AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೆ ಮುಂಚೆಯೇ ‘ಧುರಂಧರ್ 2’ ಇಂದಾಗಿ ಉಸ್ತಾದ್ ಭಗತ್ ಸಿಂಗ್​​ಗೆ ಕೋಟ್ಯಂತರ ರೂಪಾಯಿ ನಷ್ಟ

Ustaad Bhagat Singh: ‘ಟಾಕ್ಸಿಕ್’ ಸಿನಿಮಾ ಸಹ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿತ್ತು, ಆದರೆ ಬಿಡುಗಡೆ ಮುಂದೂಡಲ್ಪಟ್ಟಿತು. ಆದರೆ ‘ಟಾಕ್ಸಿಕ್’ ಮುಂದೂಡಿಕೆ ಬಳಿಕ ಆ ಸ್ಥಾನಕ್ಕೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಬಂದಿತ್ತು. ‘ಧುರಂಧರ್ 2’ ಜೊತೆಗೆ ಬಿಡುಗಡೆ ಆಗುವುದು ಆರ್ಥಿಕವಾಗಿ ಅಪಾಯಕಾರಿ ಎಂಬ ಮಾತುಗಳು ಕೇಳಿ ಬಂದಿದ್ದವು. ಅದೀಗ ನಿಜವಾಗಿದೆ. ಸಿನಿಮಾ ಬಿಡುಗಡೆಗೆ ಮುಂಚೆಯೇ ‘ಧುರಂಧರ್ 2’ ಸಿನಿಮಾದಿಂದಾಗಿ ಕೋಟ್ಯಂತರ ರೂಪಾಯಿ ನಷ್ಟವನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಅನುಭವಿಸಿದೆ.

ಬಿಡುಗಡೆಗೆ ಮುಂಚೆಯೇ ‘ಧುರಂಧರ್ 2’ ಇಂದಾಗಿ ಉಸ್ತಾದ್ ಭಗತ್ ಸಿಂಗ್​​ಗೆ ಕೋಟ್ಯಂತರ ರೂಪಾಯಿ ನಷ್ಟ
Dhurandhar 2 Bhagat Singh
ಮಂಜುನಾಥ ಸಿ.
|

Updated on: Mar 08, 2026 | 4:47 PM

Share

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿದೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಹಾಗಾಗಿ ಸಹಜವಾಗಿಯೇ ಸಿನಿಮಾದ ಎರಡನೇ ಭಾಗದ ಬಗ್ಗೆ ಭಾರಿ ನಿರೀಕ್ಷೆಗಳಿವೆ. ‘ಧುರಂಧರ್ 2’ ಸಿನಿಮಾಕ್ಕೆ ಹೆದರಿ ಹಲವು ಸಿನಿಮಾಗಳು ಬಿಡುಗಡೆ ದಿನಾಂಕ ಬದಲಿಸಿವೆ. ‘ಟಾಕ್ಸಿಕ್’ ಸಿನಿಮಾ ಸಹ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿತ್ತು, ಆದರೆ ಬಿಡುಗಡೆ ಮುಂದೂಡಲ್ಪಟ್ಟಿತು. ಆದರೆ ‘ಟಾಕ್ಸಿಕ್’ ಮುಂದೂಡಿಕೆ ಬಳಿಕ ಆ ಸ್ಥಾನಕ್ಕೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಬಂದಿತ್ತು. ‘ಧುರಂಧರ್ 2’ ಜೊತೆಗೆ ಬಿಡುಗಡೆ ಆಗುವುದು ಆರ್ಥಿಕವಾಗಿ ಅಪಾಯಕಾರಿ ಎಂಬ ಮಾತುಗಳು ಕೇಳಿ ಬಂದಿದ್ದವು. ಅದೀಗ ನಿಜವಾಗಿದೆ. ಸಿನಿಮಾ ಬಿಡುಗಡೆಗೆ ಮುಂಚೆಯೇ ‘ಧುರಂಧರ್ 2’ ಸಿನಿಮಾದಿಂದಾಗಿ ಕೋಟ್ಯಂತರ ರೂಪಾಯಿ ನಷ್ಟವನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಅನುಭವಿಸಿದೆ.

ತೆಲುಗಿನ ದೊಡ್ಡ ನಟರ ಸಿನಿಮಾಗಳು ಬಿಡುಗಡೆ ಆಗುವುದಕ್ಕೆ ಒಂದು ದಿನ ಮುಂಚಿತವಾಗಿ ಪ್ರೀಮಿಯರ್ ಶೋ, ಫ್ಯಾನ್ಸ್ ಶೋ, ಬೆನಿಫಿಟ್ ಶೋಗಳನ್ನು ಹಾಕುವುದು ರೂಢಿ. ಈ ಶೋಗಳ ಟಿಕೆಟ್ ಬೆಲೆ ಹೆಚ್ಚಿರುತ್ತದೆ. ಇದರಿಂದ ನಿರ್ಮಾಪಕರಿಗೆ, ಚಿತ್ರಮಂದಿರದವರಿಗೆ ಒಳ್ಳೆಯ ಲಾಭ ಆಗುತ್ತದೆ. ಸಿನಿಮಾ ಕೆಟ್ಟದಾಗಿದ್ದರೂ ಪ್ರೀಮಿಯರ್ ಶೋಗಳಿಂದ ಒಳ್ಳೆಯ ಮೊತ್ತವೇ ಗಳಿಕೆ ಆಗುತ್ತದೆ. ಪವನ್ ಕಲ್ಯಾಣ್ ಅವರ ಈ ಹಿಂದಿನ ಎರಡು ಸಿನಿಮಾಗಳಿಗೆ ಪ್ರೀಮಿಯರ್ ಶೋ ಆಯೋಜಿಸಲಾಗಿದ್ದು, ಒಳ್ಳೆಯ ಮೊತ್ತವನ್ನೇ ಕಲೆಕ್ಟ್ ಮಾಡಲಾಗಿತ್ತು. ಆದರೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಪ್ರೀಮಿಯರ್ ಶೋ ಅನ್ನು ಪ್ರದರ್ಶಿಸಲಾಗುತ್ತಿಲ್ಲ ಇದಕ್ಕೆ ಕಾರಣ ‘ಧುರಂಧರ್ 2’.

ಮಾರ್ಚ್ 18ರ ರಾತ್ರಿ 10 ಗಂಟೆಗೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಪ್ರೀಮಿಯರ್ ಶೋಗಳನ್ನು ನಡೆಸಲು ಯೋಜಿಸಲಾಗಿತ್ತು. ಆದರೆ ಈಗ ಅದನ್ನು ರದ್ದುಗೊಳಿಸುವ ಸಾಧ್ಯತೆ ದಟ್ಟವಾಗಿದೆ. ಮಾರ್ಚ್ 18ರಂದೇ ಸಂಜೆ 5 ಗಂಟೆಗೆ ‘ಧುರಂಧರ್ 2’ ಚಿತ್ರದ ಪ್ರೀಮಿಯರ್ ಶೋಗಳು ಆರಂಭವಾಗಲಿವೆ. ಈ ಚಿತ್ರವು ಸುಮಾರು ನಾಲ್ಕು ಗಂಟೆಗಳ ಸುದೀರ್ಘ ಅವಧಿಯದಾಗಿದೆ. ಹೈದರಾಬಾದ್​​ನಲ್ಲಿಯೂ ಸಹ ‘ಧುರಂಧರ್ 2’ ಪ್ರೀಮಿಯರ್ ಶೋ ದೊಡ್ಡ ಸಂಖ್ಯೆಯಲ್ಲಿ ಆಯೋಜನೆಗೊಂಡಿದೆ.

ಇದನ್ನೂ ಓದಿ:‘ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌: 24 ಗಂಟೆಯಲ್ಲಿ 8 ಕೋಟಿ ರೂ. ಬೆಲೆಯ ಟಿಕೆಟ್ ಸೇಲ್

ಸತತವಾಗಿ ನಾಲ್ಕು ಗಂಟೆಗಳ ಕಾಲ ಒಂದು ಸಿನಿಮಾವನ್ನು ನೋಡಿದ ಪ್ರೇಕ್ಷಕರು, ತಕ್ಷಣವೇ ಮತ್ತೊಂದು ದೊಡ್ಡ ಸಿನಿಮಾವನ್ನು ನೋಡಲು ಆಸಕ್ತಿ ತೋರುವುದು ಕಷ್ಟ ಎಂಬುದು ವಿತರಕರ ಅಭಿಪ್ರಾಯ. ಅಲ್ಲದೆ, ಮಲ್ಟಿಪ್ಲೆಕ್ಸ್ ಸೇರಿದಂತೆ ಹೆಚ್ಚಿನ ಚಿತ್ರಮಂದಿರಗಳು ‘ಧುರಂಧರ್ 2’ ಚಿತ್ರಕ್ಕೆ ಆದ್ಯತೆ ನೀಡುತ್ತಿರುವುದರಿಂದ, ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಹೆಚ್ಚಿನ ಸ್ಕ್ರೀನ್‌ಗಳು ಸಿಗುವುದು ಕಷ್ಟವಾಗಬಹುದು ಹೀಗಾಗಿ ಸಿನಿಮಾದ ಪ್ರೀಮಿಯರ್ ಶೋ ಯೋಜನೆಯನ್ನೇ ನಿರ್ಮಾಪಕರು ಕೈಬಿಟ್ಟಿದ್ದಾರೆ.

ವಿತರಕರ ಸಲಹೆಯ ಮೇರೆಗೆ ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆಯು ಮಾರ್ಚ್ 18ರ ಪ್ರೀಮಿಯರ್ ಶೋಗಳನ್ನು ಕೈಬಿಟ್ಟು, ಮಾರ್ಚ್ 19ರ ಬೆಳ್ಳಂಬೆಳಿಗ್ಗೆ ‘ಬೆನಿಫಿಟ್ ಶೋ’ಗಳನ್ನು ನಡೆಸಲು ಚಿಂತಿಸುತ್ತಿದೆ. ಚಿತ್ರದ ಬಗ್ಗೆ ಈಗಾಗಲೇ ಒಳ್ಳೆಯ ಕುತೂಹಲ ಇರುವುದರಿಂದ, ನೇರವಾಗಿ ಬಿಡುಗಡೆಯ ದಿನವೇ ಪ್ರದರ್ಶನ ಆರಂಭಿಸುವುದು ಚಿತ್ರದ ಯಶಸ್ಸಿಗೆ ಪೂರಕವಾಗಲಿದೆ ಎಂದು ಚಿತ್ರತಂಡದ ಅಭಿಪ್ರಾಯ. ಎರಡು ದೊಡ್ಡ ಸಿನಿಮಾಗಳ ನಡುವಿನ ಸಂಘರ್ಷವನ್ನು ತಪ್ಪಿಸಲು ಚಿತ್ರತಂಡ ತೆಗೆದುಕೊಂಡ ಈ ನಿರ್ಧಾರ ಜಾಣತನದಿಂದ ಕೂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ