AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ನೌಕಾಸೇನೆ ಅಧಿಕಾರಿಗಳ ಬಾಯಲ್ಲೂ ಬಾಲಿವುಡ್​​​ ಹಾಡು! ಇಲ್ಲಿದೆ ವೈರಲ್​ ವಿಡಿಯೋ

ಒಂದೂವರೆ ನಿಮಿಷ ಅವಧಿಯ ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವ್ಯೂಸ್​ ಪಡೆದುಕೊಂಡಿದೆ. 26 ಸಾವಿರಕ್ಕೂ ಹೆಚ್ಚು ಲೈಕ್ಸ್​ ಸಿಕ್ಕಿವೆ. ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಅಮೆರಿಕದ ನೌಕಾಸೇನೆ ಅಧಿಕಾರಿಗಳ ಬಾಯಲ್ಲೂ ಬಾಲಿವುಡ್​​​ ಹಾಡು! ಇಲ್ಲಿದೆ ವೈರಲ್​ ವಿಡಿಯೋ
ಅಮೆರಿಕದ ನೌಕಾಸೇನೆ ಅಧಿಕಾರಿಗಳು
ಮದನ್​ ಕುಮಾರ್​
| Edited By: |

Updated on: Mar 29, 2021 | 8:02 PM

Share

ಬಾಲಿವುಡ್​ ಸಿನಿಮಾ ಗೀತೆಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತವೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಆದರೆ ಅಮೆರಿಕದ ನೌಕಾಸೇನೆಯ ಅಧಿಕಾರಿಗಳು ಕೂಡ ಹಿಂದಿ ಚಿತ್ರದ ಹಾಡುಗಳನ್ನು ಗುನುಗುತ್ತಾರೆ ಎಂಬುದು ಅಚ್ಚರಿಯ ವಿಚಾರ. ಹೌದು, ಅಮೆರಿಕದ ನೌಕಾಸೇನೆ​ ಅಧಿಕಾರಿಗಳು ಶಾರುಖ್​ ಖಾನ್​ ಸಿನಿಮಾದ ಒಂದು ಹಾಡನ್ನು ಹಾಡುತ್ತಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ.

ಅಮೆರಿಕದಲ್ಲಿ ಇರುವ ಭಾರತೀಯ ರಾಯಭಾರಿ ತರಂಜಿತ್​​ ಸಿಂಗ್​ ಅವರ ಜೊತೆ ಇತ್ತೀಚೆಗೆ ಯುಎಸ್​ ನೌಕಾಸೇನಾ ಅಧಿಕಾರಿಗಳ ಸಭೆ ನಡೆಯಿತು. ಆ ವೇಳೆ ಅಲ್ಲಿನ ಅಧಿಕಾರಿಗಳು ‘ಯೇ ಜೋ ದೇಶ್​ ತೇರಾ ಹೈ…’ ಹಾಡನ್ನು ಬಹಳ ಶಿಸ್ತಿನಿಂದ ಹಾಡಿದ್ದಾರೆ. ಅವರಿಗೆ ಸಂಗೀತ ವಾದ್ಯಗಳು ಸಾಥ್​ ನೀಡಿವೆ. ಇದು 2004ರಲ್ಲಿ ಬಿಡುಗಡೆಯಾದ ‘ಸ್ವದೇಸ್​’ ಸಿನಿಮಾದ ಗೀತೆ. ಶಾರುಖ್​ ಖಾನ್​ ನಟನೆಯ ಈ ಚಿತ್ರಕ್ಕೆ ಎ.ಆರ್​. ರೆಹಮಾನ್​ ಸಂಗೀತ ಸಂಯೋಜಿಸಿದ್ದರು.

ನೌಕಾಸೇನೆ ಅಧಿಕಾರಿಗಳು ಈ ಹಾಡನ್ನು ಗುನುಗುತ್ತಿರುವ ವಿಡಿಯೋವನ್ನು ತರಂಜಿತ್​ ಸಿಂಗ್ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಒಂದೂವರೆ ನಿಮಿಷ ಅವಧಿಯ ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವ್ಯೂಸ್​ ಪಡೆದುಕೊಂಡಿದೆ. 26 ಸಾವಿರಕ್ಕೂ ಹೆಚ್ಚು ಲೈಕ್ಸ್​ ಸಿಕ್ಕಿವೆ. ಸಾವಿರಾರು ಜನರು ಇದನ್ನು ಶೇರ್​ ಮಾಡಿಕೊಳ್ಳುತ್ತಿದ್ದು, ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

‘ಭಾರತ ಮತ್ತು ಅಮೆರಿಕದ ಈ ಸಂಬಂಧ ಎಂದಿಗೂ ಹಾಳಾಗಲು ಸಾಧ್ಯವಿಲ್ಲ’ ಎಂದು ತರಂಜಿತ್​ ಸಿಂಗ್ ಸಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ವೈರಲ್​ ಆಗಿರುವುದು ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್​ ಅವರ ಗಮನಕ್ಕೂ ಬಂದಿದೆ. ಅವರು ಕೂಡ ಇದನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದು, ‘ಸ್ವದೇಸ್​ ಎಂದೆಂದಿಗೂ ಆಳ್ವಿಕೆ ನಡೆಸುತ್ತದೆ’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಬಾಲಿವುಡ್​ ಸಿನಿಪ್ರೇಮಿಗಳು ಈ ವಿಡಿಯೋಗೆ ಸಿಕ್ಕಾಪಟ್ಟೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ: ಅಣ್ಣಾವ್ರ ಹಾಡು ಹೇಳಿ ಕನ್ನಡಿಗರ ಮನ ಗೆದ್ದ ಬಾಲಿವುಡ್​ ನಟ ಗೋವಿಂದ! ಹರ್ಷಿಕಾ ಜತೆಗಿನ ವಿಡಿಯೋ ವೈರಲ್​

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ