AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ

Vaishnavi Gowda: ಕಿಚನ್​ ನನಗೆ ಇಷ್ಟ. ಕುಕಿಂಗ್ ಅನ್ನೋದು​ ಆರ್ಟ್​. ಅದು ಥೆರೆಪಿ. ಅಡುಗೆ ಮಾಡಿ ಬಡಿಸೋಕೆ ನನಗೆ ಖುಷಿ ಆಗ್ತಿತ್ತು. ಹೀಗಾಗಿ ನನಗೆ ಕಿಚನ್​ ಎಂದ್ರೆ ಬಹಳ ಇಷ್ಟ ಎಂದು ಲೈವ್​ ವಿಡಿಯೋದಲ್ಲಿ ವೈಷ್ಣವಿ ಹೇಳಿಕೊಂಡರು.

ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ
ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
|

Updated on:May 12, 2021 | 5:38 PM

Share

ಬಿಗ್​ ಬಾಸ್​ ಮನೆ ಸೇರಿದ ವೈಷ್ಣವಿ ಗೌಡ ಎಲ್ಲರಿಗೂ ಇಷ್ಟವಾಗಿದ್ದರು. ಎಷ್ಟೇ ಕಷ್ಟದ ಸ್ಥಿತಿ ಬಂದರೂ ಅವರು ಸಿಟ್ಟು ಮಾಡಿಕೊಳ್ಳದೇ ಮೌನ ವಹಿಸಿದ್ದೇ ಹೆಚ್ಚು. ವೈಷ್ಣವಿ ಯಾಕೆ ಹೀಗೆ? ಅವರು ನಿಜ ಜೀವನದಲ್ಲೂ ಇಷ್ಟೇ ಸೈಲೆಂಟಾ ಎಂದು ಎಲ್ಲರೂ ಪ್ರಶ್ನೆ ಕೇಳಿಕೊಳ್ಳುತ್ತಿದ್ದರು. ಇದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ವೈಷ್ಣವಿ ಲೈವ್​ ಬರುವ ಮೂಲಕ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಕಲರ್ಸ್​ ಕನ್ನಡ ಫೇಸ್​ಬುಕ್​ ಖಾತೆ ಮೂಲಕ ವೈಷ್ಣವಿ ಲೈವ್​ ಬಂದಿದ್ದಾರೆ. ಈ ವೇಳೆ ಅವರಿಗೆ ಸಾಕಷ್ಟು ಪ್ರಶ್ನೆಗಳು ಎದುರಾಯ್ತು. ಅದರಲ್ಲಿ ಹೈಲೈಟ್​ ಆಗಿದ್ದು ‘ನೀವೇಕೆ ಬಿಗ್​ ಬಾಸ್​ ಮನೆಯಲ್ಲಿ ಅಷ್ಟು ಸೈಲೆಂಟ್​ ಆಗಿದ್ದಿರಿ? ನೀವು ನಿಜ ಜೀವನದಲ್ಲೂ ಅದೇ ರೀತಿಯೆ’ ಎನ್ನುವ ಪ್ರಶ್ನೆ. ಇದಕ್ಕೆ ವೈಷ್ಣವಿ ಉತ್ತರ ನೀಡಿದ್ದಾರೆ.

‘ನಾನು ನಿಜ ಜೀವನದಲ್ಲೂ ಅಷ್ಟೇ ಸೈಲೆಂಟ್. ನಾನು ಹೆಚ್ಚು ಮಾತನಾಡುವುದಿಲ್ಲ. ನನಗೆ ಭಾವನೆಗಳು ಇವೆ. ಬರೀ ಕೋಪದಿಂದ ಮಾತ್ರ ಪರಿಸ್ಥಿತಿಯನ್ನು ಸರಿ ಮಾಡೋಕೆ ಆಗಲ್ಲ. ಸಿಚುವೇಷನ್​ ಹ್ಯಾಂಡಲ್​ ಮಾಡೋಕೆ ನಾನಾ ವಿಧಾನಗಳಿವೆ. ನಾನು ಯಾವಾಗಲೂ ಶಾಂತವಾಗಿರೋಕೆ ಬಯಸುತ್ತೇನೆ. ಬಿಗ್​ ಬಾಸ್​ ಮನೆ ಒಳಗೆ ಶಾಂತಿ ಹರಡೋಕೆ ನಾನು ಹೋಗಿದ್ದೆ’ ಎಂದರು ವೈಷ್ಣವಿ.

ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟೂ ದಿನ ವೈಷ್ಣವಿ ಮದುವೆ ಬಗ್ಗೆ ಮಾತನಾಡಿದ್ದರು. ನಾನೂ ಒಂದು ಮದುವೆ ಆಗಬೇಕು ಎಂದು ಹೇಳಿದ್ದರು. ಈಗ ಅವರು ಮನೆಯಿಂದ ಹೊರ ಬರುತ್ತಿದ್ದಂತೆ ಸಾಕಷ್ಟು ಮದುವೆ ಪ್ರಪೋಸ್​ ಬಂದಿದೆಯಂತೆ. ‘ನಿಮ್ಮ ಮೆಸೇಜ್​, ಕಮೆಂಟ್​ ಹಾಗೂ ನಿಮ್ಮ ಬೆಂಬಲವನ್ನು ನೋಡಿ ನನಗೆ ಖುಷಿ ಆಗ್ತಿದೆ. ಹೆಚ್ಚು ಮ್ಯಾರೇಜ್​ ಪ್ರಪೋಸಲ್​ ಕೂಡ ಬಂದಿದೆ. ಇದನ್ನೆಲ್ಲ ನೋಡಿ ಖುಷಿ ಆಗ್ತಿದೆ’ ಎಂದರು ವೈಷ್ಣವಿ.

ಕಿಚನ್​ ನನಗೆ ಇಷ್ಟ. ಕುಕಿಂಗ್ ಅನ್ನೋದು​ ಆರ್ಟ್​. ಅದು ಥೆರೆಪಿ. ಅಡುಗೆ ಮಾಡಿ ಬಡಿಸೋಕೆ ನನಗೆ ಖುಷಿ ಆಗ್ತಿತ್ತು. ಹೀಗಾಗಿ ನನಗೆ ಕಿಚನ್​ ಎಂದ್ರೆ ಬಹಳ ಇಷ್ಟ ಎಂದು ಲೈವ್​ ವಿಡಿಯೋದಲ್ಲಿ ವೈಷ್ಣವಿ ಹೇಳಿಕೊಂಡರು.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ವೈಷ್ಣವಿ ವಿರುದ್ಧ ಒಟ್ಟಾಗಿ ತಿರುಗಿಬಿದ್ದ ಮನೆ ಮಂದಿ; ಬಿಕ್ಕಿ ಬಿಕ್ಕಿ ಅತ್ತ ಸನ್ನಿಧಿ

ನಮ್ಮ ಬಗ್ಗೆ ಆ ರೀತಿ ಮಾತಾಡಬೇಡಿ;- ರಘು ವಿಚಾರದಲ್ಲಿ ವೈಷ್ಣವಿಗೆ ಘಾಸಿ ಮಾಡಿದ ಶುಭಾ ಪೂಂಜಾ!

Published On - 5:35 pm, Wed, 12 May 21

Follow Us
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್