Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ವೈಷ್ಣವಿ ವಿರುದ್ಧ ಒಟ್ಟಾಗಿ ತಿರುಗಿಬಿದ್ದ ಮನೆ ಮಂದಿ; ಬಿಕ್ಕಿ ಬಿಕ್ಕಿ ಅತ್ತ ಸನ್ನಿಧಿ

ಮನೆಯಲ್ಲಿ ಅತಿ ಹೆಚ್ಚು ಜಗಳ ಆಗುವುದು, ಮಿಸ್​ ಅಂಡರ್​​​ಸ್ಟ್ಯಾಂಡಿಗ್​ ಹುಟ್ಟಿಕೊಳ್ಳುವುದು ಅಡುಗೆ ಮನೆಯ ವಿಚಾರಕ್ಕೆ. ಈಗ ವೈಷ್ಣವಿ ಬಗ್ಗೆ ಅಸಮಾಧಾನ ಹುಟ್ಟಿಕೊಳ್ಳಲು ಕಾರಣವಾಗಿದ್ದು ಇದೇ ಅಡುಗೆ ಮನೆ.

ಇದೇ ಮೊದಲ ಬಾರಿಗೆ ವೈಷ್ಣವಿ ವಿರುದ್ಧ ಒಟ್ಟಾಗಿ ತಿರುಗಿಬಿದ್ದ ಮನೆ ಮಂದಿ; ಬಿಕ್ಕಿ ಬಿಕ್ಕಿ ಅತ್ತ ಸನ್ನಿಧಿ
ವೈಷ್ಣವಿ ಗೌಡ
Follow us
ರಾಜೇಶ್ ದುಗ್ಗುಮನೆ
|

Updated on: May 07, 2021 | 7:20 PM

ಬಿಗ್ ಬಾಸ್​ ಮನೆಯಲ್ಲಿ ವೈಷ್ಣವಿ ಗೌಡ ಯಾರ ತಂಟೆಗೂ ಹೋಗುವವರಲ್ಲ. ತಾವಾಯಿತು ತಮ್ಮ ಕೆಲಸವಾಯಿತು ಎಂದು ಸುಮ್ಮನಿದ್ದು ಬಿಡುತ್ತಾರೆ. ಇತ್ತೀಚೆಗೆ ಅವರು ಮನೆಯವರ ಜತೆ ಹೆಚ್ಚು ಬೆರೆಯುತ್ತಿದ್ದಾರೆ. ಆದಾಗ್ಯೂ ಅವರು ಎಂದಿಗೂ ಲಿಮಿಟ್​ ಕ್ರಾಸ್​ ಮಾಡಿಲ್ಲ. ಆದರೆ, ಈಗ ಮನೆ ಮಂದಿ ಎಲ್ಲರೂ ವೈಷ್ಣವಿ ಬಗ್ಗೆ ಒಟ್ಟಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಇದನ್ನು ನೋಡಿದ ವೈಷ್ಣವಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಮನೆಯಲ್ಲಿ ಅತಿ ಹೆಚ್ಚು ಜಗಳ ಆಗುವುದು, ಮಿಸ್​ ಅಂಡರ್​​​ಸ್ಟ್ಯಾಂಡಿಗ್​ ಹುಟ್ಟಿಕೊಳ್ಳುವುದು ಅಡುಗೆ ಮನೆಯ ವಿಚಾರಕ್ಕೆ. ಈಗ ವೈಷ್ಣವಿ ಬಗ್ಗೆ ಅಸಮಾಧಾನ ಹುಟ್ಟಿಕೊಳ್ಳಲು ಕಾರಣವಾಗಿದ್ದು ಇದೇ ಅಡುಗೆ ಮನೆ. ಬಿಗ್​ ಬಾಸ್​ ಮನೆ ಸೇರಿದ ದಿನದಿಂದಲೂ ವೈಷ್ಣವಿ ಅಡುಗೆ ಮನೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಅವರ ಕೈರುಚಿ ಎಲ್ಲರಿಗೂ ಇಷ್ಟವಾಗಿದೆ. ಕೆಲ ವಾರಗಳ ಹಿಂದೆ ಕಿಚ್ಚ ಸುದೀಪ್​ ಎದುರು ವೈಷ್ಣವಿ ಅಡುಗೆ ಬಗ್ಗೆ ಮನೆ ಮಂದಿ ಹೊಗಳಿದ್ದರು. ಶಮಂತ್​ ಬ್ರೋ ಗೌಡ ಅವರಂತೂ ವೈಷ್ಣವಿ ಮಾಡುವ ಅಡುಗೆಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಈಗ ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ವೈಷ್ಣವಿ ಕಡಿಮೆ ಅಡುಗೆ ಮಾಡಿದ್ದಾರೆ ಹಾಗೂ ಅಡುಗೆ ಮಾಡುವುದು ತಡವಾಗಿದೆ. ಇದಕ್ಕೆ ಮನೆಯವರು ವೈಷ್ಣವಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಎಲ್ಲರೂ ಮಾಡಿದ ಅಡುಗೆ ಕಡಿಮೆ ಆಯಿತು ಎಂದಿದ್ದಾರೆ. ಇದಕ್ಕೆ ವೈಷ್ಣವಿ ಅತ್ತಿದ್ದಾರೆ. ನನ್ನ ಕೈಯ್ಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ನಾನು ಮಾಡುತ್ತೇನೆ. ನಮ್ಮವರು ಅಂದುಕೊಂಡವರೇ ಈ ರೀತಿ ಪ್ರತಿಕ್ರಿಯಿಸಿದರೆ ಯಾರು ನನ್ನನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ರಘು ಗೌಡ ಟಾಸ್ಕ್​ ಪ್ರಾಪರ್ಟಿ ಮುಟ್ಟಿದ್ದಾರೆ. ಇದರಿಂದ ಮನೆಯ ಎಲ್ಲಾ ಸದಸ್ಯರಿಗೆ ಟೀ, ಕಾಫಿ ಹಾಗೂ ಹಾಲನ್ನು ಬಿಗ್​ ಬಾಸ್​ ತಾತ್ಕಾಲಿಕವಾಗಿ ರದ್ದು ಮಾಡಿದ್ದಾರೆ. ಮನೆ ಮಂದಿ ಇಷ್ಟು ದಿನ ಹಾಲು, ಟೀ ಕುಡಿದು ಹಸಿವನ್ನು ತಡೆದಿಟ್ಟುಕೊಳ್ಳುತ್ತಿದ್ದರು. ಈಗ ಅದು ಇಲ್ಲದಾಗಿದೆ. ಹೀಗಾಗಿ ಎಲ್ಲಾ ಸ್ಪರ್ಧಿಗಳಿಗೆ ಹೊಟ್ಟೆ ತುಂಬಿಸಿಕೊಳ್ಳಲು ಊಟ ಒಂದೇ ಆಯ್ಕೆಆಗಿದೆ.

ಇದನ್ನೂ ಓದಿ: Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್