ ತರಂಜಿತ್​​ ಸಿಂಗ್​ ಅವರ ಜೊತೆ ಇತ್ತೀಚೆಗೆ ಯುಎಸ್​ ನೌಕಾಸೇನಾ ಅಧಿಕಾರಿಗಳ ಸಭೆ ನಡೆಯಿತು. ಆ ವೇಳೆ ಅಲ್ಲಿನ ಅಧಿಕಾರಿಗಳು ‘ಯೇ ಜೋ ದೇಶ್​ ತೇರಾ ಹೈ…’ ಹಾಡನ್ನು ಬಹಳ ಶಿಸ್ತಿನಿಂದ ಹಾಡಿದ್ದಾರೆ. ಅವರಿಗೆ ಸಂಗೀತ ವಾದ್ಯಗಳು ಸಾಥ್​ ನೀಡಿವೆ. ಇದು 2004ರಲ್ಲಿ ಬಿಡುಗಡೆಯಾದ ‘ಸ್ವದೇಸ್​’ ಸಿನಿಮಾದ ಗೀತೆ. ಶಾರುಖ್​ ಖಾನ್​ ನಟನೆಯ ಈ ಚಿತ್ರಕ್ಕೆ ಎ.ಆರ್​. ರೆಹಮಾನ್​ ಸಂಗೀತ ಸಂಯೋಜಿಸಿದ್ದರು.

ನೌಕಾಸೇನೆ ಅಧಿಕಾರಿಗಳು ಈ ಹಾಡನ್ನು ಗುನುಗುತ್ತಿರುವ ವಿಡಿಯೋವನ್ನು ತರಂಜಿತ್​ ಸಿಂಗ್ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಒಂದೂವರೆ ನಿಮಿಷ ಅವಧಿಯ ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವ್ಯೂಸ್​ ಪಡೆದುಕೊಂಡಿದೆ. 26 ಸಾವಿರಕ್ಕೂ ಹೆಚ್ಚು ಲೈಕ್ಸ್​ ಸಿಕ್ಕಿವೆ. ಸಾವಿರಾರು ಜನರು ಇದನ್ನು ಶೇರ್​ ಮಾಡಿಕೊಳ್ಳುತ್ತಿದ್ದು, ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

‘ಭಾರತ ಮತ್ತು ಅಮೆರಿಕದ ಈ ಸಂಬಂಧ ಎಂದಿಗೂ ಹಾಳಾಗಲು ಸಾಧ್ಯವಿಲ್ಲ’ ಎಂದು ತರಂಜಿತ್​ ಸಿಂಗ್ ಸಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ವೈರಲ್​ ಆಗಿರುವುದು ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್​ ಅವರ ಗಮನಕ್ಕೂ ಬಂದಿದೆ. ಅವರು ಕೂಡ ಇದನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದು, ‘ಸ್ವದೇಸ್​ ಎಂದೆಂದಿಗೂ ಆಳ್ವಿಕೆ ನಡೆಸುತ್ತದೆ’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಬಾಲಿವುಡ್​ ಸಿನಿಪ್ರೇಮಿಗಳು ಈ ವಿಡಿಯೋಗೆ ಸಿಕ್ಕಾಪಟ್ಟೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ: ಅಣ್ಣಾವ್ರ ಹಾಡು ಹೇಳಿ ಕನ್ನಡಿಗರ ಮನ ಗೆದ್ದ ಬಾಲಿವುಡ್​ ನಟ ಗೋವಿಂದ! ಹರ್ಷಿಕಾ ಜತೆಗಿನ ವಿಡಿಯೋ ವೈರಲ್​

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್‌ನ ಅಪರಾಧ ಚಟುವಟಿಕೆಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್‌ನ ಅಪರಾಧ ಚಟುವಟಿಕೆಗಳು