AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ

Vaishnavi Gowda: ಕಿಚನ್​ ನನಗೆ ಇಷ್ಟ. ಕುಕಿಂಗ್ ಅನ್ನೋದು​ ಆರ್ಟ್​. ಅದು ಥೆರೆಪಿ. ಅಡುಗೆ ಮಾಡಿ ಬಡಿಸೋಕೆ ನನಗೆ ಖುಷಿ ಆಗ್ತಿತ್ತು. ಹೀಗಾಗಿ ನನಗೆ ಕಿಚನ್​ ಎಂದ್ರೆ ಬಹಳ ಇಷ್ಟ ಎಂದು ಲೈವ್​ ವಿಡಿಯೋದಲ್ಲಿ ವೈಷ್ಣವಿ ಹೇಳಿಕೊಂಡರು.

ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ
ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
|

Updated on:May 12, 2021 | 5:38 PM

Share

ಬಿಗ್​ ಬಾಸ್​ ಮನೆ ಸೇರಿದ ವೈಷ್ಣವಿ ಗೌಡ ಎಲ್ಲರಿಗೂ ಇಷ್ಟವಾಗಿದ್ದರು. ಎಷ್ಟೇ ಕಷ್ಟದ ಸ್ಥಿತಿ ಬಂದರೂ ಅವರು ಸಿಟ್ಟು ಮಾಡಿಕೊಳ್ಳದೇ ಮೌನ ವಹಿಸಿದ್ದೇ ಹೆಚ್ಚು. ವೈಷ್ಣವಿ ಯಾಕೆ ಹೀಗೆ? ಅವರು ನಿಜ ಜೀವನದಲ್ಲೂ ಇಷ್ಟೇ ಸೈಲೆಂಟಾ ಎಂದು ಎಲ್ಲರೂ ಪ್ರಶ್ನೆ ಕೇಳಿಕೊಳ್ಳುತ್ತಿದ್ದರು. ಇದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ವೈಷ್ಣವಿ ಲೈವ್​ ಬರುವ ಮೂಲಕ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಕಲರ್ಸ್​ ಕನ್ನಡ ಫೇಸ್​ಬುಕ್​ ಖಾತೆ ಮೂಲಕ ವೈಷ್ಣವಿ ಲೈವ್​ ಬಂದಿದ್ದಾರೆ. ಈ ವೇಳೆ ಅವರಿಗೆ ಸಾಕಷ್ಟು ಪ್ರಶ್ನೆಗಳು ಎದುರಾಯ್ತು. ಅದರಲ್ಲಿ ಹೈಲೈಟ್​ ಆಗಿದ್ದು ‘ನೀವೇಕೆ ಬಿಗ್​ ಬಾಸ್​ ಮನೆಯಲ್ಲಿ ಅಷ್ಟು ಸೈಲೆಂಟ್​ ಆಗಿದ್ದಿರಿ? ನೀವು ನಿಜ ಜೀವನದಲ್ಲೂ ಅದೇ ರೀತಿಯೆ’ ಎನ್ನುವ ಪ್ರಶ್ನೆ. ಇದಕ್ಕೆ ವೈಷ್ಣವಿ ಉತ್ತರ ನೀಡಿದ್ದಾರೆ.

‘ನಾನು ನಿಜ ಜೀವನದಲ್ಲೂ ಅಷ್ಟೇ ಸೈಲೆಂಟ್. ನಾನು ಹೆಚ್ಚು ಮಾತನಾಡುವುದಿಲ್ಲ. ನನಗೆ ಭಾವನೆಗಳು ಇವೆ. ಬರೀ ಕೋಪದಿಂದ ಮಾತ್ರ ಪರಿಸ್ಥಿತಿಯನ್ನು ಸರಿ ಮಾಡೋಕೆ ಆಗಲ್ಲ. ಸಿಚುವೇಷನ್​ ಹ್ಯಾಂಡಲ್​ ಮಾಡೋಕೆ ನಾನಾ ವಿಧಾನಗಳಿವೆ. ನಾನು ಯಾವಾಗಲೂ ಶಾಂತವಾಗಿರೋಕೆ ಬಯಸುತ್ತೇನೆ. ಬಿಗ್​ ಬಾಸ್​ ಮನೆ ಒಳಗೆ ಶಾಂತಿ ಹರಡೋಕೆ ನಾನು ಹೋಗಿದ್ದೆ’ ಎಂದರು ವೈಷ್ಣವಿ.

ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟೂ ದಿನ ವೈಷ್ಣವಿ ಮದುವೆ ಬಗ್ಗೆ ಮಾತನಾಡಿದ್ದರು. ನಾನೂ ಒಂದು ಮದುವೆ ಆಗಬೇಕು ಎಂದು ಹೇಳಿದ್ದರು. ಈಗ ಅವರು ಮನೆಯಿಂದ ಹೊರ ಬರುತ್ತಿದ್ದಂತೆ ಸಾಕಷ್ಟು ಮದುವೆ ಪ್ರಪೋಸ್​ ಬಂದಿದೆಯಂತೆ. ‘ನಿಮ್ಮ ಮೆಸೇಜ್​, ಕಮೆಂಟ್​ ಹಾಗೂ ನಿಮ್ಮ ಬೆಂಬಲವನ್ನು ನೋಡಿ ನನಗೆ ಖುಷಿ ಆಗ್ತಿದೆ. ಹೆಚ್ಚು ಮ್ಯಾರೇಜ್​ ಪ್ರಪೋಸಲ್​ ಕೂಡ ಬಂದಿದೆ. ಇದನ್ನೆಲ್ಲ ನೋಡಿ ಖುಷಿ ಆಗ್ತಿದೆ’ ಎಂದರು ವೈಷ್ಣವಿ.

ಕಿಚನ್​ ನನಗೆ ಇಷ್ಟ. ಕುಕಿಂಗ್ ಅನ್ನೋದು​ ಆರ್ಟ್​. ಅದು ಥೆರೆಪಿ. ಅಡುಗೆ ಮಾಡಿ ಬಡಿಸೋಕೆ ನನಗೆ ಖುಷಿ ಆಗ್ತಿತ್ತು. ಹೀಗಾಗಿ ನನಗೆ ಕಿಚನ್​ ಎಂದ್ರೆ ಬಹಳ ಇಷ್ಟ ಎಂದು ಲೈವ್​ ವಿಡಿಯೋದಲ್ಲಿ ವೈಷ್ಣವಿ ಹೇಳಿಕೊಂಡರು.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ವೈಷ್ಣವಿ ವಿರುದ್ಧ ಒಟ್ಟಾಗಿ ತಿರುಗಿಬಿದ್ದ ಮನೆ ಮಂದಿ; ಬಿಕ್ಕಿ ಬಿಕ್ಕಿ ಅತ್ತ ಸನ್ನಿಧಿ

ನಮ್ಮ ಬಗ್ಗೆ ಆ ರೀತಿ ಮಾತಾಡಬೇಡಿ;- ರಘು ವಿಚಾರದಲ್ಲಿ ವೈಷ್ಣವಿಗೆ ಘಾಸಿ ಮಾಡಿದ ಶುಭಾ ಪೂಂಜಾ!

Published On - 5:35 pm, Wed, 12 May 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!