AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

Bigg Boss 8: ಮೇ 6ರ ಎಪಿಸೋಡ್​ನಲ್ಲಿ ದಿವ್ಯಾ ಸುರೇಶ್​ ಜತೆ ವೈಷ್ಣವಿ ಮಾತನಾಡುತ್ತಾ ಕುಳಿತಿದ್ದರು. ಈ ವೇಳೆ ವೈಷ್ಣವಿ ಅವರು ಮದುವೆ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ.

Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ
ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on:May 07, 2021 | 9:27 AM

Share

ವೈಷ್ಣವಿ ಅವರದ್ದು ಎಲ್ಲರಿಗೂ ಇಷ್ಟವಾಗುವ ಗುಣ. ಹೀಗಾಗಿ, ಅವರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದು ತುಂಬಾನೇ ಕಡಿಮೆ. ನಾಮಿನೇಟ್​ ಆದರೂ ಅವರು ಸುಲಭವಾಗಿ ಬಚಾವ್​ ಆಗಿದ್ದಾರೆ. ಈ ಮಧ್ಯೆ ಅವರು ಅನೇಕ ಬಾರಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹೇಳಿಕೊಂಡಿದ್ದಾರೆ. ಈಗ ಅವರು ತಾವು ಮದುವೆ ಬಗ್ಗೆ ಹೊಂದಿರುವ ಕನಸಿನ ಬಗ್ಗೆ ಹೇಳಿಕೊಂಡಿದ್ದಾರೆ.

ಮೇ 6ರ ಎಪಿಸೋಡ್​ನಲ್ಲಿ ದಿವ್ಯಾ ಸುರೇಶ್​ ಜತೆ ವೈಷ್ಣವಿ ಮಾತನಾಡುತ್ತಾ ಕುಳಿತಿದ್ದರು. ಈ ವೇಳೆ ವೈಷ್ಣವಿ ಅವರು ಮದುವೆ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ನಾನು ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ. ಮದುವೆ ಕಾನ್ಸೆಪ್ಟ್ ಅಂದ್ರೆ ಇಷ್ಟ. ಪ್ರೀತಿ ಬಗ್ಗೆ ನಂಗೆ ಅತಿಯಾದ ನಂಬಿಕೆ ಇದೆ ಎಂದು ವೈಷ್ಣವಿ ಹೇಳಿದ್ದಾರೆ.

ಮದುವೆ ಆದರೆ ನನ್ನವರು ಅಂತ ಒಬ್ಬರು ಇರ್ತಾರೆ. ಕುಟುಂಬ ಹಾಗೂ ಸಹೋದರರ ಜತೆ ಎಲ್ಲವನ್ನೂ ಹೇಳಿಕೊಳ್ಳೋಕೆ ಆಗಲ್ಲ. ಆದರೆ, ಗಂಡನ ಜತೆ ಬಹುತೇಕ ವಿಚಾರಗಳನ್ನು ಶೇರ್​ ಮಾಡಿಕೊಳ್ಳಬಹುದು. ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ. ನನ್ನವರು ಅಂತ ತುಂಬಾ ಕಡಿಮೆ. ನಂಗೆ ಒಂದು ಕನೆಕ್ಷನ್​ ಬೇಕು ಎಂದರು ವೈಷ್ಣವಿ. ಈ ಮೂಲಕ ವೈಷ್ಣವಿ ಪ್ರೀತಿ ಮಾಡಬೇಕು ಎನ್ನುವ ವಿಚಾರ ಬಿಚ್ಚಿಟ್ಟರು.

ಈ ಮೊದಲು ಬಿಗ್​ ಬಾಸ್​ ಮನೆಯಲ್ಲಿ ಪ್ರೀತಿ ವಿಚಾರ ಮಾತನಾಡಿದ್ದರು. ಚಿಕ್ಕ ವಯಸ್ಸಿನಿಂದಲೂ ನನಗೆ ಲವ್​ ಮಾಡಬೇಕು, ರಿಲೇಷನ್​ಶಿಪ್​ನಲ್ಲಿ ಇರಬೇಕು ಎಂಬ ಆಸೆ ಇತ್ತು. ನನ್ನ ಸ್ನೇಹಿತೆಯರೆಲ್ಲ ರಿಲೇಷನ್​ಶಿಪ್​ನಲ್ಲಿ ಇದ್ದರು. ತಮಗೆ ಬಾಯ್​ಫ್ರೆಂಡ್​ ಇದಾನೆ ಅಂತ ಹೇಳಿಕೊಳ್ತಾ ಇದ್ದರು. ಆದರೆ ನಂಗೆ ಲವ್​ ಆಗಿರಲಿಲ್ಲ. ನನಗೇನು ಕಡಿಮೆ ಆಗಿದೆ? ನಾನು ಯಾಕೆ ಯಾವಾಗಲೂ ಸಿಂಗಲ್​ ಆಗಿ ಇರುತ್ತೇನೆ? ಎಂದಿದ್ದರು ವೈಷ್ಣವಿ.

ಇದನ್ನೂ ಓದಿ: ಹೀಗೆ ಆದರೆ ಒಂದು ದಿನ ಸರ್ಜರಿ ಮಾಡಬೇಕಾಗುತ್ತದೆ!; ವೈಷ್ಣವಿಗೆ ಸುದೀಪ್​ ಎಚ್ಚರಿಕೆ

ನಾನೇ ಮುಂದೆ ನಿಂತು ಮದುವೆ ಮಾಡಿಸುತ್ತೇನೆ; ಬಿಗ್​ ಬಾಸ್​ ಮನೆಯಲ್ಲಿ ಶಮಂತ್​-ಪ್ರಿಯಾಂಕಾ ಪ್ರೇಮಕಥೆ ಆರಂಭ?

Published On - 9:21 am, Fri, 7 May 21

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ