ಇದೇ ಮೊದಲ ಬಾರಿಗೆ ವೈಷ್ಣವಿ ವಿರುದ್ಧ ಒಟ್ಟಾಗಿ ತಿರುಗಿಬಿದ್ದ ಮನೆ ಮಂದಿ; ಬಿಕ್ಕಿ ಬಿಕ್ಕಿ ಅತ್ತ ಸನ್ನಿಧಿ

ಮನೆಯಲ್ಲಿ ಅತಿ ಹೆಚ್ಚು ಜಗಳ ಆಗುವುದು, ಮಿಸ್​ ಅಂಡರ್​​​ಸ್ಟ್ಯಾಂಡಿಗ್​ ಹುಟ್ಟಿಕೊಳ್ಳುವುದು ಅಡುಗೆ ಮನೆಯ ವಿಚಾರಕ್ಕೆ. ಈಗ ವೈಷ್ಣವಿ ಬಗ್ಗೆ ಅಸಮಾಧಾನ ಹುಟ್ಟಿಕೊಳ್ಳಲು ಕಾರಣವಾಗಿದ್ದು ಇದೇ ಅಡುಗೆ ಮನೆ.

ಇದೇ ಮೊದಲ ಬಾರಿಗೆ ವೈಷ್ಣವಿ ವಿರುದ್ಧ ಒಟ್ಟಾಗಿ ತಿರುಗಿಬಿದ್ದ ಮನೆ ಮಂದಿ; ಬಿಕ್ಕಿ ಬಿಕ್ಕಿ ಅತ್ತ ಸನ್ನಿಧಿ
ವೈಷ್ಣವಿ ಗೌಡ
Follow us
|

Updated on: May 07, 2021 | 7:20 PM

ಬಿಗ್ ಬಾಸ್​ ಮನೆಯಲ್ಲಿ ವೈಷ್ಣವಿ ಗೌಡ ಯಾರ ತಂಟೆಗೂ ಹೋಗುವವರಲ್ಲ. ತಾವಾಯಿತು ತಮ್ಮ ಕೆಲಸವಾಯಿತು ಎಂದು ಸುಮ್ಮನಿದ್ದು ಬಿಡುತ್ತಾರೆ. ಇತ್ತೀಚೆಗೆ ಅವರು ಮನೆಯವರ ಜತೆ ಹೆಚ್ಚು ಬೆರೆಯುತ್ತಿದ್ದಾರೆ. ಆದಾಗ್ಯೂ ಅವರು ಎಂದಿಗೂ ಲಿಮಿಟ್​ ಕ್ರಾಸ್​ ಮಾಡಿಲ್ಲ. ಆದರೆ, ಈಗ ಮನೆ ಮಂದಿ ಎಲ್ಲರೂ ವೈಷ್ಣವಿ ಬಗ್ಗೆ ಒಟ್ಟಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಇದನ್ನು ನೋಡಿದ ವೈಷ್ಣವಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಮನೆಯಲ್ಲಿ ಅತಿ ಹೆಚ್ಚು ಜಗಳ ಆಗುವುದು, ಮಿಸ್​ ಅಂಡರ್​​​ಸ್ಟ್ಯಾಂಡಿಗ್​ ಹುಟ್ಟಿಕೊಳ್ಳುವುದು ಅಡುಗೆ ಮನೆಯ ವಿಚಾರಕ್ಕೆ. ಈಗ ವೈಷ್ಣವಿ ಬಗ್ಗೆ ಅಸಮಾಧಾನ ಹುಟ್ಟಿಕೊಳ್ಳಲು ಕಾರಣವಾಗಿದ್ದು ಇದೇ ಅಡುಗೆ ಮನೆ. ಬಿಗ್​ ಬಾಸ್​ ಮನೆ ಸೇರಿದ ದಿನದಿಂದಲೂ ವೈಷ್ಣವಿ ಅಡುಗೆ ಮನೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಅವರ ಕೈರುಚಿ ಎಲ್ಲರಿಗೂ ಇಷ್ಟವಾಗಿದೆ. ಕೆಲ ವಾರಗಳ ಹಿಂದೆ ಕಿಚ್ಚ ಸುದೀಪ್​ ಎದುರು ವೈಷ್ಣವಿ ಅಡುಗೆ ಬಗ್ಗೆ ಮನೆ ಮಂದಿ ಹೊಗಳಿದ್ದರು. ಶಮಂತ್​ ಬ್ರೋ ಗೌಡ ಅವರಂತೂ ವೈಷ್ಣವಿ ಮಾಡುವ ಅಡುಗೆಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಈಗ ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ವೈಷ್ಣವಿ ಕಡಿಮೆ ಅಡುಗೆ ಮಾಡಿದ್ದಾರೆ ಹಾಗೂ ಅಡುಗೆ ಮಾಡುವುದು ತಡವಾಗಿದೆ. ಇದಕ್ಕೆ ಮನೆಯವರು ವೈಷ್ಣವಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಎಲ್ಲರೂ ಮಾಡಿದ ಅಡುಗೆ ಕಡಿಮೆ ಆಯಿತು ಎಂದಿದ್ದಾರೆ. ಇದಕ್ಕೆ ವೈಷ್ಣವಿ ಅತ್ತಿದ್ದಾರೆ. ನನ್ನ ಕೈಯ್ಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ನಾನು ಮಾಡುತ್ತೇನೆ. ನಮ್ಮವರು ಅಂದುಕೊಂಡವರೇ ಈ ರೀತಿ ಪ್ರತಿಕ್ರಿಯಿಸಿದರೆ ಯಾರು ನನ್ನನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ರಘು ಗೌಡ ಟಾಸ್ಕ್​ ಪ್ರಾಪರ್ಟಿ ಮುಟ್ಟಿದ್ದಾರೆ. ಇದರಿಂದ ಮನೆಯ ಎಲ್ಲಾ ಸದಸ್ಯರಿಗೆ ಟೀ, ಕಾಫಿ ಹಾಗೂ ಹಾಲನ್ನು ಬಿಗ್​ ಬಾಸ್​ ತಾತ್ಕಾಲಿಕವಾಗಿ ರದ್ದು ಮಾಡಿದ್ದಾರೆ. ಮನೆ ಮಂದಿ ಇಷ್ಟು ದಿನ ಹಾಲು, ಟೀ ಕುಡಿದು ಹಸಿವನ್ನು ತಡೆದಿಟ್ಟುಕೊಳ್ಳುತ್ತಿದ್ದರು. ಈಗ ಅದು ಇಲ್ಲದಾಗಿದೆ. ಹೀಗಾಗಿ ಎಲ್ಲಾ ಸ್ಪರ್ಧಿಗಳಿಗೆ ಹೊಟ್ಟೆ ತುಂಬಿಸಿಕೊಳ್ಳಲು ಊಟ ಒಂದೇ ಆಯ್ಕೆಆಗಿದೆ.

ಇದನ್ನೂ ಓದಿ: Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ