Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಷ್ಣವಿ ಮಾಡಿದ ತಪ್ಪಿಗೆ ತಪ್ಪಲಿಲ್ಲ ಕಠಿಣ ಶಿಕ್ಷೆ; ಮನೆಯವರಿಗೆ ಸುಸ್ತೋ ಸುಸ್ತು

ವೈಷ್ಣವಿ ಅವರ ಜೋಕ್​ ಕೇಳಿ ಶುಭಾ ಪೂಂಜಾ ಅಸಮಾಧಾನಗೊಂಡಿದ್ದಾರೆ. ಇಷ್ಟೊಂದು ಕೆಟ್ಟ ಜೋಕ್​ ಅನ್ನು ನಾನು ನನ್ನ ಜೀವಮಾನದಲ್ಲೇ ಕೇಳಿಲ್ಲ. ಅವರಿಗೆ ಒಂದು ವಾರ ನೀರನ್ನೇ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ವೈಷ್ಣವಿ ಮಾಡಿದ ತಪ್ಪಿಗೆ ತಪ್ಪಲಿಲ್ಲ ಕಠಿಣ ಶಿಕ್ಷೆ; ಮನೆಯವರಿಗೆ ಸುಸ್ತೋ ಸುಸ್ತು
ವೈಷ್ಣವಿ ಗೌಡ
Follow us
ರಾಜೇಶ್ ದುಗ್ಗುಮನೆ
|

Updated on:Apr 19, 2021 | 5:13 PM

ಬಿಗ್​ ಬಾಸ್​ ಮನೆಯಲ್ಲಿ ಏನೇ ತಪ್ಪು ಮಾಡಿದರೂ ಅದಕ್ಕೊಂದು ಶಿಕ್ಷೆ ಇದ್ದೇ ಇರುತ್ತದೆ. ಬಿಗ್​ ಬಾಸ್​ ಸ್ಪರ್ಧಿಗಳು ಆದಷ್ಟು ತಪ್ಪು ಮಾಡದಿರಲಿ ಎಂಬುದನ್ನು ನೋಡಿಕೊಳ್ಳೋಕೇ ಈ ರೀತಿ ಮಾಡಲಾಗುತ್ತಿದೆ. ಈಗ ವೈಷ್ಣವಿ ಬಿಗ್​ ಬಾಸ್​ ಮನೆಯಲ್ಲಿ ತಪ್ಪೊಂದು ಮಾಡಿದ್ದಾರೆ. ಅದಕ್ಕೆ ಶಿಕ್ಷೆ ಕೂಡ ಸಿಕ್ಕಿದೆ. ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ರಘು ಗೌಡ ಹಾಗೂ ವೈಷ್ಣವಿ ಕಿಚನ್​ನಲ್ಲಿ ಪಾತ್ರೆ ತೊಳೆಯುವ ಕೆಲಸದಲ್ಲಿ ಮಗ್ನರಾಗಿದ್ದರು. ಈ ವೇಳೆ ಗಾಜಿನ ಲೋಟ​ ಒಂದು ಒಡೆದು ಹೋಗಿದೆ. ಆಗ ರಘು, ನೀನು ಕಪ್​ ಒಡೆದು ಹಾಕಿದ್ದೀಯಾ. ನಿನಗೆ ಶಿಕ್ಷೆ ಖಂಡಿತ. ಬಿಗ್​ ಬಾಸ್​ ಇವರಿಗೆ ಕಠಿಣ ಶಿಕ್ಷೆ ನೀಡಿ ಎಂದು ಕೋರಿದ್ದರು. ವೈಷ್ಣವಿಗೆ ತಾವು ಮಾಡಿದ ತಪ್ಪಿನ ಅರಿವಾಗಿದೆ. ಈ ವೇಳೆ ಬಿಗ್​ ಬಾಸ್ ಬಳಿ ಕ್ಷಮೆ ಕೂಡ ಕೇಳಿದ್ದಾರೆ.

ಈಗ ಬಿಗ್​ ಬಾಸ್​ ವೈಷ್ಣವಿಗೆ ಶಿಕ್ಷೆ ನೀಡಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ನಿಮಗೆ ನೀರು ಕುಡಿಯಬೇಕು ಎಂದರೆ ಮನೆಯ ಸದಸ್ಯರಿಗೆ ಒಂದು ಜೋಕ್​ ಹೇಳಬೇಕು. ಅಂದಾಗ ಮಾತ್ರ ನೀವು ನೀರು ಕುಡಿಯಬಹುದು ಎಂದು ಬಿಗ್​ ಬಾಸ್​ ಹೇಳಿದ್ದಾರೆ.  ಅವರು ಬಿಗ್​ ಬಾಸ್​ ಮನೆಯಲ್ಲಿ ಜೋಕ್​ ಹೇಳೋಕೆ ಒದ್ದಾಡಿದ್ದಾರೆ. ಮನೆಯವರು ವೈಷ್ಣವಿ ನಗು ಬಾರದ ಜೋಕ್​ ಕೇಳಿ ಕೇಳಿ ಸುಸ್ತ್​ ಆಗಿದ್ದಾರೆ.

ವೈಷ್ಣವಿ ಅವರ ಜೋಕ್​ ಕೇಳಿ ಶುಭಾ ಪೂಂಜಾ ಅಸಮಾಧಾನಗೊಂಡಿದ್ದಾರೆ. ಇಷ್ಟೊಂದು ಕೆಟ್ಟ ಜೋಕ್​ ಅನ್ನು ನಾನು ನನ್ನ ಜೀವಮಾನದಲ್ಲೇ ಕೇಳಿಲ್ಲ. ಅವರಿಗೆ ಒಂದು ವಾರ ನೀರನ್ನೇ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ಇನ್ನು, ವೈಷ್ಣವಿ ಜೋಕ್​ ಕೇಳಿ ಮಂಜು ಕೂಡ ಗಾಬರಿ ಆಗಿದ್ದಾರೆ. ಈ ಎಪಿಸೋಡ್​ ಇಂದು (ಏಪ್ರಿಲ್​ 19) ರಂದು ಪ್ರಸಾರವಾಗಲಿದೆ. ವೈಷ್ಣವಿ ಅವರ ಜೋಕ್​ ಕೇಳಿ ಯಾರ್ಯಾರ ಕಿವಿಯಲ್ಲಿ ರಕ್ತ ಬಂತು ಎಂಬುದು ಗೊತ್ತಿಲ್ಲ ಎಂದು ವೀಕ್ಷಕರು ಕಮೆಂಟ್​ ಹಾಕಿದ್ದಾರೆ.

ಇದನ್ನೂ ಓದಿ: ಒಮ್ಮೊಮ್ಮೆ ಕೊಲೆ ಮಾಡಬೇಕು ಅನಿಸುತ್ತೆ; ರಘು ಗೌಡ ಹೀಗೆ ಹೇಳಿದ್ದು ಯಾರಿಗೆ?

ವೈಷ್ಣವಿಗೆ ತುರ್ತಾಗಿ ಗಂಡ ಬೇಕಂತೆ! ಬಿಗ್​ ಬಾಸ್​ ಮನೆಯಲ್ಲಿ ಸನ್ನಿಧಿಯ ಹೊಸ ಬೇಡಿಕೆ

Published On - 5:11 pm, Mon, 19 April 21

ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​