AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ

Vaishnavi Gowda: ಕಿಚನ್​ ನನಗೆ ಇಷ್ಟ. ಕುಕಿಂಗ್ ಅನ್ನೋದು​ ಆರ್ಟ್​. ಅದು ಥೆರೆಪಿ. ಅಡುಗೆ ಮಾಡಿ ಬಡಿಸೋಕೆ ನನಗೆ ಖುಷಿ ಆಗ್ತಿತ್ತು. ಹೀಗಾಗಿ ನನಗೆ ಕಿಚನ್​ ಎಂದ್ರೆ ಬಹಳ ಇಷ್ಟ ಎಂದು ಲೈವ್​ ವಿಡಿಯೋದಲ್ಲಿ ವೈಷ್ಣವಿ ಹೇಳಿಕೊಂಡರು.

ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ
ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
|

Updated on:May 12, 2021 | 5:38 PM

Share

ಬಿಗ್​ ಬಾಸ್​ ಮನೆ ಸೇರಿದ ವೈಷ್ಣವಿ ಗೌಡ ಎಲ್ಲರಿಗೂ ಇಷ್ಟವಾಗಿದ್ದರು. ಎಷ್ಟೇ ಕಷ್ಟದ ಸ್ಥಿತಿ ಬಂದರೂ ಅವರು ಸಿಟ್ಟು ಮಾಡಿಕೊಳ್ಳದೇ ಮೌನ ವಹಿಸಿದ್ದೇ ಹೆಚ್ಚು. ವೈಷ್ಣವಿ ಯಾಕೆ ಹೀಗೆ? ಅವರು ನಿಜ ಜೀವನದಲ್ಲೂ ಇಷ್ಟೇ ಸೈಲೆಂಟಾ ಎಂದು ಎಲ್ಲರೂ ಪ್ರಶ್ನೆ ಕೇಳಿಕೊಳ್ಳುತ್ತಿದ್ದರು. ಇದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ವೈಷ್ಣವಿ ಲೈವ್​ ಬರುವ ಮೂಲಕ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಕಲರ್ಸ್​ ಕನ್ನಡ ಫೇಸ್​ಬುಕ್​ ಖಾತೆ ಮೂಲಕ ವೈಷ್ಣವಿ ಲೈವ್​ ಬಂದಿದ್ದಾರೆ. ಈ ವೇಳೆ ಅವರಿಗೆ ಸಾಕಷ್ಟು ಪ್ರಶ್ನೆಗಳು ಎದುರಾಯ್ತು. ಅದರಲ್ಲಿ ಹೈಲೈಟ್​ ಆಗಿದ್ದು ‘ನೀವೇಕೆ ಬಿಗ್​ ಬಾಸ್​ ಮನೆಯಲ್ಲಿ ಅಷ್ಟು ಸೈಲೆಂಟ್​ ಆಗಿದ್ದಿರಿ? ನೀವು ನಿಜ ಜೀವನದಲ್ಲೂ ಅದೇ ರೀತಿಯೆ’ ಎನ್ನುವ ಪ್ರಶ್ನೆ. ಇದಕ್ಕೆ ವೈಷ್ಣವಿ ಉತ್ತರ ನೀಡಿದ್ದಾರೆ.

‘ನಾನು ನಿಜ ಜೀವನದಲ್ಲೂ ಅಷ್ಟೇ ಸೈಲೆಂಟ್. ನಾನು ಹೆಚ್ಚು ಮಾತನಾಡುವುದಿಲ್ಲ. ನನಗೆ ಭಾವನೆಗಳು ಇವೆ. ಬರೀ ಕೋಪದಿಂದ ಮಾತ್ರ ಪರಿಸ್ಥಿತಿಯನ್ನು ಸರಿ ಮಾಡೋಕೆ ಆಗಲ್ಲ. ಸಿಚುವೇಷನ್​ ಹ್ಯಾಂಡಲ್​ ಮಾಡೋಕೆ ನಾನಾ ವಿಧಾನಗಳಿವೆ. ನಾನು ಯಾವಾಗಲೂ ಶಾಂತವಾಗಿರೋಕೆ ಬಯಸುತ್ತೇನೆ. ಬಿಗ್​ ಬಾಸ್​ ಮನೆ ಒಳಗೆ ಶಾಂತಿ ಹರಡೋಕೆ ನಾನು ಹೋಗಿದ್ದೆ’ ಎಂದರು ವೈಷ್ಣವಿ.

ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟೂ ದಿನ ವೈಷ್ಣವಿ ಮದುವೆ ಬಗ್ಗೆ ಮಾತನಾಡಿದ್ದರು. ನಾನೂ ಒಂದು ಮದುವೆ ಆಗಬೇಕು ಎಂದು ಹೇಳಿದ್ದರು. ಈಗ ಅವರು ಮನೆಯಿಂದ ಹೊರ ಬರುತ್ತಿದ್ದಂತೆ ಸಾಕಷ್ಟು ಮದುವೆ ಪ್ರಪೋಸ್​ ಬಂದಿದೆಯಂತೆ. ‘ನಿಮ್ಮ ಮೆಸೇಜ್​, ಕಮೆಂಟ್​ ಹಾಗೂ ನಿಮ್ಮ ಬೆಂಬಲವನ್ನು ನೋಡಿ ನನಗೆ ಖುಷಿ ಆಗ್ತಿದೆ. ಹೆಚ್ಚು ಮ್ಯಾರೇಜ್​ ಪ್ರಪೋಸಲ್​ ಕೂಡ ಬಂದಿದೆ. ಇದನ್ನೆಲ್ಲ ನೋಡಿ ಖುಷಿ ಆಗ್ತಿದೆ’ ಎಂದರು ವೈಷ್ಣವಿ.

ಕಿಚನ್​ ನನಗೆ ಇಷ್ಟ. ಕುಕಿಂಗ್ ಅನ್ನೋದು​ ಆರ್ಟ್​. ಅದು ಥೆರೆಪಿ. ಅಡುಗೆ ಮಾಡಿ ಬಡಿಸೋಕೆ ನನಗೆ ಖುಷಿ ಆಗ್ತಿತ್ತು. ಹೀಗಾಗಿ ನನಗೆ ಕಿಚನ್​ ಎಂದ್ರೆ ಬಹಳ ಇಷ್ಟ ಎಂದು ಲೈವ್​ ವಿಡಿಯೋದಲ್ಲಿ ವೈಷ್ಣವಿ ಹೇಳಿಕೊಂಡರು.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ವೈಷ್ಣವಿ ವಿರುದ್ಧ ಒಟ್ಟಾಗಿ ತಿರುಗಿಬಿದ್ದ ಮನೆ ಮಂದಿ; ಬಿಕ್ಕಿ ಬಿಕ್ಕಿ ಅತ್ತ ಸನ್ನಿಧಿ

ನಮ್ಮ ಬಗ್ಗೆ ಆ ರೀತಿ ಮಾತಾಡಬೇಡಿ;- ರಘು ವಿಚಾರದಲ್ಲಿ ವೈಷ್ಣವಿಗೆ ಘಾಸಿ ಮಾಡಿದ ಶುಭಾ ಪೂಂಜಾ!

Published On - 5:35 pm, Wed, 12 May 21

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ