AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

Bigg Boss 8: ಮೇ 6ರ ಎಪಿಸೋಡ್​ನಲ್ಲಿ ದಿವ್ಯಾ ಸುರೇಶ್​ ಜತೆ ವೈಷ್ಣವಿ ಮಾತನಾಡುತ್ತಾ ಕುಳಿತಿದ್ದರು. ಈ ವೇಳೆ ವೈಷ್ಣವಿ ಅವರು ಮದುವೆ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ.

Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ
ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on:May 07, 2021 | 9:27 AM

Share

ವೈಷ್ಣವಿ ಅವರದ್ದು ಎಲ್ಲರಿಗೂ ಇಷ್ಟವಾಗುವ ಗುಣ. ಹೀಗಾಗಿ, ಅವರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದು ತುಂಬಾನೇ ಕಡಿಮೆ. ನಾಮಿನೇಟ್​ ಆದರೂ ಅವರು ಸುಲಭವಾಗಿ ಬಚಾವ್​ ಆಗಿದ್ದಾರೆ. ಈ ಮಧ್ಯೆ ಅವರು ಅನೇಕ ಬಾರಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹೇಳಿಕೊಂಡಿದ್ದಾರೆ. ಈಗ ಅವರು ತಾವು ಮದುವೆ ಬಗ್ಗೆ ಹೊಂದಿರುವ ಕನಸಿನ ಬಗ್ಗೆ ಹೇಳಿಕೊಂಡಿದ್ದಾರೆ.

ಮೇ 6ರ ಎಪಿಸೋಡ್​ನಲ್ಲಿ ದಿವ್ಯಾ ಸುರೇಶ್​ ಜತೆ ವೈಷ್ಣವಿ ಮಾತನಾಡುತ್ತಾ ಕುಳಿತಿದ್ದರು. ಈ ವೇಳೆ ವೈಷ್ಣವಿ ಅವರು ಮದುವೆ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ನಾನು ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ. ಮದುವೆ ಕಾನ್ಸೆಪ್ಟ್ ಅಂದ್ರೆ ಇಷ್ಟ. ಪ್ರೀತಿ ಬಗ್ಗೆ ನಂಗೆ ಅತಿಯಾದ ನಂಬಿಕೆ ಇದೆ ಎಂದು ವೈಷ್ಣವಿ ಹೇಳಿದ್ದಾರೆ.

ಮದುವೆ ಆದರೆ ನನ್ನವರು ಅಂತ ಒಬ್ಬರು ಇರ್ತಾರೆ. ಕುಟುಂಬ ಹಾಗೂ ಸಹೋದರರ ಜತೆ ಎಲ್ಲವನ್ನೂ ಹೇಳಿಕೊಳ್ಳೋಕೆ ಆಗಲ್ಲ. ಆದರೆ, ಗಂಡನ ಜತೆ ಬಹುತೇಕ ವಿಚಾರಗಳನ್ನು ಶೇರ್​ ಮಾಡಿಕೊಳ್ಳಬಹುದು. ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ. ನನ್ನವರು ಅಂತ ತುಂಬಾ ಕಡಿಮೆ. ನಂಗೆ ಒಂದು ಕನೆಕ್ಷನ್​ ಬೇಕು ಎಂದರು ವೈಷ್ಣವಿ. ಈ ಮೂಲಕ ವೈಷ್ಣವಿ ಪ್ರೀತಿ ಮಾಡಬೇಕು ಎನ್ನುವ ವಿಚಾರ ಬಿಚ್ಚಿಟ್ಟರು.

ಈ ಮೊದಲು ಬಿಗ್​ ಬಾಸ್​ ಮನೆಯಲ್ಲಿ ಪ್ರೀತಿ ವಿಚಾರ ಮಾತನಾಡಿದ್ದರು. ಚಿಕ್ಕ ವಯಸ್ಸಿನಿಂದಲೂ ನನಗೆ ಲವ್​ ಮಾಡಬೇಕು, ರಿಲೇಷನ್​ಶಿಪ್​ನಲ್ಲಿ ಇರಬೇಕು ಎಂಬ ಆಸೆ ಇತ್ತು. ನನ್ನ ಸ್ನೇಹಿತೆಯರೆಲ್ಲ ರಿಲೇಷನ್​ಶಿಪ್​ನಲ್ಲಿ ಇದ್ದರು. ತಮಗೆ ಬಾಯ್​ಫ್ರೆಂಡ್​ ಇದಾನೆ ಅಂತ ಹೇಳಿಕೊಳ್ತಾ ಇದ್ದರು. ಆದರೆ ನಂಗೆ ಲವ್​ ಆಗಿರಲಿಲ್ಲ. ನನಗೇನು ಕಡಿಮೆ ಆಗಿದೆ? ನಾನು ಯಾಕೆ ಯಾವಾಗಲೂ ಸಿಂಗಲ್​ ಆಗಿ ಇರುತ್ತೇನೆ? ಎಂದಿದ್ದರು ವೈಷ್ಣವಿ.

ಇದನ್ನೂ ಓದಿ: ಹೀಗೆ ಆದರೆ ಒಂದು ದಿನ ಸರ್ಜರಿ ಮಾಡಬೇಕಾಗುತ್ತದೆ!; ವೈಷ್ಣವಿಗೆ ಸುದೀಪ್​ ಎಚ್ಚರಿಕೆ

ನಾನೇ ಮುಂದೆ ನಿಂತು ಮದುವೆ ಮಾಡಿಸುತ್ತೇನೆ; ಬಿಗ್​ ಬಾಸ್​ ಮನೆಯಲ್ಲಿ ಶಮಂತ್​-ಪ್ರಿಯಾಂಕಾ ಪ್ರೇಮಕಥೆ ಆರಂಭ?

Published On - 9:21 am, Fri, 7 May 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?