AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ

Vaishnavi Gowda: ಕಿಚನ್​ ನನಗೆ ಇಷ್ಟ. ಕುಕಿಂಗ್ ಅನ್ನೋದು​ ಆರ್ಟ್​. ಅದು ಥೆರೆಪಿ. ಅಡುಗೆ ಮಾಡಿ ಬಡಿಸೋಕೆ ನನಗೆ ಖುಷಿ ಆಗ್ತಿತ್ತು. ಹೀಗಾಗಿ ನನಗೆ ಕಿಚನ್​ ಎಂದ್ರೆ ಬಹಳ ಇಷ್ಟ ಎಂದು ಲೈವ್​ ವಿಡಿಯೋದಲ್ಲಿ ವೈಷ್ಣವಿ ಹೇಳಿಕೊಂಡರು.

ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ
ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
|

Updated on:May 12, 2021 | 5:38 PM

Share

ಬಿಗ್​ ಬಾಸ್​ ಮನೆ ಸೇರಿದ ವೈಷ್ಣವಿ ಗೌಡ ಎಲ್ಲರಿಗೂ ಇಷ್ಟವಾಗಿದ್ದರು. ಎಷ್ಟೇ ಕಷ್ಟದ ಸ್ಥಿತಿ ಬಂದರೂ ಅವರು ಸಿಟ್ಟು ಮಾಡಿಕೊಳ್ಳದೇ ಮೌನ ವಹಿಸಿದ್ದೇ ಹೆಚ್ಚು. ವೈಷ್ಣವಿ ಯಾಕೆ ಹೀಗೆ? ಅವರು ನಿಜ ಜೀವನದಲ್ಲೂ ಇಷ್ಟೇ ಸೈಲೆಂಟಾ ಎಂದು ಎಲ್ಲರೂ ಪ್ರಶ್ನೆ ಕೇಳಿಕೊಳ್ಳುತ್ತಿದ್ದರು. ಇದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ವೈಷ್ಣವಿ ಲೈವ್​ ಬರುವ ಮೂಲಕ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಕಲರ್ಸ್​ ಕನ್ನಡ ಫೇಸ್​ಬುಕ್​ ಖಾತೆ ಮೂಲಕ ವೈಷ್ಣವಿ ಲೈವ್​ ಬಂದಿದ್ದಾರೆ. ಈ ವೇಳೆ ಅವರಿಗೆ ಸಾಕಷ್ಟು ಪ್ರಶ್ನೆಗಳು ಎದುರಾಯ್ತು. ಅದರಲ್ಲಿ ಹೈಲೈಟ್​ ಆಗಿದ್ದು ‘ನೀವೇಕೆ ಬಿಗ್​ ಬಾಸ್​ ಮನೆಯಲ್ಲಿ ಅಷ್ಟು ಸೈಲೆಂಟ್​ ಆಗಿದ್ದಿರಿ? ನೀವು ನಿಜ ಜೀವನದಲ್ಲೂ ಅದೇ ರೀತಿಯೆ’ ಎನ್ನುವ ಪ್ರಶ್ನೆ. ಇದಕ್ಕೆ ವೈಷ್ಣವಿ ಉತ್ತರ ನೀಡಿದ್ದಾರೆ.

‘ನಾನು ನಿಜ ಜೀವನದಲ್ಲೂ ಅಷ್ಟೇ ಸೈಲೆಂಟ್. ನಾನು ಹೆಚ್ಚು ಮಾತನಾಡುವುದಿಲ್ಲ. ನನಗೆ ಭಾವನೆಗಳು ಇವೆ. ಬರೀ ಕೋಪದಿಂದ ಮಾತ್ರ ಪರಿಸ್ಥಿತಿಯನ್ನು ಸರಿ ಮಾಡೋಕೆ ಆಗಲ್ಲ. ಸಿಚುವೇಷನ್​ ಹ್ಯಾಂಡಲ್​ ಮಾಡೋಕೆ ನಾನಾ ವಿಧಾನಗಳಿವೆ. ನಾನು ಯಾವಾಗಲೂ ಶಾಂತವಾಗಿರೋಕೆ ಬಯಸುತ್ತೇನೆ. ಬಿಗ್​ ಬಾಸ್​ ಮನೆ ಒಳಗೆ ಶಾಂತಿ ಹರಡೋಕೆ ನಾನು ಹೋಗಿದ್ದೆ’ ಎಂದರು ವೈಷ್ಣವಿ.

ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟೂ ದಿನ ವೈಷ್ಣವಿ ಮದುವೆ ಬಗ್ಗೆ ಮಾತನಾಡಿದ್ದರು. ನಾನೂ ಒಂದು ಮದುವೆ ಆಗಬೇಕು ಎಂದು ಹೇಳಿದ್ದರು. ಈಗ ಅವರು ಮನೆಯಿಂದ ಹೊರ ಬರುತ್ತಿದ್ದಂತೆ ಸಾಕಷ್ಟು ಮದುವೆ ಪ್ರಪೋಸ್​ ಬಂದಿದೆಯಂತೆ. ‘ನಿಮ್ಮ ಮೆಸೇಜ್​, ಕಮೆಂಟ್​ ಹಾಗೂ ನಿಮ್ಮ ಬೆಂಬಲವನ್ನು ನೋಡಿ ನನಗೆ ಖುಷಿ ಆಗ್ತಿದೆ. ಹೆಚ್ಚು ಮ್ಯಾರೇಜ್​ ಪ್ರಪೋಸಲ್​ ಕೂಡ ಬಂದಿದೆ. ಇದನ್ನೆಲ್ಲ ನೋಡಿ ಖುಷಿ ಆಗ್ತಿದೆ’ ಎಂದರು ವೈಷ್ಣವಿ.

ಕಿಚನ್​ ನನಗೆ ಇಷ್ಟ. ಕುಕಿಂಗ್ ಅನ್ನೋದು​ ಆರ್ಟ್​. ಅದು ಥೆರೆಪಿ. ಅಡುಗೆ ಮಾಡಿ ಬಡಿಸೋಕೆ ನನಗೆ ಖುಷಿ ಆಗ್ತಿತ್ತು. ಹೀಗಾಗಿ ನನಗೆ ಕಿಚನ್​ ಎಂದ್ರೆ ಬಹಳ ಇಷ್ಟ ಎಂದು ಲೈವ್​ ವಿಡಿಯೋದಲ್ಲಿ ವೈಷ್ಣವಿ ಹೇಳಿಕೊಂಡರು.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ವೈಷ್ಣವಿ ವಿರುದ್ಧ ಒಟ್ಟಾಗಿ ತಿರುಗಿಬಿದ್ದ ಮನೆ ಮಂದಿ; ಬಿಕ್ಕಿ ಬಿಕ್ಕಿ ಅತ್ತ ಸನ್ನಿಧಿ

ನಮ್ಮ ಬಗ್ಗೆ ಆ ರೀತಿ ಮಾತಾಡಬೇಡಿ;- ರಘು ವಿಚಾರದಲ್ಲಿ ವೈಷ್ಣವಿಗೆ ಘಾಸಿ ಮಾಡಿದ ಶುಭಾ ಪೂಂಜಾ!

Published On - 5:35 pm, Wed, 12 May 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ