AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ವಿರುದ್ಧ ‘ಉಸ್ತಾದ್ ಭಗತ್ ಸಿಂಗ್’ ಬಾಕ್ಸ್ ಆಫೀಸ್ ಹರಸಾಹಸ

Ustaad Bhagat Singh vs Dhurandhar 2: ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರತಂಡ ‘ಧುರಂಧರ್ 2’ ಸಿನಿಮಾವನ್ನು ಸರಿಯಾಗಿ ಅಂದಾಜಿಸದೆ ಅದರ ಎದುರು ಬಿಡುಗಡೆ ಮಾಡಿತು. ಆದರೆ ಈಗ ಬಾಕ್ಸ್ ಆಫೀಸ್​​ನಲ್ಲಿ ಏದುಸಿರು ಬಿಡುತ್ತಿದೆ. ಆದರೆ ಸಂಪೂರ್ಣ ಸೋಲೊಪ್ಪಿಕೊಂಡಿಲ್ಲ. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಕಲೆಕ್ಷನ್ ಎಷ್ಟಾಯ್ತು? ಮಾಹಿತಿ ಇಲ್ಲಿದೆ...

‘ಧುರಂಧರ್ 2’ ವಿರುದ್ಧ ‘ಉಸ್ತಾದ್ ಭಗತ್ ಸಿಂಗ್’ ಬಾಕ್ಸ್ ಆಫೀಸ್ ಹರಸಾಹಸ
Dhurandhar Ustaad
ಮಂಜುನಾಥ ಸಿ.
|

Updated on: Mar 22, 2026 | 11:07 PM

Share

ಧುರಂಧರ್ 2’ (Dhurandhar 2 ಸಿನಿಮಾ ಬಿಡುಗಡೆ ಆದ ಮೂರೇ ದಿನಕ್ಕೆ 300 ಕೋಟಿಗೂ ಹೆಚ್ಚು ಮೊತ್ತ ಗಳಿಸಿದ್ದು, ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಾ ಸಾಗುತ್ತಿದೆ. ಇದನ್ನು ಮೊದಲೇ ಊಹಿಸಿದ್ದ ಕೆಲ ಸಿನಿಮಾಗಳು ‘ಧುರಂಧರ್ 2’ ಸಿನಿಮಾ ಜೊತೆಗಿನ ಸ್ಪರ್ಧೆಯನ್ನು ತಪ್ಪಿಸಿಕೊಂಡವು. ಆದರೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರತಂಡ ‘ಧುರಂಧರ್ 2’ ಸಿನಿಮಾವನ್ನು ಸರಿಯಾಗಿ ಅಂದಾಜಿಸದೆ ಅದರ ಎದುರು ಬಿಡುಗಡೆ ಮಾಡಿತು. ಆದರೆ ಈಗ ಬಾಕ್ಸ್ ಆಫೀಸ್​​ನಲ್ಲಿ ಏದುಸಿರು ಬಿಡುತ್ತಿದೆ. ಆದರೆ ಸಂಪೂರ್ಣ ಸೋಲೊಪ್ಪಿಕೊಂಡಿಲ್ಲ.

ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ನಿರ್ದೇಶಕ ಹರೀಶ್ ಶಂಕರ್ ಕಾಂಬಿನೇಷನ್‌ನ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 26ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ ‘ಟಾಕ್ಸಿಕ್’ ರಿಲೀಸ್ ಪೋಸ್ಟ್ ಪೋನ್ ಆದ ಕಾರಣ ಆ ಸ್ಥಾನಕ್ಕೆ ಮುಂಬಡ್ತಿ ಪಡೆದುಕೊಂಡು ‘ಧುರಂಧರ್ 2’ ಸಿನಿಮಾದ ಎದುರು ಮಾರ್ಚ್ 19ರಂದೇ ಬಿಡುಗಡೆ ಆಯ್ತು. ಆದರೆ ಇದರಿಂದ ಮೊದಲ ದಿನದಿಂದಲೂ ಸಿನಿಮಾಕ್ಕೆ ನಷ್ಟ ಆಗುತ್ತಲೇ ಇದೆ. ‘ಧುರಂಧರ್ 2’ ಸಿನಿಮಾದಿಂದಾಗಿ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಪ್ರೀಮಿಯರ್ ಶೋಗಳು ಸಿಗಲಿಲ್ಲ. ಇದರಿಂದ ಭಾರಿ ನಷ್ಟವಾಯ್ತು. ಬಿಡುಗಡೆಯ ಬಳಿಕೆ ಬಾಕ್ಸ್ ಆಫೀಸ್​​ನಲ್ಲೂ ಸಹ ಹಿನ್ನಡೆ ಉಂಟಾಗಿದೆ.

ಈ ಭಾನುವಾರಕ್ಕೆ ಸಿನಿಮಾ ಬಿಡುಗಡೆ ಆಗಿ ನಾಲ್ಕು ದಿನಗಳಾಗಿದೆ. ಭಾನುವಾರ ಭಾರತದ ಬಾಕ್ಸ್ ಆಫೀಸ್​​ನಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಗಳಿಸಿದ್ದು 6.59 ಕೋಟಿ ರೂಪಾಯಿ ಮಾತ್ರ. ಇದರೊಂದಿಗೆ ನಾಲ್ಕು ದಿನಗಳ ಒಟ್ಟು ಭಾರತದ ನೆಟ್ ಕಲೆಕ್ಷನ್ 59.39 ಕೋಟಿ ರೂಪಾಯಿಗೆ ತಲುಪಿದೆ. ಪವನ್ ಸಿನಿಮಾಕ್ಕೆ ಇದು ದೊಡ್ಡ ಮೊತ್ತವಲ್ಲ. ವಾರದ ರಜೆ ಇದ್ದರೂ ಚಿತ್ರದ ಗಳಿಕೆಯಲ್ಲಿ ಹೆಚ್ಚಿನ ಏರಿಕೆ ಕಂಡುಬಂದಿಲ್ಲದಿರುವುದು ‘ಧುರಂಧರ್ 2’ ಎಫೆಕ್ಟ್ ಅನ್ನು ತೋರಿಸುತ್ತಿದೆ.

ಇದನ್ನೂ ಓದಿ:‘ಧುರಂಧರ್ 2’ ಕತೆ ನಡೆಯುವುದು ಪಾಕಿಸ್ತಾನದಲ್ಲಿ, ಆದರೆ ಚಿತ್ರೀಕರಣ ಆಗಿದ್ದೆಲ್ಲಿ?

ಪವನ್ ಕಲ್ಯಾಣ್ ಅವರ ಕಳೆದ ವರ್ಷದ ಹಿಟ್ ಚಿತ್ರಗಳಾದ ‘OG’ ಮೊದಲ ದಿನವೇ 60 ಕೋಟಿಗೂ ಅಧಿಕ ಮೊತ್ತ ಕಲೆ ಹಾಕಿತ್ತು. ಅದಕ್ಕೂ ಮುಂಚೆ ಬಿಡುಗಡೆ ಆಗಿದ್ದ ಬಹಳ ಸಾಧಾರಣ ಸಿನಿಮಾ ಆಗಿದ್ದ ‘ಹರಿ ಹರ ವೀರ ಮಲ್ಲು’ ಕಲೆಕ್ಷನ್ ಸಹ ಇದಕ್ಕಿಂತ ಉತ್ತಮವಾಗಿತ್ತು. ಆ ಎರಡು ಸಿನಿಮಾಗಳಿಗೆ ಹೋಲಿಸಿದರೆ ‘ಉಸ್ತಾದ್ ಭಗತ್ ಸಿಂಗ್’ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದೆ.

ಮೂರು ದಿನಗಳ ಅಂತ್ಯಕ್ಕೆ ಚಿತ್ರವು ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ 71.67 ಕೋಟಿ ರೂ. ಕಲೆಕ್ಷನ್ ಮಾಡಿದೆ. ಇದರಲ್ಲಿ ವಿದೇಶಿ ಮಾರುಕಟ್ಟೆಯಿಂದ ಸುಮಾರು 9.25 ಕೋಟಿ ರೂ. ಬಂದಿದೆ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಸಿನಿಮಾ ತೆಲುಗು ರಾಜ್ಯಗಳಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ವಿಶೇಷವೆಂದರೆ, ಹೈದರಾಬಾದ್‌ನಂತಹ ನಗರ ಪ್ರದೇಶಗಳಲ್ಲಿ ‘ಉಸ್ತಾದ್ ಭಗತ್ ಸಿಂಗ್’ಗಿಂತ ‘ಧುರಂಧರ್ 2’ ಚಿತ್ರಕ್ಕೇ ಹೆಚ್ಚಿನ ಜನರು ಆಕರ್ಷಿತರಾಗುತ್ತಿದ್ದಾರೆ.

‘ಉಸ್ತಾದ್ ಭಗತ ಸಿಂಗ್’ ಸಿನಿಮಾದ ಒಟ್ಟು ಬಜೆಟ್ ಸುಮಾರು 150 ಕೋಟಿ ರೂ. ಎನ್ನಲಾಗಿದ್ದು, ಚಿತ್ರವು ಲಾಭದಾಯಕ ಎನಿಸಿಕೊಳ್ಳಲು ಕನಿಷ್ಠ 200 ಕೋಟಿ ರೂ. ಕಲೆಕ್ಷನ್ ಮಾಡಬೇಕಿದೆ. ಪ್ರಸ್ತುತ ಇರುವ ಮಿಶ್ರ ಪ್ರತಿಕ್ರಿಯೆ ಮತ್ತು ‘ಧುರಂಧರ್ 2’ ಹವಾ ನೋಡಿದರೆ, ಈ ಗುರಿಯನ್ನು ಮುಟ್ಟುವುದು ಚಿತ್ರತಂಡಕ್ಕೆ ದೊಡ್ಡ ಸವಾಲಾಗಿದೆ. ನಿರ್ದೇಶಕ ಹರೀಶ್ ಶಂಕರ್ ಅವರು ಈ ಹಿಂದೆ ‘ಗಬ್ಬರ್ ಸಿಂಗ್’ ಮೂಲಕ ನೀಡಿದ್ದ ಮ್ಯಾಜಿಕ್ ಈ ಬಾರಿ ಮರುಕಳಿಸಿಲ್ಲ ಎಂಬುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ