Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ನೌಕಾಸೇನೆ ಅಧಿಕಾರಿಗಳ ಬಾಯಲ್ಲೂ ಬಾಲಿವುಡ್​​​ ಹಾಡು! ಇಲ್ಲಿದೆ ವೈರಲ್​ ವಿಡಿಯೋ

ಒಂದೂವರೆ ನಿಮಿಷ ಅವಧಿಯ ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವ್ಯೂಸ್​ ಪಡೆದುಕೊಂಡಿದೆ. 26 ಸಾವಿರಕ್ಕೂ ಹೆಚ್ಚು ಲೈಕ್ಸ್​ ಸಿಕ್ಕಿವೆ. ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಅಮೆರಿಕದ ನೌಕಾಸೇನೆ ಅಧಿಕಾರಿಗಳ ಬಾಯಲ್ಲೂ ಬಾಲಿವುಡ್​​​ ಹಾಡು! ಇಲ್ಲಿದೆ ವೈರಲ್​ ವಿಡಿಯೋ
ಅಮೆರಿಕದ ನೌಕಾಸೇನೆ ಅಧಿಕಾರಿಗಳು
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Mar 29, 2021 | 8:02 PM

ಬಾಲಿವುಡ್​ ಸಿನಿಮಾ ಗೀತೆಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತವೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಆದರೆ ಅಮೆರಿಕದ ನೌಕಾಸೇನೆಯ ಅಧಿಕಾರಿಗಳು ಕೂಡ ಹಿಂದಿ ಚಿತ್ರದ ಹಾಡುಗಳನ್ನು ಗುನುಗುತ್ತಾರೆ ಎಂಬುದು ಅಚ್ಚರಿಯ ವಿಚಾರ. ಹೌದು, ಅಮೆರಿಕದ ನೌಕಾಸೇನೆ​ ಅಧಿಕಾರಿಗಳು ಶಾರುಖ್​ ಖಾನ್​ ಸಿನಿಮಾದ ಒಂದು ಹಾಡನ್ನು ಹಾಡುತ್ತಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ.

ಅಮೆರಿಕದಲ್ಲಿ ಇರುವ ಭಾರತೀಯ ರಾಯಭಾರಿ ತರಂಜಿತ್​​ ಸಿಂಗ್​ ಅವರ ಜೊತೆ ಇತ್ತೀಚೆಗೆ ಯುಎಸ್​ ನೌಕಾಸೇನಾ ಅಧಿಕಾರಿಗಳ ಸಭೆ ನಡೆಯಿತು. ಆ ವೇಳೆ ಅಲ್ಲಿನ ಅಧಿಕಾರಿಗಳು ‘ಯೇ ಜೋ ದೇಶ್​ ತೇರಾ ಹೈ…’ ಹಾಡನ್ನು ಬಹಳ ಶಿಸ್ತಿನಿಂದ ಹಾಡಿದ್ದಾರೆ. ಅವರಿಗೆ ಸಂಗೀತ ವಾದ್ಯಗಳು ಸಾಥ್​ ನೀಡಿವೆ. ಇದು 2004ರಲ್ಲಿ ಬಿಡುಗಡೆಯಾದ ‘ಸ್ವದೇಸ್​’ ಸಿನಿಮಾದ ಗೀತೆ. ಶಾರುಖ್​ ಖಾನ್​ ನಟನೆಯ ಈ ಚಿತ್ರಕ್ಕೆ ಎ.ಆರ್​. ರೆಹಮಾನ್​ ಸಂಗೀತ ಸಂಯೋಜಿಸಿದ್ದರು.

ನೌಕಾಸೇನೆ ಅಧಿಕಾರಿಗಳು ಈ ಹಾಡನ್ನು ಗುನುಗುತ್ತಿರುವ ವಿಡಿಯೋವನ್ನು ತರಂಜಿತ್​ ಸಿಂಗ್ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಒಂದೂವರೆ ನಿಮಿಷ ಅವಧಿಯ ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವ್ಯೂಸ್​ ಪಡೆದುಕೊಂಡಿದೆ. 26 ಸಾವಿರಕ್ಕೂ ಹೆಚ್ಚು ಲೈಕ್ಸ್​ ಸಿಕ್ಕಿವೆ. ಸಾವಿರಾರು ಜನರು ಇದನ್ನು ಶೇರ್​ ಮಾಡಿಕೊಳ್ಳುತ್ತಿದ್ದು, ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

‘ಭಾರತ ಮತ್ತು ಅಮೆರಿಕದ ಈ ಸಂಬಂಧ ಎಂದಿಗೂ ಹಾಳಾಗಲು ಸಾಧ್ಯವಿಲ್ಲ’ ಎಂದು ತರಂಜಿತ್​ ಸಿಂಗ್ ಸಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ವೈರಲ್​ ಆಗಿರುವುದು ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್​ ಅವರ ಗಮನಕ್ಕೂ ಬಂದಿದೆ. ಅವರು ಕೂಡ ಇದನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದು, ‘ಸ್ವದೇಸ್​ ಎಂದೆಂದಿಗೂ ಆಳ್ವಿಕೆ ನಡೆಸುತ್ತದೆ’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಬಾಲಿವುಡ್​ ಸಿನಿಪ್ರೇಮಿಗಳು ಈ ವಿಡಿಯೋಗೆ ಸಿಕ್ಕಾಪಟ್ಟೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ: ಅಣ್ಣಾವ್ರ ಹಾಡು ಹೇಳಿ ಕನ್ನಡಿಗರ ಮನ ಗೆದ್ದ ಬಾಲಿವುಡ್​ ನಟ ಗೋವಿಂದ! ಹರ್ಷಿಕಾ ಜತೆಗಿನ ವಿಡಿಯೋ ವೈರಲ್​

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ