Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

Bigg Boss 8: ಮೇ 6ರ ಎಪಿಸೋಡ್​ನಲ್ಲಿ ದಿವ್ಯಾ ಸುರೇಶ್​ ಜತೆ ವೈಷ್ಣವಿ ಮಾತನಾಡುತ್ತಾ ಕುಳಿತಿದ್ದರು. ಈ ವೇಳೆ ವೈಷ್ಣವಿ ಅವರು ಮದುವೆ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ.

Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ
ವೈಷ್ಣವಿ ಗೌಡ
Follow us
| Updated By: Digi Tech Desk

Updated on:May 07, 2021 | 9:27 AM

ವೈಷ್ಣವಿ ಅವರದ್ದು ಎಲ್ಲರಿಗೂ ಇಷ್ಟವಾಗುವ ಗುಣ. ಹೀಗಾಗಿ, ಅವರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದು ತುಂಬಾನೇ ಕಡಿಮೆ. ನಾಮಿನೇಟ್​ ಆದರೂ ಅವರು ಸುಲಭವಾಗಿ ಬಚಾವ್​ ಆಗಿದ್ದಾರೆ. ಈ ಮಧ್ಯೆ ಅವರು ಅನೇಕ ಬಾರಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹೇಳಿಕೊಂಡಿದ್ದಾರೆ. ಈಗ ಅವರು ತಾವು ಮದುವೆ ಬಗ್ಗೆ ಹೊಂದಿರುವ ಕನಸಿನ ಬಗ್ಗೆ ಹೇಳಿಕೊಂಡಿದ್ದಾರೆ.

ಮೇ 6ರ ಎಪಿಸೋಡ್​ನಲ್ಲಿ ದಿವ್ಯಾ ಸುರೇಶ್​ ಜತೆ ವೈಷ್ಣವಿ ಮಾತನಾಡುತ್ತಾ ಕುಳಿತಿದ್ದರು. ಈ ವೇಳೆ ವೈಷ್ಣವಿ ಅವರು ಮದುವೆ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ನಾನು ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ. ಮದುವೆ ಕಾನ್ಸೆಪ್ಟ್ ಅಂದ್ರೆ ಇಷ್ಟ. ಪ್ರೀತಿ ಬಗ್ಗೆ ನಂಗೆ ಅತಿಯಾದ ನಂಬಿಕೆ ಇದೆ ಎಂದು ವೈಷ್ಣವಿ ಹೇಳಿದ್ದಾರೆ.

ಮದುವೆ ಆದರೆ ನನ್ನವರು ಅಂತ ಒಬ್ಬರು ಇರ್ತಾರೆ. ಕುಟುಂಬ ಹಾಗೂ ಸಹೋದರರ ಜತೆ ಎಲ್ಲವನ್ನೂ ಹೇಳಿಕೊಳ್ಳೋಕೆ ಆಗಲ್ಲ. ಆದರೆ, ಗಂಡನ ಜತೆ ಬಹುತೇಕ ವಿಚಾರಗಳನ್ನು ಶೇರ್​ ಮಾಡಿಕೊಳ್ಳಬಹುದು. ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ. ನನ್ನವರು ಅಂತ ತುಂಬಾ ಕಡಿಮೆ. ನಂಗೆ ಒಂದು ಕನೆಕ್ಷನ್​ ಬೇಕು ಎಂದರು ವೈಷ್ಣವಿ. ಈ ಮೂಲಕ ವೈಷ್ಣವಿ ಪ್ರೀತಿ ಮಾಡಬೇಕು ಎನ್ನುವ ವಿಚಾರ ಬಿಚ್ಚಿಟ್ಟರು.

ಈ ಮೊದಲು ಬಿಗ್​ ಬಾಸ್​ ಮನೆಯಲ್ಲಿ ಪ್ರೀತಿ ವಿಚಾರ ಮಾತನಾಡಿದ್ದರು. ಚಿಕ್ಕ ವಯಸ್ಸಿನಿಂದಲೂ ನನಗೆ ಲವ್​ ಮಾಡಬೇಕು, ರಿಲೇಷನ್​ಶಿಪ್​ನಲ್ಲಿ ಇರಬೇಕು ಎಂಬ ಆಸೆ ಇತ್ತು. ನನ್ನ ಸ್ನೇಹಿತೆಯರೆಲ್ಲ ರಿಲೇಷನ್​ಶಿಪ್​ನಲ್ಲಿ ಇದ್ದರು. ತಮಗೆ ಬಾಯ್​ಫ್ರೆಂಡ್​ ಇದಾನೆ ಅಂತ ಹೇಳಿಕೊಳ್ತಾ ಇದ್ದರು. ಆದರೆ ನಂಗೆ ಲವ್​ ಆಗಿರಲಿಲ್ಲ. ನನಗೇನು ಕಡಿಮೆ ಆಗಿದೆ? ನಾನು ಯಾಕೆ ಯಾವಾಗಲೂ ಸಿಂಗಲ್​ ಆಗಿ ಇರುತ್ತೇನೆ? ಎಂದಿದ್ದರು ವೈಷ್ಣವಿ.

ಇದನ್ನೂ ಓದಿ: ಹೀಗೆ ಆದರೆ ಒಂದು ದಿನ ಸರ್ಜರಿ ಮಾಡಬೇಕಾಗುತ್ತದೆ!; ವೈಷ್ಣವಿಗೆ ಸುದೀಪ್​ ಎಚ್ಚರಿಕೆ

ನಾನೇ ಮುಂದೆ ನಿಂತು ಮದುವೆ ಮಾಡಿಸುತ್ತೇನೆ; ಬಿಗ್​ ಬಾಸ್​ ಮನೆಯಲ್ಲಿ ಶಮಂತ್​-ಪ್ರಿಯಾಂಕಾ ಪ್ರೇಮಕಥೆ ಆರಂಭ?

Published On - 9:21 am, Fri, 7 May 21

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ