AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ನೌಕಾಸೇನೆ ಅಧಿಕಾರಿಗಳ ಬಾಯಲ್ಲೂ ಬಾಲಿವುಡ್​​​ ಹಾಡು! ಇಲ್ಲಿದೆ ವೈರಲ್​ ವಿಡಿಯೋ

ಒಂದೂವರೆ ನಿಮಿಷ ಅವಧಿಯ ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವ್ಯೂಸ್​ ಪಡೆದುಕೊಂಡಿದೆ. 26 ಸಾವಿರಕ್ಕೂ ಹೆಚ್ಚು ಲೈಕ್ಸ್​ ಸಿಕ್ಕಿವೆ. ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಅಮೆರಿಕದ ನೌಕಾಸೇನೆ ಅಧಿಕಾರಿಗಳ ಬಾಯಲ್ಲೂ ಬಾಲಿವುಡ್​​​ ಹಾಡು! ಇಲ್ಲಿದೆ ವೈರಲ್​ ವಿಡಿಯೋ
ಅಮೆರಿಕದ ನೌಕಾಸೇನೆ ಅಧಿಕಾರಿಗಳು
ಮದನ್​ ಕುಮಾರ್​
| Edited By: |

Updated on: Mar 29, 2021 | 8:02 PM

Share

ಬಾಲಿವುಡ್​ ಸಿನಿಮಾ ಗೀತೆಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತವೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಆದರೆ ಅಮೆರಿಕದ ನೌಕಾಸೇನೆಯ ಅಧಿಕಾರಿಗಳು ಕೂಡ ಹಿಂದಿ ಚಿತ್ರದ ಹಾಡುಗಳನ್ನು ಗುನುಗುತ್ತಾರೆ ಎಂಬುದು ಅಚ್ಚರಿಯ ವಿಚಾರ. ಹೌದು, ಅಮೆರಿಕದ ನೌಕಾಸೇನೆ​ ಅಧಿಕಾರಿಗಳು ಶಾರುಖ್​ ಖಾನ್​ ಸಿನಿಮಾದ ಒಂದು ಹಾಡನ್ನು ಹಾಡುತ್ತಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ.

ಅಮೆರಿಕದಲ್ಲಿ ಇರುವ ಭಾರತೀಯ ರಾಯಭಾರಿ ತರಂಜಿತ್​​ ಸಿಂಗ್​ ಅವರ ಜೊತೆ ಇತ್ತೀಚೆಗೆ ಯುಎಸ್​ ನೌಕಾಸೇನಾ ಅಧಿಕಾರಿಗಳ ಸಭೆ ನಡೆಯಿತು. ಆ ವೇಳೆ ಅಲ್ಲಿನ ಅಧಿಕಾರಿಗಳು ‘ಯೇ ಜೋ ದೇಶ್​ ತೇರಾ ಹೈ…’ ಹಾಡನ್ನು ಬಹಳ ಶಿಸ್ತಿನಿಂದ ಹಾಡಿದ್ದಾರೆ. ಅವರಿಗೆ ಸಂಗೀತ ವಾದ್ಯಗಳು ಸಾಥ್​ ನೀಡಿವೆ. ಇದು 2004ರಲ್ಲಿ ಬಿಡುಗಡೆಯಾದ ‘ಸ್ವದೇಸ್​’ ಸಿನಿಮಾದ ಗೀತೆ. ಶಾರುಖ್​ ಖಾನ್​ ನಟನೆಯ ಈ ಚಿತ್ರಕ್ಕೆ ಎ.ಆರ್​. ರೆಹಮಾನ್​ ಸಂಗೀತ ಸಂಯೋಜಿಸಿದ್ದರು.

ನೌಕಾಸೇನೆ ಅಧಿಕಾರಿಗಳು ಈ ಹಾಡನ್ನು ಗುನುಗುತ್ತಿರುವ ವಿಡಿಯೋವನ್ನು ತರಂಜಿತ್​ ಸಿಂಗ್ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಒಂದೂವರೆ ನಿಮಿಷ ಅವಧಿಯ ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವ್ಯೂಸ್​ ಪಡೆದುಕೊಂಡಿದೆ. 26 ಸಾವಿರಕ್ಕೂ ಹೆಚ್ಚು ಲೈಕ್ಸ್​ ಸಿಕ್ಕಿವೆ. ಸಾವಿರಾರು ಜನರು ಇದನ್ನು ಶೇರ್​ ಮಾಡಿಕೊಳ್ಳುತ್ತಿದ್ದು, ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

‘ಭಾರತ ಮತ್ತು ಅಮೆರಿಕದ ಈ ಸಂಬಂಧ ಎಂದಿಗೂ ಹಾಳಾಗಲು ಸಾಧ್ಯವಿಲ್ಲ’ ಎಂದು ತರಂಜಿತ್​ ಸಿಂಗ್ ಸಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ವೈರಲ್​ ಆಗಿರುವುದು ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್​ ಅವರ ಗಮನಕ್ಕೂ ಬಂದಿದೆ. ಅವರು ಕೂಡ ಇದನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದು, ‘ಸ್ವದೇಸ್​ ಎಂದೆಂದಿಗೂ ಆಳ್ವಿಕೆ ನಡೆಸುತ್ತದೆ’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಬಾಲಿವುಡ್​ ಸಿನಿಪ್ರೇಮಿಗಳು ಈ ವಿಡಿಯೋಗೆ ಸಿಕ್ಕಾಪಟ್ಟೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ: ಅಣ್ಣಾವ್ರ ಹಾಡು ಹೇಳಿ ಕನ್ನಡಿಗರ ಮನ ಗೆದ್ದ ಬಾಲಿವುಡ್​ ನಟ ಗೋವಿಂದ! ಹರ್ಷಿಕಾ ಜತೆಗಿನ ವಿಡಿಯೋ ವೈರಲ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ